Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:14 - ಪರಿಶುದ್ದ ಬೈಬಲ್‌

14 ತೀರ್ಮಾನದ ತಗ್ಗಿನಲ್ಲಿ ಅನೇಕರು ಸೇರಿದ್ದಾರೆ. ಯೆಹೋವನ ವಿಶೇಷ ದಿನವು ತೀರ್ಮಾನದ ತಗ್ಗಿನ ಹತ್ತಿರ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಇಗೋ, ನ್ಯಾಯತೀರ್ಪಿನ ಕಣಿವೆಯಲ್ಲಿ ತಂಡೋಪತಂಡವಾದ ಜನಸ್ತೋಮ! ತೀರ್ಪಿನ ಕಣಿವೆಯಲ್ಲಿರುವವರಿಗೆ ಸರ್ವೇಶ್ವರನ ದಿನ ಸನ್ನಿಹಿತ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಹಾ, ತೀರ್ಪಿನ ತಗ್ಗಿನಲ್ಲಿ ಗುಂಪು ಗುಂಪು! ತೀರ್ಪಿನ ತಗ್ಗಿನಲ್ಲಿ ಯೆಹೋವನ ದಿನವು ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತೀರ್ಮಾನದ ಕಣಿವೆಯಲ್ಲಿ ಗುಂಪು ಗುಂಪುಗಳಾಗಿ ಜನರಿದ್ದಾರೆ! ಏಕೆಂದರೆ ಯೆಹೋವ ದೇವರ ದಿವಸವು ನಿರ್ಣಯದ ತಗ್ಗಿನಲ್ಲಿ ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:14
17 ತಿಳಿವುಗಳ ಹೋಲಿಕೆ  

ಕೇಡುಮಾಡುವಂಥ ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಅವರು ನಾಯಿಗಳಂತಿದ್ದಾರೆ. ಸುನ್ನತಿ ಎಂದು ಹೇಳಿಕೊಂಡು ಅಂಗಚ್ಛೇದನೆ ಮಾಡುವವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.


ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು.


ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.


ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ.


ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.


ಆದರೆ ನಮ್ಮ ಒಡೆಯನು ಆ ದುಷ್ಟರನ್ನು ನೋಡಿ ನಗುವನು. ಅವರಿಗೆ ಬರಲಿರುವ ಆಪತ್ತುಗಳು ಆತನಿಗೆ ತಿಳಿದಿವೆ.


“ಪರ್ವತಗಳಲ್ಲಿ ಒಂದು ದೊಡ್ಡ ಶಬ್ದ ಕೇಳಿಸುತ್ತದೆ. ಆ ಶಬ್ದಕ್ಕೆ ಕಿವಿಗೊಡಿರಿ. ದೊಡ್ಡ ಜನಸಮೂಹದ ಶಬ್ದದಂತೆ ಕೇಳಿಸುತ್ತದೆ. ಅನೇಕ ರಾಜ್ಯಗಳ ಜನರು ಒಟ್ಟಾಗಿ ಸೇರುತ್ತಿದ್ದಾರೆ. ಸರ್ವಶಕ್ತನಾದ ಯೆಹೋವನು ತನ್ನ ಸೈನ್ಯವನ್ನು ಒಟ್ಟುಗೂಡಿಸುತ್ತಿದ್ದಾನೆ.


ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?


ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.


ಜನಾಂಗಗಳೇ, ಎಚ್ಚರಗೊಳ್ಳಿರಿ! ಯೆಹೋಷಾಫಾಟ್ ತಗ್ಗಿಗೆ ಬನ್ನಿರಿ. ಸುತ್ತಲಿರುವ ಜನಾಂಗಗಳಿಗೆ ತೀರ್ಪುಕೊಡಲು ನಾನು ಅಲ್ಲಿ ಕುಳಿತುಕೊಳ್ಳುವೆನು.


ಯೆಹೋವನ ನ್ಯಾಯತೀರ್ಪಿನ ದಿನವು ಬೇಗನೇ ಬರುತ್ತದೆ; ಅತ್ಯಂತ ವೇಗವಾಗಿ ಬರುತ್ತಿದೆ. ಆ ದಿನದಂದು ಜನರು ಬಹಳವಾಗಿ ದುಃಖಿಸುವರು. ಧೈರ್ಯಶಾಲಿಗಳಾದ ಸೈನಿಕರೂ ಅಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು