Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:33 - ಪರಿಶುದ್ದ ಬೈಬಲ್‌

33 ಯೆಹೂದ್ಯರು, “ನಾವು ನಿನ್ನನ್ನು ಕೊಲ್ಲುತ್ತಿರುವುದು ನೀನು ಮಾಡಿದ ಯಾವುದೇ ಒಳ್ಳೆಯ ಕಾರ್ಯದ ನಿಮಿತ್ತದಿಂದಲ್ಲ. ನೀನು ಮಾಡುತ್ತಿರುವ ದೇವದೂಷಣೆಗಾಗಿ. ನೀನು ಕೇವಲ ಒಬ್ಬ ಮನುಷ್ಯ. ನೀನು ನಿನ್ನನ್ನೇ ದೇವರೆಂದು ಹೇಳಿಕೊಳ್ಳುತ್ತಿರುವೆ! ಆದಕಾರಣ ಕಲ್ಲುಗಳಿಂದ ನಿನ್ನನ್ನು ಕೊಲ್ಲಬೇಕೆಂದಿದ್ದೇವೆ!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದ್ದೀಯೇ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೂದ್ಯರು - ನಾವು ನಿನ್ನ ಮೇಲೆ ಕಲ್ಲೆಸೆಯುವದು ಒಳ್ಳೇ ಕಾರ್ಯದ ದೆಸೆಯಿಂದಲ್ಲ, ದೇವದೂಷಣೆಯ ದೆಸೆಯಿಂದಲೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವದರ ದೆಸೆಯಿಂದಲೂ ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅದಕ್ಕೆ ಯೆಹೂದ್ಯರು ಯೇಸುವಿಗೆ, “ಒಳ್ಳೆಯ ಕಾರ್ಯಗಳಿಗಾಗಿಯಲ್ಲ. ನೀನು ಮನುಷ್ಯನಾಗಿದ್ದು ನಿನ್ನನ್ನೇ ದೇವರನ್ನಾಗಿ ಮಾಡಿಕೊಂಡದ್ದಕ್ಕೂ ದೇವದೂಷಣೆ ಮಾಡುತ್ತಿರುವದಕ್ಕೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತ್ಯಾ ಲೊಕಾನಿ ತೆಕಾ, “ಅಮಿ ತಿಯಾ ಕರಲ್ಲ್ಯಾ ಖಲ್ಯಾಬಿ ಬರ್‍ಯಾ ಕಾಮಾಸಾಟ್ನಿ ತುಕಾ ಗುಂಡ್ಯಾನಿ ಮಾರುಕ್ ಉಟುಕ್ನಾವ್! ತಿಯಾ ಕರ್‍ತಲ್ಯಾ ನಿಂದ್ಯಾಸಾಟ್ನಿ ಅಮಿ ಮಾರುಕ್ ಉಟ್ಲಾವ್! ತಿಯಾ ಎಕ್ ಮಾನುಸ್, ಖರೆ ತಿಯಾ ತುಕಾಚ್ ದೆವ್ ಕರುಕ್ ಬಗುಲಾಲೆಯ್” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:33
11 ತಿಳಿವುಗಳ ಹೋಲಿಕೆ  

ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.


ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣಶಿಕ್ಷೆಯಾಗಬೇಕು.


ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.


ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮನಾಗಿದ್ದರೂ ಆ ಪದವಿಯನ್ನು ಬಿಡಲಾರೆ ಎನ್ನಲಿಲ್ಲ.


ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ.


ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: “ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು.


ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.”


“ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗಿರುವ ಸ್ಥಳಕ್ಕೆ ತನ್ನಿರಿ. ಬಳಿಕ ಅವನ ದೂಷಣೆ ಮಾತುಗಳನ್ನು ಕೇಳಿದ ಎಲ್ಲಾ ಜನರನ್ನು ಒಟ್ಟಾಗಿ ಕರೆಸಿರಿ. ಆ ಜನರು ತಮ್ಮ ಕೈಗಳನ್ನು ಅವನ ತಲೆಯ ಮೇಲೆ ಇಡುವರು. ಆ ಬಳಿಕ ಎಲ್ಲಾ ಜನರು ಅವನಿಗೆ ಕಲ್ಲೆಸೆದು ಕೊಲ್ಲಬೇಕು.


ಯೆಹೂದ್ಯರು ಯೇಸುವಿನ ಸುತ್ತಲೂ ನೆರೆದರು. ಅವರು ಆತನಿಗೆ, “ಇನ್ನೆಷ್ಟುಕಾಲ ನೀನು ನಿನ್ನ ಬಗ್ಗೆ ನಮ್ಮನ್ನು ಆಶ್ಚರ್ಯಗೊಳಿಸುವೆ? ನೀನು ಕ್ರಿಸ್ತನಾಗಿದ್ದರೆ, ನಮಗೆ ಸ್ಪಷ್ಟವಾಗಿ ತಿಳಿಸು” ಎಂದು ಹೇಳಿದರು.


ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.


ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು