Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:5 - ಪರಿಶುದ್ದ ಬೈಬಲ್‌

5 ನೀವು ನನ್ನ ಬೆಳ್ಳಿಬಂಗಾರವನ್ನು ಕದ್ದುಕೊಂಡು ಹೋದಿರಿ. ನನ್ನ ಅಮೂಲ್ಯವಾದ ಸಂಪತ್ತನ್ನು ಕೊಂಡು ಹೋಗಿ ನಿಮ್ಮ ಪೂಜಾಸ್ಥಳಗಳಲ್ಲಿ ಇಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಬೆಳ್ಳಿಬಂಗಾರಗಳನ್ನು ಅತ್ಯಮೂಲ್ಯವಾದ ಬೊಕ್ಕಸಗಳನ್ನು ದೋಚಿಕೊಂಡು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಬೆಳ್ಳಿಬಂಗಾರಗಳನ್ನು ಕಸುಕೊಂಡಿದ್ದೀರಿ, ನನ್ನ ಒಳ್ಳೊಳ್ಳೆಯ ಪ್ರಿಯವಸ್ತುಗಳನ್ನು ನಿಮ್ಮ ಸೌಧಗಳಿಗೆ ಸೂರೆಮಾಡಿಕೊಂಡು ಹೋಗಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:5
15 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಲ್ಲಿದ್ದ ಭಂಡಾರವನ್ನೆಲ್ಲಾ ಮತ್ತು ರಾಜನ ಅರಮನೆಯಲ್ಲಿದ್ದ ಭಂಡಾರವನ್ನೆಲ್ಲಾ ತೆಗೆದುಕೊಂಡು ಹೋದನು. ಇಸ್ರೇಲರ ರಾಜನಾದ ಸೊಲೊಮೋನನು ದೇವಾಲಯದಲ್ಲಿಟ್ಟಿದ್ದ ಬಂಗಾರವನ್ನೆಲ್ಲಾ ನೆಬೂಕದ್ನೆಚ್ಚರನು ತೆಗೆದುಕೊಂಡನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು.


ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು.


ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.


ಉತ್ತರದ ರಾಜನು ಯಾವ ದೇವರನ್ನೂ ಪೂಜಿಸನು, ಅವನು ಅಧಿಕಾರವನ್ನು ಪೂಜಿಸುವನು. ಅಧಿಕಾರ ಮತ್ತು ಶಕ್ತಿ ಇವುಗಳು ಅವನ ದೇವರು, ಅವನ ಪೂರ್ವಿಕರು ಅವನಷ್ಟು ಅಧಿಕಾರ ಪ್ರಿಯರಾಗಿರಲಿಲ್ಲ. ಅಧಿಕಾರ ದೇವತೆಯನ್ನು ಅವನು ಬೆಳ್ಳಿಬಂಗಾರಗಳಿಂದ, ಅಮೂಲ್ಯವಾದ ರತ್ನಾಭರಣಗಳಿಂದ ಮತ್ತು ಬೇರೆ ಕಾಣಿಕೆಗಳಿಂದ ಸೇವಿಸುವನು.


ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.


ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಇದು ಯೆಹೋವನಿಂದ ಬಂದ ಸಂದೇಶ: “ಜನರು ಇನ್ನು ಮೇಲೆ ದೇವರ ಆಣೆಯನ್ನು ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಬರುತ್ತಿದೆ. ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಬುದು ದೇವರ ಆಣೆಯ ಹಳೆಯ ರೀತಿಯಾಗಿತ್ತು.


ಆದ್ದರಿಂದ ನನ್ನ ಪರವಾಗಿ ಅವರೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: ‘ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು ನಿಮ್ಮನ್ನು ಹೊರತಂದು ನಿಮ್ಮ ಸ್ವದೇಶವಾದ ಇಸ್ರೇಲಿಗೆ ನಿಮ್ಮನ್ನು ಬರಮಾಡುವೆನು.


ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು. ಅವರು ನನ್ನ ವಿಶೇಷ ಜನರಾಗಿರುವರು. ಯಾಕೋಬನ ಜನರು ತಮಗೆ ಸೇರಿರುವದನ್ನು ಹಿಂದಕ್ಕೆ ಪಡೆದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು