Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:16 - ಪರಿಶುದ್ದ ಬೈಬಲ್‌

16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಹೋಗಿ ಜುದೇಯದಲ್ಲಿ ಸಾಯೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಕೂಡ ಪ್ರಭುವಿನೊಡನೆ ಹೋಗಿ ಸಾಯೋಣ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ದಿದುಮನೆಂಬ ತೋಮನು ಜೊತೇ ಶಿಷ್ಯರಿಗೆ - ನಾವು ಸಹ ಹೋಗಿ ಆತನೊಡನೆ ಸಾಯೋಣ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ದಿದಿಮೊಸ್ ಮನ್ತಲೊ ಥೊಮಸಾನ್ ಅಪ್ನಾಚ್ಯಾ ವಾಂಗುಡ್ಚ್ಯಾ ಶಿಸಾಕ್ನಿ, “ಅಮಿ ಸಗ್ಳಿ ಲೊಕಾಬಿ ಗುರುಜಿಚ್ಯಾ ವಾಂಗ್ಡಾ ಥೈ ಜಾಂವ್ವಾ, ಅಶೆಚ್ ಅಮಿಬಿ ತೆಚ್ಯಾ ವಾಂಗ್ಡಾ ಮರುಕ್ ಹೊತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:16
12 ತಿಳಿವುಗಳ ಹೋಲಿಕೆ  

ಕೆಲವು ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯಾರೆಂದರೆ, ಸೀಮೋನ್ ಪೇತ್ರ, ದಿದುಮನೆಂಬ ತೋಮ, ಗಲಿಲಾಯಕ್ಕೆ ಸೇರಿದ ಕಾನಾ ಊರಿನವನಾದ ನತಾನಿಯೇಲ, ಜೆಬೆದಾಯನ ಇಬ್ಬರು ಗಂಡುಮಕ್ಕಳು ಮತ್ತು ಇನ್ನಿಬ್ಬರು ಶಿಷ್ಯರು.


ಪೇತ್ರನು, “ಪ್ರಭುವೇ, ಈಗ ನಾನು ನಿನ್ನನ್ನು ಹಿಂಬಾಲಿಸಲು ಏಕಾಗದು? ನಿನಗೋಸ್ಕರ ಸಾಯುವುದಕ್ಕೂ ನನಗೆ ಮನಸ್ಸಿದೆ!” ಎಂದು ಹೇಳಿದನು.


ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,


ಮತ್ತಾಯ, ತೋಮ, ಯಾಕೋಬ (ಅಲ್ಫಾಯನ ಮಗ) ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,


ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ದೇಶಾಭಿಮಾನಿಯಾದ ಸೀಮೋನ


ಆದರೆ ಪೇತ್ರನು, “ನಾನು ನಿನ್ನೊಂದಿಗೆ ಸತ್ತರೂ ಸರಿ, ನಿನ್ನನ್ನು ನಿರಾಕರಿಸುವುದಿಲ್ಲ” ಅಂದನು. ಉಳಿದ ಶಿಷ್ಯರು ಸಹ ಅದೇ ರೀತಿ ಹೇಳಿದರು.


ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).


ತೋಮನು ಯೇಸುವಿಗೆ, “ಪ್ರಭುವೇ, ನೀನು ಹೋಗುತ್ತಿರುವುದು ಎಲ್ಲಿಗೆಂಬುದೇ ನಮಗೆ ಗೊತ್ತಿಲ್ಲ. ಹೀಗಿರಲು, ಆ ದಾರಿಯನ್ನು ನಾವು ಹೇಗೆ ತಿಳಿದುಕೊಳ್ಳಲಾದೀತು?” ಎಂದನು.


ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು.


ಅದಕ್ಕೆ ಪೇತ್ರನು ಯೇಸುವಿಗೆ, “ಪ್ರಭುವೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಎಂದು ಹೇಳಿದನು.


ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು