Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:12 - ಪರಿಶುದ್ದ ಬೈಬಲ್‌

12 ದ್ರಾಕ್ಷಿಬಳ್ಳಿಗಳು ಒಣಗಿಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದ್ರಾಕ್ಷಾಲತೆಯು ಆಶಾಭಂಗಪಟ್ಟಿದೆ; ಅಂಜೂರದ ಗಿಡವು ಕ್ಷೀಣವಾಗಿದೆ; ದಾಳಿಂಬ, ಖರ್ಜೂರ, ಸೇಬು, ಅಂತು ಸಕಲ ವನವೃಕ್ಷಗಳು ಒಣಗಿವೆ, ಆನಂದವು ತಗ್ಗಿ ನರಜನ್ಮದವರಿಗೆ ತಪ್ಪಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:12
19 ತಿಳಿವುಗಳ ಹೋಲಿಕೆ  

ಮಾರುಕಟ್ಟೆಗಳಲ್ಲಿ ಜನರು ಈಗಲೂ ದ್ರಾಕ್ಷಾರಸವನ್ನು ಕೇಳುವರು. ಆದರೆ ಸಂತೋಷವೇ ಹೋಗಿಬಿಟ್ಟಿದೆ. ಹರ್ಷವು ಬಹುದೂರ ಒಯ್ಯಲ್ಪಟ್ಟಿದೆ.


ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. ದ್ರಾಕ್ಷಿಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. ಆದರೆ ಅವುಗಳೆಲ್ಲ ವ್ಯರ್ಥವಾಗುತ್ತವೆ.


ನಮಗೆ ಆಹಾರವು ಇಲ್ಲದೆ ಹೋಯಿತು. ಆನಂದವೂ ಸಂತೋಷವೂ ನಮ್ಮ ದೇವಾಲಯದಿಂದ ಹೊರಟುಹೋದವು.


ಹೊಲಗದ್ದೆಗಳೆಲ್ಲಾ ನಾಶವಾದವು. ಭೂಮಿಯೂ ಗೋಳಾಡುತ್ತಿರುವುದು. ಯಾಕೆಂದರೆ ಧಾನ್ಯವು ನಾಶವಾದವು. ಹೊಸ ದ್ರಾಕ್ಷಾರಸವು ಬತ್ತಿಹೋಯಿತು. ಎಣ್ಣೆಯು ಇಲ್ಲದೆಹೋಯಿತು.


ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.


ಉಗ್ರಾಣದಲ್ಲಿ ಗೋಧಿಯ ಕಾಳು ಏನಾದರೂ ಉಳಿದಿದೆಯೋ? ಇಲ್ಲ! ದ್ರಾಕ್ಷಿಬಳ್ಳಿಗಳನ್ನು, ಅಂಜೂರದ ಮರಗಳನ್ನು, ದಾಳಿಂಬದ ಮರಗಳನ್ನು, ಆಲೀವ್ ಮರಗಳನ್ನು ನೋಡಿರಿ. ಅವು ಹಣ್ಣುಗಳನ್ನು ಬಿಡುತ್ತವೋ? ಇಲ್ಲ. ಆದರೆ ಈ ದಿನದಿಂದ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ!”


ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ.


ಹೊರೊನಯಿಮಿನಿಂದ ಬರುವ ಗೋಳಾಟದ ಧ್ವನಿಯನ್ನು ಕೇಳಿರಿ. ಅದು ವಿನಾಶದ ಮತ್ತು ಗೊಂದಲದ ಧ್ವನಿ.


ದೇವರೇ, ಆ ದೇಶವನ್ನು ನೀನು ಅಭಿವೃದ್ಧಿಪಡಿಸುವೆ. ನೀನು ಆ ಜನರನ್ನು ಸಂತೋಷಪಡಿಸುವೆ. ಅವರು ತಮ್ಮ ಸಂತಸವನ್ನು ವ್ಯಕ್ತಪಡಿಸುವರು. ಅದು ಸುಗ್ಗಿಕಾಲದಲ್ಲಿರುವ ಸಂತಸದಂತೆಯೂ ಯುದ್ಧದಲ್ಲಿ ಗಳಿಸಿದ ಕೊಳ್ಳೆಯ ಪಾಲು ದೊರೆತಾಗ ಉಂಟಾಗುವ ಸಂತಸದಂತೆಯೂ ಇರುವುದು.


ನಿನ್ನ ಅಂಗಾಂಗಗಳು ದಾಳಿಂಬೆ ಮರಗಳಿಂದಲೂ ರುಚಿಕರವಾದ ಹಣ್ಣಿನ ಮರಗಳಿಂದಲೂ ಗೋರಂಟಿ,


ನೀತಿವಂತರಾದರೋ ಯೆಹೋವನ ಆಲಯದಲ್ಲಿ ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು. ನೀತಿವಂತರಾದರೋ ನಮ್ಮ ದೇವಾಲಯದ ಅಂಗಳದಲ್ಲಿ ಮೊಗ್ಗು ಬಿಡುತ್ತಿರುವ ಖರ್ಜೂರದ ಮರಗಳಂತಿರುವರು.


ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ.


ಬಳಿಕ ಅವರು ಎಷ್ಕೋಲ್ ಕಣಿವೆಗೆ ಹೋದರು. ಅಲ್ಲಿ ಅವರು ದ್ರಾಕ್ಷಾಲತೆಯಿಂದ ಒಂದು ಕೊಂಬೆಯನ್ನು ಕಡಿದರು. ಆ ಕೊಂಬೆಯಲ್ಲಿ ದ್ರಾಕ್ಷೆಯ ಗೊಂಚಲಿತ್ತು. ಅವರು ಅದನ್ನು ಒಂದು ಕೋಲಿಗೆ ಕಟ್ಟಿ ಇಬ್ಬರು ಅದನ್ನು ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಹಣ್ಣುಗಳನ್ನು ಮತ್ತು ಅಂಜೂರದ ಹಣ್ಣುಗಳನ್ನು ಹೊತ್ತುತಂದರು.


ದ್ರಾಕ್ಷಿಬಳ್ಳಿಗಳು ಸಾಯುತ್ತಲಿವೆ. ಹೊಸ ದ್ರಾಕ್ಷಾರಸವು ಹುಳಿಯಾಗಿದೆ. ಹಿಂದಿನ ಕಾಲದಲ್ಲಿ ಜನರು ಹರ್ಷಭರಿತರಾಗಿದ್ದರು. ಆದರೆ ಈಗ ಆ ಜನರು ದುಃಖದಲ್ಲಿರುತ್ತಾರೆ.


ಮರುದಿನ ಮುಂಜಾನೆ, ದೇವರು ಆ ಗಿಡವನ್ನು ತಿನ್ನಲು ಒಂದು ಹುಳವನ್ನು ಕಳುಹಿಸಿದನು. ಆ ಹುಳವು ಗಿಡವನ್ನು ತಿಂದ ನಿಮಿತ್ತ ಅದು ಬಾಡಿಹೋಗಿ ಸತ್ತಿತ್ತು.


ನಿಮ್ಮ ಬೆಳೆಗಳು ಹುಳಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು