Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:16 - ಪರಿಶುದ್ದ ಬೈಬಲ್‌

16 ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇವಿುನಿಂದ ದನಿಗೈಯುತ್ತಾನೆ; ಭೂಮ್ಯಾಕಾಶಗಳು ನಡುಗುತ್ತವೆ. ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ ಇಸ್ರಾಯೇಲ್ಯರಿಗೆ ರಕ್ಷಣದುರ್ಗವೂ ಆಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:16
31 ತಿಳಿವುಗಳ ಹೋಲಿಕೆ  

ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.”


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಇನ್ನು ಸ್ವಲ್ಪ ಸಮಯದಲ್ಲಿ ನಾನು ಭೂಪರಲೋಕಗಳನ್ನು ಅದುರಿಸುವೆನು. ಸಮುದ್ರವನ್ನೂ ಒಣನೆಲವನ್ನೂ ಕಂಪಿಸುವೆನು,


ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.


ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು.


ಯೆಹೋವನ ಹೆಸರು ಬಲವಾದ ಗೋಪುರದಂತಿದೆ. ಒಳ್ಳೆಯವರು ಅದರೊಳಗೆ ಓಡಿಹೋಗಿ ಸುರಕ್ಷಿತವಾಗಿರುವರು.


ನನ್ನ ಸಿಟ್ಟಿನ ಭರದಲ್ಲಿ ಪ್ರಮಾಣಮಾಡಿ ಹೇಳುವುದೇನೆಂದರೆ, ಆ ಸಮಯದಲ್ಲಿ ಇಸ್ರೇಲಿನಲ್ಲಿ ಭಾರಿ ಭೂಕಂಪವಾಗುವದು.


“ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”


ನೀನೇ ನನ್ನ ಆಶ್ರಯಸ್ಥಾನ; ಶತ್ರುಗಳಿಂದ ಕಾಪಾಡುವ ಭದ್ರವಾದ ಬುರುಜು.


ಆಗ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು ಮತ್ತು ಭೂಕಂಪವೂ ಆಯಿತು. ಜನರು ಭೂಮಿಯ ಮೇಲೆ ಇರಲು ಆರಂಭಿಸಿದಂದಿನಿಂದ ಅಂತಹ ಭೀಕರ ಭೂಕಂಪವು ಎಂದೂ ಸಂಭವಿಸಿರಲಿಲ್ಲ.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.


ಅಂಥವರು ಉನ್ನತವಾದ ಸ್ಥಳದಲ್ಲಿ ಸುರಕ್ಷಿತವಾಗಿ ವಾಸಿಸುವರು. ಎತ್ತರವಾದ ಬಂಡೆಕಲ್ಲಿನ ಕೋಟೆಯೊಳಗೆ ಅವರು ಕಾಪಾಡಲ್ಪಡುವರು. ಅವರ ಬಳಿ ಆಹಾರ ಮತ್ತು ನೀರು ಯಾವಾಗಲೂ ಇರುವದು.


ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ. ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.


ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಯೆಹೋವನು ಸರ್ವಕಾಲದಲ್ಲೂ ಇರುವನು. ಯೆಹೋವನು ಸುಳ್ಳಾಡುವುದಿಲ್ಲ; ಆತನು ಮನುಷ್ಯನಂತೆ ಪದೇಪದೇ ಮನಸ್ಸನ್ನು ಬದಲಾಯಿಸುವವನಲ್ಲ” ಎಂದು ಹೇಳಿದನು.


ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.


ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.


ಆತನು ಮುಂಚೆ ಮಾತನಾಡಿದಾಗ, ಆತನ ಧ್ವನಿಯು ಭೂಮಿಯನ್ನು ನಡುಗಿಸಿತು. ಆದರೆ ಈಗ ಆತನು, “ಮತ್ತೊಂದು ಸಾರಿ ನಾನು ಭೂಮಿಯನ್ನು ನಡುಗಿಸುತ್ತೇನೆ, ಪರಲೋಕವನ್ನೂ ನಡುಗಿಸುತ್ತೇನೆ” ಎಂದು ವಾಗ್ದಾನ ಮಾಡಿದ್ದಾನೆ.


ಯೆಹೋವನು ತನ್ನ ಜನರನ್ನು ಶಕ್ತಿಶಾಲಿಗಳನ್ನಾಗಿ ಮಾಡುವನು. ಅವರು ಆತನ ನಾಮದ ಘನತೆಗೋಸ್ಕರ ಜೀವಿಸುವರು. ಇದು ಯೆಹೋವನ ನುಡಿ.


ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.


ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.


ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರೆದುಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.


ಕೆಂದರೆ ಬಲಿಷ್ಠನಾದ ಯೆಹೋವನು ಅಲ್ಲಿದ್ದಾನೆ. ಆ ದೇಶವು ತೊರೆಗಳೂ ಅಗಲವಾಗಿ ಹರಿಯುವ ನದಿಗಳೂ ಇರುವ ದೇಶವಾಗಿದೆ. ಆದರೆ ಆ ನದಿಯಲ್ಲಿ ವೈರಿಯ ದೋಣಿಯಾಗಲಿ, ಹಡಗುಗಳಾಗಲಿ ಇರುವದಿಲ್ಲ. ಆ ಹಡುಗುಗಳಲ್ಲಿ ಕೆಲಸಮಾಡುವವರೇ, ನೀವು ಅದರ ಹಗ್ಗಗಳಲ್ಲಿ ಕೆಲಸಮಾಡುವದನ್ನು ಬಿಟ್ಟುಬಿಡಿರಿ. ಹಡಗಿನ ಸ್ತಂಭವನ್ನು ನೀವು ಬಲಪಡಿಸಲಾರಿರಿ. ಹಡಗಿನ ಹಾಯಿಗಳನ್ನು ನಿಮ್ಮಿಂದ ತೆರೆಯಲು ಆಗುವದಿಲ್ಲ. ಯಾಕೆಂದರೆ ದೇವರೇ ನಮ್ಮ ನ್ಯಾಯಾಧೀಶನು. ಆತನು ಧರ್ಮಶಾಸ್ತ್ರವನ್ನು ಸಿದ್ಧಪಡಿಸಿದಾತನು. ಯೆಹೋವನೇ ನಮ್ಮ ಅರಸನು. ಆತನೇ ನಮ್ಮನ್ನು ರಕ್ಷಿಸುವನು, ನಮಗೆ ಸಂಪತ್ತನ್ನು ದಯಪಾಲಿಸುವನು. ಕೈಕಾಲು ಊನವಾದವರೂ ಸಹ ಯುದ್ಧದಲ್ಲಿ ಸಂಪತ್ತನ್ನು ಗಳಿಸುವರು.


ಯೆಹೋವನೇ, ನನ್ನನ್ನು ಹಾಳುಮಾಡಬೇಡ. ಕಷ್ಟ ಕಾಲದಲ್ಲಿ ನಾನು ನಿನ್ನನ್ನೇ ಅವಲಂಭಿಸಿರುತ್ತೇನೆ.


ಯೆಹೋವನು ಒಳ್ಳೆಯವನು. ಕಷ್ಟದ ಸಮಯದಲ್ಲಿ ಆತನು ಆಶ್ರಯಸ್ಥಾನ. ಆತನ ಮೇಲೆ ಭರವಸವಿಡುವವರನ್ನು ಸಂರಕ್ಷಿಸುತ್ತಾನೆ.


ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!


ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, ನಾನು ತಿರುಗಿ ಬರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು