Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:20 - ಪರಿಶುದ್ದ ಬೈಬಲ್‌

20 ಅವರಲ್ಲಿ ಅನೇಕರು, “ಅವನೊಳಗೆ ದೆವ್ವವು ಸೇರಿಕೊಂಡು ಅವನನ್ನು ಹುಚ್ಚನನ್ನಾಗಿ ಮಾಡಿದೆ. ಅವನಿಗೆ ಏಕೆ ಕಿವಿಗೊಡುತ್ತೀರಿ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರಲ್ಲಿ ಅನೇಕರು - ಅವನಿಗೆ ದೆವ್ವಹಿಡಿದದೆ, ಹುಚ್ಚುಹಿಡಿದದೆ, ಯಾಕೆ ಅವನ ಮಾತು ಕೇಳುತ್ತೀರಿ? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರಲ್ಲಿ ಅನೇಕರು, “ಆತನಿಗೆ ದೆವ್ವ ಹಿಡಿದಿದೆ. ಆತನು ಹುಚ್ಚನಾಗಿದ್ದಾನೆ, ನೀವು ಏಕೆ ಆತನಿಗೆ ಕಿವಿಗೊಡುತ್ತೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಂಚ್ಯಾತ್ಲೆ ಲೈ ಲೊಕಾ “ತೆಕಾ ಗಿರೊಲಾಗ್ಲಾ! ತೊ ಪಿಸೊ ಹೊಲಾ ತೆಚ್ಯೆ ಅಮಿ ಕಶ್ಯಾಕ್ ಆಯ್ಕುಚೆ” ಮನುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:20
15 ತಿಳಿವುಗಳ ಹೋಲಿಕೆ  

ಜನರು, “ದೆವ್ವವು ನಿನ್ನೊಳಗೆ ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ! ನಾವು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ” ಎಂದು ಉತ್ತರಕೊಟ್ಟರು.


ಯೇಸುವಿನ ಕುಟುಂಬದವರಿಗೆ ಈ ವಿಷಯಗಳೆಲ್ಲ ತಿಳಿದವು. ಯೇಸುವಿಗೆ ಹುಚ್ಚು ಹಿಡಿದಿದೆಯೆಂದು ಕೆಲವರು ಹೇಳಿದ್ದರಿಂದ ಆತನ ಕುಟುಂಬದವರು ಆತನನ್ನು ಕರೆದೊಯ್ಯಲು ಅಲ್ಲಿಗೆ ಬಂದರು.


ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.


ಪೌಲನು ತನ್ನ ಪರವಾಗಿ ಈ ಸಂಗತಿಗಳನ್ನು ಹೇಳುತ್ತಿರಲು ಫೆಸ್ತನು, “ಪೌಲನೇ, ನೀನು ಹುಚ್ಚನಾಗಿರುವೆ! ಅಧಿಕ ಅಧ್ಯಯನ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ!” ಎಂದು ಕೂಗಿ ಹೇಳಿದನು.


ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ?


ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದರು.


ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.


ಶೆಮಾಯನೇ, ನೀನು ಚೆಫನ್ಯನಿಗೆ ಬರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲ್ವಿಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನ್ನು ನೀನು ಬಂಧಿಸಬೇಕು, ಅವನಿಗೆ ಕೋಳಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನ್ನು ಹಾಕಬೇಕು.


ಇಂದಿನ ಜನರು ಈ ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು