Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:24 - ಪರಿಶುದ್ದ ಬೈಬಲ್‌

24 ಮಾರ್ಥಳು, “ಅಂತಿಮ ದಿನದಂದು ಪುನರುತ್ಥಾನವಾಗುವಾಗ ಅವನು ಮತ್ತೆ ಎದ್ದುಬರುವನೆಂದು ನನಗೆ ಗೊತ್ತಿದೆ” ಎಂಬುದಾಗಿ ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಅವನು ಅಂತಿಮ ದಿನದ ಪುನರುತ್ಥಾನದಲ್ಲಿ ಜೀವಂತನಾಗಿ ಏಳುವನೆಂದು ನನಗೆ ತಿಳಿದಿದೆ,” ಎಂದಳು ಮಾರ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮಾರ್ಥಳು - ಸತ್ತವರಿಗೆ ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮಾರ್ಥಳು ಯೇಸುವಿಗೆ, “ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನು ಪುನಃ ಎದ್ದು ಬರುವನೆಂದು ನಾನು ಬಲ್ಲೆನು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ತಿನಿ, “ಆಕ್ರಿಚ್ಯಾ ದಿಸಿ ಅನಿ ಪರ್ತುನ್ ಝಿತ್ತೆ ಹೊವ್ನ್ ಉಟ್ತಲ್ಯಾ ಎಳಾರ್ ತೊ ಝಿತ್ತೊ ಹೊವ್ನ್ ಉಟ್ತಾ ಮನುನ್ ಮಾಕಾ ಗೊತ್ತ್ ಹಾಯ್” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:24
18 ತಿಳಿವುಗಳ ಹೋಲಿಕೆ  

ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.


ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”


ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.


“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.


ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು.


ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ.


ದೇವರು ನನಗೆ ಕೊಟ್ಟಿರುವ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಕೂಡದು. ಅಲ್ಲದೆ ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸಬೇಕು. ನನ್ನನ್ನು ಕಳುಹಿಸಿದಾತನು ಆ ಕಾರ್ಯವನ್ನೇ ನನ್ನಿಂದ ಅಪೇಕ್ಷಿಸುತ್ತಾನೆ.


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ಯೇಸು, “ನಿನ್ನ ಸಹೋದರನು ಮತ್ತೆ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು