Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:19 - ಪರಿಶುದ್ದ ಬೈಬಲ್‌

19 “ನೀನು ಯಾರು?” ಎಂದು ಯೋಹಾನನನ್ನು ಕೇಳುವುದಕ್ಕಾಗಿ ಜೆರುಸಲೇಮಿನ ಯೆಹೂದ್ಯರು ಯೋಹಾನನ ಬಳಿಗೆ ಕೆಲವು ಯಾಜಕರನ್ನು ಮತ್ತು ಲೇವಿಯರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೋಹಾನನು ಕೊಟ್ಟ ಸಾಕ್ಷಿ ಏನಂದರೆ - ಯೆಹೂದ್ಯರು ಯೆರೂಸಲೇವಿುನಿಂದ ಯಾಜಕರನ್ನೂ ಲೇವಿಯರನ್ನೂ ಅವನ ಬಳಿಗೆ ಕಳುಹಿಸಿ - ನೀನು ಯಾರೆಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜೆರುಜಲೆಮಾಚಿ ಜುದೆವಾಂಚ್ಯಾ ಮುಖಂಡಾನಿ ಉಲ್ಲ್ಯಾ ಯಾಜಕಾಕ್ನಿ, ಅನಿ ಲೆವಿತಾಕ್ನಿ, ಜುವಾಂವಾಕ್ಡೆ “ತಿಯಾ ಕೊನ್?” ಮನುನ್ ಇಚಾರುಸಾಟ್ನಿ ಜುವಾಂವಾಕ್ಡೆ ಧಾಡುನ್ ದಿಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:19
27 ತಿಳಿವುಗಳ ಹೋಲಿಕೆ  

ಯೆಹೂದ್ಯರು ಯೇಸುವಿನ ಸುತ್ತಲೂ ನೆರೆದರು. ಅವರು ಆತನಿಗೆ, “ಇನ್ನೆಷ್ಟುಕಾಲ ನೀನು ನಿನ್ನ ಬಗ್ಗೆ ನಮ್ಮನ್ನು ಆಶ್ಚರ್ಯಗೊಳಿಸುವೆ? ನೀನು ಕ್ರಿಸ್ತನಾಗಿದ್ದರೆ, ನಮಗೆ ಸ್ಪಷ್ಟವಾಗಿ ತಿಳಿಸು” ಎಂದು ಹೇಳಿದರು.


ಅದಕ್ಕೆ ಪೌಲನು, “ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದನು. ಅಲ್ಲದೆ ತನ್ನ ತರುವಾಯ ಬರುವಾತನಲ್ಲಿ ನಂಬಿಕೆ ಇಡಬೇಕೆಂದು ಅವರಿಗೆ ಹೇಳಿದನು. ಆ ವ್ಯಕ್ತಿಯೇ ಯೇಸು” ಎಂದನು.


‘ನಾನು ಯಾರೆಂದು ನೀವು ಯೋಚಿಸುತ್ತೀರಿ? ನಾನು ಕ್ರಿಸ್ತನಲ್ಲ. ಆತನು ನನ್ನ ತರುವಾಯ ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ’ ಎಂದು ಯೋಹಾನನು ತನ್ನ ಕಾರ್ಯವನ್ನು ಮಾಡಿ ಪೂರೈಸುತ್ತಿದ್ದಾಗ ಹೇಳಿಕೊಂಡಿದ್ದಾನೆ.


ಯೆಹೂದ್ಯರು ಯೇಸುವಿಗೆ, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತುಪಡಿಸಲು ಯಾವ ಸೂಚಕಕಾರ್ಯವನ್ನು ಮಾಡುವೆ?” ಎಂದು ಕೇಳಿದರು.


ಆದ್ದರಿಂದ ಯೆಹೂದ್ಯರು ಗುಣಹೊಂದಿದ ಆ ವ್ಯಕ್ತಿಗೆ, “ಇಂದು ಸಬ್ಬತ್‌ದಿನ. ನೀನು ಸಬ್ಬತ್‌ದಿನದಲ್ಲಿ ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು” ಎಂದರು.


ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ನಮಗೆ ತಿನ್ನಲು ಹೇಗೆ ಕೊಡಲಾದೀತು?” ಎಂದು ತಮ್ಮತಮ್ಮೊಳಗೆ ವಾಗ್ವಾದ ಮಾಡತೊಡಗಿದರು.


ಯೆಹೂದ್ಯರು ಯೇಸುವಿನ ಬಗ್ಗೆ ಗುಣುಗುಟ್ಟಿದರು. “ಪರಲೋಕದಿಂದ ಇಳಿದುಬರುವ ರೊಟ್ಟಿಯೇ ನಾನು” ಎಂದು ಆತನು ಹೇಳಿದ್ದರಿಂದ ಅವರು ಆಕ್ಷೇಪಿಸಿದರು.


“ನಿಮ್ಮಲ್ಲಿ ಯಾರಿಗಾದರೂ ಚರ್ಮರೋಗವಿದ್ದಲ್ಲಿ ಯಾಜಕನು ಹೇಳುವ ರೀತಿಯನ್ನು ಅನುಸರಿಸಬೇಕು. ನಾನು ಯಾಜಕರಿಗೆ ತಿಳಿಸಿದ ಮೇರೆಗೆ ನೀವು ಮಾಡಬೇಕು.


ಯೋಹಾನನು ಬೆಳಕಿನ (ಕ್ರಿಸ್ತನ) ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ಬಂದನು. ತನ್ನ ಮೂಲಕ ಎಲ್ಲಾ ಜನರು ಬೆಳಕಿನ ಬಗ್ಗೆ ಕೇಳಿ ನಂಬಿಕೊಳ್ಳಲೆಂದು ಅವನು ಬಂದನು.


ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ಜನರು ನಲವತ್ತಾರು ವರ್ಷಗಳ ಕಾಲ ದುಡಿದಿದ್ದಾರೆ! ನೀನು ಮೂರೇ ದಿನಗಳಲ್ಲಿ ಇದನ್ನು ಕಟ್ಟಬಲ್ಲೆಯಾ?” ಎಂದು ಕೇಳಿದರು.


ಆಗ ಆ ಮನುಷ್ಯನು ಆ ಯೆಹೂದ್ಯರ ಬಳಿಗೆ ಹೋಗಿ ತನ್ನನ್ನು ಗುಣಪಡಿಸಿದವನು ಯೇಸುವೇ ಎಂದು ತಿಳಿಸಿದನು.


ಯೇಸು ಈ ಕಾರ್ಯಗಳನ್ನು ಸಬ್ಬತ್‌ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.


ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.


ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.


ಹಬ್ಬದಲ್ಲಿ ಯೆಹೂದ್ಯರು, “ಆತನು ಎಲ್ಲಿದ್ದಾನೆ” ಎಂದು ಕೇಳುತ್ತಾ ಆತನಿಗಾಗಿ ಹುಡುಕುತ್ತಿದ್ದರು.


ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು.


ಆದ್ದರಿಂದ ಯೆಹೂದ್ಯರು, “ಯೇಸು ತನ್ನನ್ನು ತಾನೇ ಕೊಂದುಕೊಳ್ಳುವನೇ? ಅದಕ್ಕಾಗಿಯೇ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳಿದನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಯೆಹೂದ್ಯರು, “ನಾವು ನಿನ್ನನ್ನು ಸಮಾರ್ಯದವನೆಂದು ಹೇಳುತ್ತೇವೆ! ನಿನ್ನೊಳಗೆ ದೆವ್ವವು ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ” ಎಂದು ಉತ್ತರಕೊಟ್ಟರು.


ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.


ಯೆಹೂದ್ಯರು ಯೇಸುವಿಗೆ, “ಏನು? ನೀನು ಅಬ್ರಹಾಮನನ್ನು ನೋಡಿರುವಿಯೋ? ನಿನಗೆ ಐವತ್ತು ವರ್ಷವೂ ಆಗಿಲ್ಲ!” ಎಂದು ಹೇಳಿದರು.


ಯೆಹೂದ್ಯರು ಯೇಸುವನ್ನು ಕೊಲ್ಲಲು ಮತ್ತೆ ಕಲ್ಲುಗಳನ್ನು ತೆಗೆದುಕೊಂಡರು.


ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.


ನಾವು ದೇವರಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಏನೆಂದರೆ, ದೇವರು ಬೆಳಕಾಗಿದ್ದಾನೆ; ಆತನಲ್ಲಿ ಅಂಧಕಾರವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು