Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:39 - ಪರಿಶುದ್ದ ಬೈಬಲ್‌

39 “ಆ ಕಲ್ಲನ್ನು ತೆಗೆದುಹಾಕಿರಿ” ಎಂದು ಯೇಸು ಹೇಳಿದನು. ಲಾಜರನ ಅಕ್ಕಳಾದ ಮಾರ್ಥಳು, “ಪ್ರಭುವೇ, ಲಾಜರನು ಸತ್ತು ನಾಲ್ಕು ದಿನಗಳಾಗಿವೆ. ಆದ್ದರಿಂದ ಅಲ್ಲಿ ದುರ್ವಾಸನೆಯಿರುತ್ತದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಯೇಸು, “ಆ ಕಲ್ಲನ್ನು ತೆಗೆಯಿರಿ,” ಎಂದು ಆಜ್ಞಾಪಿಸಿದರು.ಮೃತನ ಸಹೋದರಿಯಾದ ಮಾರ್ತಳು, “ಪ್ರಭುವೇ, ಅವನು ಸತ್ತು ನಾಲ್ಕು ದಿನಗಳಾದವು; ಈಗಾಗಲೇ ಅವನ ದೇಹ ಕೊಳೆತು ನಾರುತ್ತಿರಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಯೇಸು - ಆ ಕಲ್ಲನ್ನು ತೆಗೆದುಹಾಕಿರಿ ಅನ್ನಲು ತೀರಿಹೋದವನ ಅಕ್ಕನಾದ ಮಾರ್ಥಳು - ಸ್ವಾಮೀ, ಅವನು ಸತ್ತು ನಾಲ್ಕು ದಿವಸವಾಯಿತು; ಈಗ ನಾತ ಹುಟ್ಟಿದೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೇಸು, “ಆ ಕಲ್ಲನ್ನು ತೆಗೆದುಹಾಕಿರಿ,” ಎಂದರು. ಅದಕ್ಕೆ ಸತ್ತವನ ಸಹೋದರಿ ಮಾರ್ಥಳು ಯೇಸುವಿಗೆ, “ಸ್ವಾಮೀ, ಈಗ ದುರ್ವಾಸನೆ ಇರುವುದು. ಅವನು ಸತ್ತು ನಾಲ್ಕು ದಿನಗಳಾಗಿವೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತನ್ನಾ ಜೆಜುನ್, “ಹ್ಯೊ ಗುಂಡೊ ಕಡೆಕ್ ಕಾಡಾ!” ಮನುನ್ ಹುಕುಮ್ ದಿಲ್ಯಾನ್. ತನ್ನಾ ಮಾರ್ಥಾನ್ ತ್ಯಾ ಮರಲ್ಲ್ಯಾ ಮಾನ್ಸಾಚ್ಯಾ ಭೆನಿನ್, “ಧನಿಯಾ ತೆಕಾ ಸಮಾದಿತ್ ಥವ್ನ್ ಚಾರ್ ದಿಸಾ ಹೊಲಿ ತೆಕಾ ಬುರ್ಶಿ ವಾಸ್ ಪಡ್ಲಾ ಅಶಿಲ್!” ಮನುನ್ ಜಬಾಬ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:39
11 ತಿಳಿವುಗಳ ಹೋಲಿಕೆ  

ಯೇಸು ಬೆಥಾನಿಯಕ್ಕೆ ಬಂದನು. ಈಗಾಗಲೇ ಲಾಜರನು ಸತ್ತು ಸಮಾಧಿಯಾಗಿ ನಾಲ್ಕು ದಿನಗಳಾಯಿತೆಂಬುದು ಯೇಸುವಿಗೆ ತಿಳಿಯಿತು.


ಆ ಸ್ತ್ರೀಯರು ಒಬ್ಬರಿಗೊಬ್ಬರು, “ದೊಡ್ಡ ಬಂಡೆಯಿಂದ ಸಮಾಧಿಯ ಬಾಗಿಲನ್ನು ಮುಚ್ಚಲಾಗಿದೆ. ಈ ಬಂಡೆಯನ್ನು ನಮಗಾಗಿ ಯಾರು ಉರುಳಿಸುತ್ತಾರೆ?” ಎಂದುಕೊಂಡರು.


ಯಾವ ಮಾನವ ಸ್ನೇಹಿತನೂ ನಿನ್ನನ್ನು ರಕ್ಷಿಸಲಾರನು. ಅಲ್ಲದೆ ದೇವರಿಗೆ ಈಡನ್ನು ಕೊಟ್ಟು ನಿನ್ನನ್ನು ಬಿಡಿಸಿಕೊಳ್ಳಲಾರನು.


ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ಯಾಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ತೊರೆದುಬಿಡುವುದಿಲ್ಲ. ನಿನ್ನ ಪರಿಶುದ್ಧನ ದೇಹವು ಸಮಾಧಿಯಲ್ಲಿ ಕೊಳೆಯಲು ನೀನು ಅವಕಾಶ ಕೊಡುವುದಿಲ್ಲ.


ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು.


ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು.


ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.


“ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!


ನಾಶನಮಾರ್ಗದಲ್ಲಿರುವ ಜನರಿಗೆ ಮರಣವನ್ನು ಉಂಟುಮಾಡುವ ಮರಣದ ವಾಸನೆಯಾಗಿದ್ದೇವೆ. ಆದರೆ ರಕ್ಷಣಾಮಾರ್ಗದಲ್ಲಿರುವ ಜನರಿಗೆ ಜೀವವನ್ನು ಉಂಟುಮಾಡುವ ಜೀವದ ವಾಸನೆಯಾಗಿದ್ದೇವೆ. ಹೀಗಿರಲಾಗಿ, ಈ ಕಾರ್ಯವನ್ನು ಮಾಡಲು ಯಾರು ಯೋಗ್ಯರಾಗಿದ್ದಾರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು