Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:45 - ಪರಿಶುದ್ದ ಬೈಬಲ್‌

45 ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಫಿಲಿಪ್ಪನು ನತಾನಯೇಲನನ್ನು ಕಂಡುಕೊಂಡು ಅವನಿಗೆ - ಯಾವನ ವಿಷಯವಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನು ನಮಗೆ ಸಿಕ್ಕಿದನು; ಆತನು ಯಾರಂದರೆ ಯೋಸೇಫನ ಮಗನಾದ ನಜರೇತಿನ ಯೇಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಫಿಲಿಪಾಕ್ ನಾಥಾನಾಯೆಲ್ ಗಾವ್ಲೊ, ತನ್ನಾ ಫಿಲಿಪಾನ್ ತೆಕಾ, “ಮೊಯ್ಜೆನ್ ಅಪ್ನಾಚ್ಯಾ ಖಾಯ್ದ್ಯಾತ್ನಿ ಅನಿ ಪ್ರವಾದ್ಯಾನಿ ಅಪ್ನಾಚ್ಯಾ ಪುಸ್ತಕಾತ್ನಿ ಕೊನಾಚ್ಯಾ ವಿಶಯಾತ್ ಲಿವಲ್ಲ್ಯಾನಾತ್ ತೊ ಅಮ್ಕಾ ಗಾವ್ಲೊ. ತೊ ನಜರೆತಾತ್ಲೊ ಜೆಜು ಜುಜೆಚೊ ಲೆಕ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:45
41 ತಿಳಿವುಗಳ ಹೋಲಿಕೆ  

ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ನಜರೇತ್ ಎಂಬ ಊರಲ್ಲಿ ವಾಸಿಸಿದನು. “ಕ್ರಿಸ್ತನನ್ನು ‘ನಜರೇತಿನವನು’ ಎಂದು ಕರೆಯುತ್ತಾರೆ” ಎಂದು ದೇವರು ಪ್ರವಾದಿಗಳ ಮೂಲಕ ಹೇಳಿದ್ದು ಹೀಗೆ ನೆರವೇರಿತು.


ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಕೊಂಬೆ ಎಂಬ ಒಬ್ಬಾತನು ಇದ್ದಾನೆ. ಆತನು ಬೆಳೆದು ಬಲಿಷ್ಠನಾಗುವನು. ಆತನು ದೇವಾಲಯವನ್ನು ಕಟ್ಟುವನು.


ಒಂದು ಸಣ್ಣ ಸಸಿಯು ಬೆಳೆಯುವ ರೀತಿಯಲ್ಲಿ ಯೆಹೋವನ ಮುಂದೆ ಆತನು ಬೆಳೆದನು. ಆತನು ಒಣ ನೆಲದಿಂದ ಚಿಗುರುವ ಬೇರಿನಂತಿದ್ದನು. ಆತನು ಒಬ್ಬ ವಿಶೇಷ ಪುರುಷನಂತೆ ತೋರಲಿಲ್ಲ. ಅಂಥ ಲಕ್ಷಣಗಳೇನೂ ಆತನಲ್ಲಿರಲಿಲ್ಲ. ನಾವು ಆತನನ್ನು ನೋಡಿದಾಗ ಆತನಲ್ಲಿ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.


ಯೇಸು ಅವರಿಗೆ ಮತ್ತೆ “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು. ಅವರು, “ನಜರೇತಿನ ಯೇಸುವನ್ನು” ಎಂದು ಹೇಳಿದರು.


ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.


ನೀನು ನನಗೆ ವಿಧೇಯನಾದದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು.


ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.


ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


“ನಾನು, ‘ಪ್ರಭುವೇ, ನೀನು ಯಾರು?’ ಎಂದು ಕೇಳಿದೆನು. ಆ ವಾಣಿಯು, ‘ನಾನು ನಜರೇತಿನ ಯೇಸು. ನೀನು ಹಿಂಸಿಸುತ್ತಿರುವುದು ನನ್ನನ್ನೇ’ ಎಂದು ಹೇಳಿತು.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ಕೆಲವು ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯಾರೆಂದರೆ, ಸೀಮೋನ್ ಪೇತ್ರ, ದಿದುಮನೆಂಬ ತೋಮ, ಗಲಿಲಾಯಕ್ಕೆ ಸೇರಿದ ಕಾನಾ ಊರಿನವನಾದ ನತಾನಿಯೇಲ, ಜೆಬೆದಾಯನ ಇಬ್ಬರು ಗಂಡುಮಕ್ಕಳು ಮತ್ತು ಇನ್ನಿಬ್ಬರು ಶಿಷ್ಯರು.


ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.


ಪೇತ್ರನು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಅವಳು ಕಂಡು, ಪೇತ್ರನನ್ನು ಹತ್ತಿರದಿಂದ ದಿಟ್ಟಿಸಿ ನೋಡಿ, “ನೀನು ನಜರೇತಿನವನಾದ ಯೇಸುವಿನ ಜೊತೆ ಇದ್ದವನಲ್ಲವೇ?” ಎಂದಳು.


ಇವನು ಕೇವಲ ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳು. ಯಾಕೋಬ, ಯೋಸೇಫ, ಸಿಮೋನ ಮತ್ತು ಯೂದ ಇವನ ಸಹೋದರರು.


“ನಾನು ಫರಿಸಾಯನಾಗಿದ್ದಾಗ ನಜರೇತಿನ ಯೇಸುವಿನ ಹೆಸರಿಗೆ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಬೇಕೆಂದು ಆಲೋಚಿಸಿಕೊಂಡೆನು.


ಆದರೆ ಪೇತ್ರನು, “ನನ್ನಲ್ಲಿ ಬೆಳ್ಳಿಬಂಗಾರಗಳಿಲ್ಲ, ಆದರೆ ನನ್ನಲ್ಲಿರುವುದನ್ನು ನಿನಗೆ ಕೊಡಬಲ್ಲೆನು. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದುನಡೆ!” ಎಂದು ಹೇಳಿ,


“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.


ಪಿಲಾತನು ಒಂದು ಫಲಕವನ್ನು ಬರೆದು ಶಿಲುಬೆಯ ಮೇಲೆ ಹಚ್ಚಿದನು. ಆ ಫಲಕದಲ್ಲಿ, “ನಜರೇತಿನ ಯೇಸು, ಯೆಹೂದ್ಯರ ರಾಜನು” ಎಂದು ಬರೆದಿತ್ತು.


ಅವರು, “ನಜರೇತಿನ ಯೇಸುವನ್ನು” ಎಂದು ಉತ್ತರಕೊಟ್ಟರು. ಆತನು, “ನಾನೇ ಯೇಸು” ಎಂದನು. (ಯೇಸುವಿಗೆ ದ್ರೋಹ ಬಗೆದ ಯೂದನು ಅವರೊಂದಿಗೆ ಅಲ್ಲೇ ನಿಂತಿದ್ದನು.)


ಯೆಹೂದ್ಯರು, “ಇವನು ಯೇಸು. ಇವನ ತಂದೆತಾಯಿಗಳನ್ನು ನಾವು ಬಲ್ಲೆವು. ಇವನು ಕೇವಲ ಯೋಸೇಫನ ಮಗನು. ‘ನಾನು ಪರಲೋಕದಿಂದ ಇಳಿದುಬಂದೆನು’ ಎಂದು ಇವನು ಹೇಳುವುದಕ್ಕೆ ಹೇಗೆ ಸಾಧ್ಯ?” ಎಂದರು.


ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಯೇಸು ಯೋಸೇಫನ ಮಗನೆಂದು ಜನರು ಭಾವಿಸಿದ್ದರು. ಯೋಸೇಫನು ಹೇಲಿಯ ಮಗನು.


ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,


ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.


ಅಂದ್ರೆಯ ಮತ್ತು ಪೇತ್ರರಂತೆ ಫಿಲಿಪ್ಪನು ಸಹ ಬೆತ್ಸಾಯಿದ ಎಂಬ ಊರಿನವನಾಗಿದ್ದನು.


ಯೇಸು ಕಣ್ಣೆತ್ತಿ ನೋಡಿದಾಗ, ತನ್ನ ಬಳಿಗೆ ಬರುತ್ತಿದ್ದ ಜನಸಮೂಹವನ್ನು ಕಂಡು ಫಿಲಿಪ್ಪನಿಗೆ, “ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿ ಕೊಂಡುಕೊಳ್ಳೋಣ?” ಎಂದು ಕೇಳಿದನು.


ಫಿಲಿಪ್ಪನು, “ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ ಬೇಕು” ಎಂದು ಉತ್ತರಕೊಟ್ಟನು.


ಈ ಗ್ರೀಕ್ ಜನರು ಫಿಲಿಪ್ಪನ ಬಳಿಗೆ ಹೋದರು. (ಫಿಲಿಪ್ಪನು ಗಲಿಲಾಯದ ಬೆತ್ಸಾಯಿ ಎಂಬ ಊರಿನವನಾಗಿದ್ದವನು.) ಅವರು, “ಸ್ವಾಮೀ, ನಾವು ಯೇಸುವನ್ನು ನೋಡಬೇಕು” ಎಂದು ಅವನನ್ನು ಕೇಳಿಕೊಂಡರು.


ಫಿಲಿಪ್ಪನು ಯೇಸುವಿಗೆ, “ಪ್ರಭುವೇ, ನಮಗೆ ತಂದೆಯನ್ನು ತೋರಿಸು. ನಮಗೆ ಅಷ್ಟೇ ಸಾಕು” ಎಂದು ಹೇಳಿದನು.


ಜನರು ಅವನಿಗೆ, “ನಜರೇತಿನ ಯೇಸು ಬರುತ್ತಿದ್ದಾನೆ” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು