Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:28 - ಪರಿಶುದ್ದ ಬೈಬಲ್‌

28 ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿ ಎಂಬ ಊರಲ್ಲಿ ಈ ಸಂಗತಿಗಳೆಲ್ಲಾ ನಡೆದವು. ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದದ್ದು ಇಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೋವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದ ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿಯ ಎಂಬಲ್ಲಿ ಇದೆಲ್ಲವೂ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದೆಲ್ಲಾ ಯೊರ್ದನ್ ಹೊಳೆಯ ಆಚೇಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು. ಅಲ್ಲಿ ಯೋಹಾನನು ಸ್ನಾನ ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೊರ್ದಾನ್ ನ್ಹಯ್ಚ್ಯಾ ದಿಸ್ ಉಗಾವ್ತಲ್ಲ್ಯಾ ದಿಕ್ಕಾತ್ ಬೆಥನಿ ಮನ್ತಲೆ ಗಾಂವ್ ಹಾಯ್. ಹಿ ಸಗ್ಳಿ ಗೊಸ್ಟಿಯಾ ಘಡ್ಲ್ಯಾ. ತೆಚ್ ಜುವಾಂವ್ ಲೊಕಾಕ್ನಿ ಬಾಲ್ತಿಮ್ ದಿವ್ಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:28
6 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಜೋರ್ಡನ್ ನದಿಯ ಆಚೆಯ ದಡಕ್ಕೆ ಹೋದನು. ಯೋಹಾನನು ಮೊದಲು ದೀಕ್ಷಾಸ್ನಾನ ಕೊಡುತ್ತಿದ್ದ ಸ್ಥಳಕ್ಕೆ ಯೇಸು ಹೋಗಿ ಅಲ್ಲಿ ತಂಗಿದನು.


ಯೋಹಾನನು ಸಹ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಐನೋನ್ ಎಂಬ ಊರು ಸಲೀಮ್ ಊರಿನ ಸಮೀಪದಲ್ಲಿದೆ. ಅಲ್ಲಿ ಬೇಕಾದಷ್ಟು ನೀರಿದ್ದುದರಿಂದ ಯೋಹಾನನು ಅಲ್ಲಿ ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಜನರು ಅಲ್ಲಿಗೆ ಬಂದು ದೀಕ್ಷಾಸ್ನಾನ ತೆಗೆದುಕೊಳ್ಳುತ್ತಿದ್ದರು.


ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ಧಾಳಿ ಮಾಡಿರಿ. ಬೇತ್‌ಬಾರದವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು. ಅವರು ಎಫ್ರಾಯೀಮ್ ಕುಲದ ಎಲ್ಲ ಜನರನ್ನು ಕರೆದರು. ಅವರು ಬೇತ್‌ಬಾರಾದವರೆಗೆ ನದಿಯ ಪ್ರದೇಶವನ್ನು ಹಿಡಿದುಕೊಂಡರು.


ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.


ಅವನು, “ಆ ಪರಿಮಳದ ದ್ರವ್ಯದ ಬೆಲೆ ಮುನ್ನೂರು ಬೆಳ್ಳಿನಾಣ್ಯಗಳು. ಅದನ್ನು ಮಾರಿ ಆ ಹಣವನ್ನು ಬಡವರಿಗೆ ಕೊಡಬೇಕಿತ್ತು” ಎಂದು ಟೀಕಿಸಿದನು.


ಮರುದಿನ ಯೇಸು ಗಲಿಲಾಯಕ್ಕೆ ಹೋಗಲು ನಿರ್ಧರಿಸಿದನು. ಯೇಸು ಫಿಲಿಪ್ಪನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು