Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:14 - ಪರಿಶುದ್ದ ಬೈಬಲ್‌

14 ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಉಪವಾಸ ದಿನವನ್ನು ಏರ್ಪಡಿಸಿರಿ; ಸಂಘವನ್ನು ಕೂಡಿಸಿರಿ; ಹಿರಿಯರನ್ನೂ ಸಮಸ್ತ ದೇಶನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ ಯೆಹೋವನಿಗೆ ಮೊರೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:14
15 ತಿಳಿವುಗಳ ಹೋಲಿಕೆ  

ಪ್ರತಿ ಮನುಷ್ಯನೂ ಪ್ರಾಣಿಯೂ ಶೋಕವಸ್ತ್ರವನ್ನು ಧರಿಸಬೇಕು. ಜನರು ದೇವರಿಗೆ ಗಟ್ಟಿಯಾಗಿ ಮೊರೆಯಿಡಬೇಕು. ಪ್ರತಿಯೊಬ್ಬನು ತನ್ನ ದುಷ್ಟಜೀವಿತವನ್ನು ಬದಲಾಯಿಸಿ ದುಷ್ಟತನ ಮಾಡುವದನ್ನು ನಿಲ್ಲಿಸಬೇಕು.


ಯೆಹೂದದ ಎಲ್ಲಾ ಜನರು ತಮ್ಮ ಹೆಂಡತಿಮಕ್ಕಳೊಂದಿಗೆ ಯೆಹೋವನೆದುರು ನಿಂತಿದ್ದರು.


ನೀವು ಏಳು ದಿನಗಳವರೆಗೆ ಅಗ್ನಿಯ ಮೂಲಕ ಯೆಹೋವನಿಗೆ ಯಜ್ಞವನ್ನು ಅರ್ಪಿಸಬೇಕು. ಎಂಟನೆಯ ದಿನದಲ್ಲಿ ಇನ್ನೊಂದು ಬಾರಿ ಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯಜ್ಞವನ್ನು ಅರ್ಪಿಸಬೇಕು. ಇದು ಪವಿತ್ರಸಭೆಯಾಗಿರುವುದು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು.


ಆ ಹಬ್ಬದ ದಿನಗಳ ಪ್ರತಿಯೊಂದು ದಿನದಲ್ಲಿ ಎಜ್ರನು ಧರ್ಮಶಾಸ್ತ್ರ ಪಾರಾಯಣ ಮಾಡಿದನು. ಮೊದಲನೆ ದಿನದಿಂದ ಪ್ರಾರಂಭಿಸಿ ಕಡೆಯ ದಿನದ ತನಕ ಇಸ್ರೇಲರೆಲ್ಲರೂ ಈ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ಎಂಟನೆಯ ದಿನದಲ್ಲಿ ಧರ್ಮಶಾಸ್ತ್ರದ ಪ್ರಕಾರ ವಿಶೇಷಕೂಟಗಳಿಗಾಗಿ ಜನರು ಒಟ್ಟಾಗಿ ಸೇರಿಬಂದರು.


ಯೇಹುವು, “ಬಾಳನಿಗೆ ಒಂದು ಪವಿತ್ರ ಸಭೆಯನ್ನು ಸೇರಿಸಿರಿ” ಎಂದು ಹೇಳಿದನು.


ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.


ನಾಯಕರೇ, ಈ ಸಂದೇಶಕ್ಕೆ ಕಿವಿಗೊಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರೇ, ನನ್ನ ಮಾತುಗಳನ್ನು ಆಲೈಸಿರಿ. ನಿಮ್ಮ ಜೀವಮಾನಕಾಲದಲ್ಲಿ ಇಂಥಾ ಸಂಗತಿ ಎಂದಾದರೂ ಸಂಭವಿಸಿದೆಯೋ? ಇಲ್ಲ! ನಿಮ್ಮ ತಂದೆಗಳ ಕಾಲದಲ್ಲಿಯಾದರೂ ಇಂಥಾ ಸಂಗತಿಗಳು ಸಂಭವಿಸಿದೆಯೋ? ಇಲ್ಲ!


ನಿನೆವೆಯ ಜನರು ದೇವರಿಂದ ಬಂದ ಸಂದೇಶವನ್ನು ನಂಬಿದರು. ಆ ಜನರು ತಮ್ಮ ಪಾಪಗಳ ಕುರಿತು ಯೋಚಿಸಲು ಉಪವಾಸ ಮಾಡಿದರು. ತಮ್ಮ ಪಶ್ಚಾತ್ತಾಪಕ್ಕೆ ಗುರುತಾಗಿ ಶೋಕವಸ್ತ್ರವನ್ನು ಧರಿಸಿದರು. ನಗರದ ಎಲ್ಲಾ ಜನರು ಹೀಗೆ ಮಾಡಿದರು. ಉನ್ನತ ಅಧಿಕಾರಿಗಳಿಂದ ಹಿಡಿದು ಕೀಳು ಜನರ ತನಕ ಹಾಗೆ ಮಾಡಿದರು.


ನಾಚಿಕೆಗೆಟ್ಟವರೇ, ನಿಮ್ಮ ಜೀವಿತವನ್ನು ಬದಲಾಯಿಸಿರಿ.


“ಯೆಹೂದ ಜನಾಂಗವು ಸತ್ತುಹೋದವರಿಗಾಗಿ ಗೋಳಾಡುವುದು. ಯೆಹೂದದ ನಗರಗಳಲ್ಲಿದ್ದ ಜನರು ದಿನೇದಿನೇ ನಿಬರ್ಲರಾಗುತ್ತಾರೆ. ಆ ಜನರು ನೆಲದ ಮೇಲೆ ಬಿದ್ದು ಬಿಡುತ್ತಾರೆ. ಜೆರುಸಲೇಮ್ ನಗರದಿಂದ ಜನರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು