Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:38 - ಪರಿಶುದ್ದ ಬೈಬಲ್‌

38 ಯೇಸು ತನ್ನ ಹೃದಯದಲ್ಲಿ ಮತ್ತೆ ಬಹಳವಾಗಿ ದುಃಖಗೊಂಡು, ಲಾಜರನಿದ್ದ ಸಮಾಧಿಯ ಬಳಿಗೆ ಬಂದನು. ಆ ಸಮಾಧಿಯು ಒಂದು ಗವಿಯಾಗಿತ್ತು. ಅದರ ಬಾಯಿಗೆ ದೊಡ್ಡಕಲ್ಲನ್ನು ಮುಚ್ಚಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯೇಸು ಸ್ವಾಮಿ ಮತ್ತೊಮ್ಮೆ ಮನಮರುಗಿ, ಸಮಾಧಿಯ ಬಳಿಗೆ ಬಂದರು. ಅದು ಒಂದು ಗವಿಯಾಗಿತ್ತು; ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯೇಸು ತನ್ನಲ್ಲಿ ತಿರಿಗಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲು ಆನಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಜೆಜು ಅನಿ ಎಗ್ದಾ ಲೈ ವಾಯ್ಟ್ ಕಳ್ವಳ್ಳೊ. ಅನಿ ಲಾಜರಾಕ್ ಥವಲ್ಲ್ಯಾ ಸಮಾದಿಕ್ಡೆ ಗೆಲೊ, ತ್ಯೆಚ್ಯಾ ವಾಟೆರ್ ಗುಂಡೊ ಲಾವ್ನ್ ಧಾಪಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:38
12 ತಿಳಿವುಗಳ ಹೋಲಿಕೆ  

ಮರಿಯಳ ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದಾಗ, ತನ್ನ ಹೃದಯದಲ್ಲಿ ಬಹಳವಾಗಿ ದುಃಖಗೊಂಡು ತತ್ತರಿಸಿದನು.


ಬಂಡೆಯಲ್ಲಿ ತಾನು ತೋಡಿಸಿದ್ದ ಹೊಸ ಸಮಾಧಿಯಲ್ಲಿ ಇಟ್ಟನು. ಸಮಾಧಿಯ ಬಾಗಿಲಿಗೆ ಒಂದು ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.


ಭಾನುವಾರದ ಮುಂಜಾನೆ ಮಗ್ದಲದ ಮರಿಯಳು ಯೇಸುವಿನ ದೇಹವಿದ್ದ ಸಮಾಧಿಯ ಬಳಿಗೆ ಬಂದಳು. ಆಗ ಇನ್ನೂ ಕತ್ತಲಿತ್ತು. ಸಮಾಧಿಯ ಬಾಗಿಲಿಗೆ ಮುಚ್ಚಿದ್ದ ದೊಡ್ಡ ಕಲ್ಲು ಅಲ್ಲಿಂದ ತೆಗೆದುಹಾಕಲ್ಪಟ್ಟಿರುವುದನ್ನು ಕಂಡ ಮರಿಯಳು


ಬಂಡೆ ಉರಳಿಸಲ್ಪಟ್ಟಿರುವುದನ್ನು ಕಂಡ ಅವರು ಒಳಗೆ ಹೋದರು.


ಆ ಸೇವಕನನ್ನು ‘ನೀನಿಲ್ಲಿ ಏನು ಮಾಡುತ್ತಿರುವೆ? ನಿನ್ನ ಕುಟುಂಬದವರಲ್ಲಿ ಯಾರನ್ನಾದರೂ ಇಲ್ಲಿ ಸಮಾಧಿ ಮಾಡಿರುವಿಯಾ? ಇಲ್ಲಿ ಸಮಾಧಿಯನ್ನು ಯಾಕೆ ನಿರ್ಮಿಸಿರುವೆ? ಎಂದು ಕೇಳು.’” ಅದಕ್ಕೆ ಯೆಶಾಯನು, “ಈ ಮನುಷ್ಯನನ್ನು ನೋಡು. ಅವನು ತನ್ನ ಸಮಾಧಿಯನ್ನು ಎತ್ತರವಾದ ಸ್ಥಳದಲ್ಲಿ ಸಿದ್ಧಪಡಿಸುತ್ತಿದ್ದಾನೆ. ಅವನು ಸಮಾಧಿ ಸಿದ್ಧಪಡಿಸಲು ಬಂಡೆಯನ್ನು ಕೊರೆಯುತ್ತಿದ್ದಾನೆ.


ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್).


ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಆ ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು.


ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು.


ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಹೃದಯ ಒಡೆದ ಮನುಷ್ಯನು ದುಃಖದಿಂದಿರುವಾಗ ಅಳುವ ಶಬ್ದವನ್ನು ಮಾಡು. ಈ ಶಬ್ದವನ್ನು ಜನರ ಮುಂದೆ ಮಾಡು.


ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು