Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:44 - ಪರಿಶುದ್ದ ಬೈಬಲ್‌

44 ಸತ್ತುಹೋಗಿದ್ದವನು (ಲಾಜರನು) ಹೊರಗೆ ಬಂದನು. ಅವನ ಕೈಕಾಲುಗಳನ್ನು ಬಟ್ಟೆಗಳಿಂದ ಸುತ್ತಲಾಗಿತ್ತು. ಅವನ ಮುಖವನ್ನು ಕರವಸ್ತ್ರದಿಂದ ಮುಚ್ಚಲಾಗಿತ್ತು. ಆಗ ಯೇಸು, “ಅವನಿಗೆ ಸುತ್ತಿರುವ ಬಟ್ಟೆಗಳನ್ನು ತೆಗೆದುಹಾಕಿರಿ, ಅವನು ಹೋಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಸತ್ತಿದ್ದವನು ಕೂಡಲೇ ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಸುತ್ತಿದ್ದವು; ಮುಖವು ಬಟ್ಟೆಯಿಂದ ಮುಚ್ಚಿತ್ತು. ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಸತ್ತಿದ್ದವನು ಹೊರಗೆ ಬಂದನು; ಅವನ ಕೈಕಾಲುಗಳು ಬಟ್ಟೆಗಳಿಂದ ಕಟ್ಟಿದ್ದವು, ಅವನ ಮುಖವು ಕೈಪಾವುಡದಿಂದ ಸುತ್ತಿತ್ತು. ಯೇಸು ಅವರಿಗೆ - ಅವನನ್ನು ಬಿಚ್ಚಿರಿ, ಹೋಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಮರಲ್ಲೊ ಮಾನುಸ್ ಭಾಯ್ರ್ ಯೆಲೊ, ತ್ಯೆಚ್ಯಾ ಹಾತಾಕ್ನಿ ಅನಿ ಪಾಂಯಾಕ್ನಿ ಫಾಳಿಯಾ ಲಪಟಲ್ಲ್ಯಾ ಹೊತ್ತ್ಯಾ ಅನಿ ತ್ಯೆಚ್ಯಾ ತೊಂಡಾರ್ ಬಿ ಎಕ್ ಕಪ್ಡೊ ಲಪ್ಟಲ್ಲೊ ಹೊತ್ತೊ. ತನ್ನಾ ಜೆಜುನ್ ತೆಂಕಾ, “ತೆಕಾ ಲಪ್ಟಲ್ಲೊ ಕಪ್ಡೊ ಸೊಡ್ವಾ ಅನಿ ತೊ ಜಾಂವ್ದಿತ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:44
20 ತಿಳಿವುಗಳ ಹೋಲಿಕೆ  

ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು.


ಅಲ್ಲದೆ ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆಯನ್ನೂ ಅವನು ಕಂಡನು. ಆ ಬಟ್ಟೆಯು ಸುತ್ತಲ್ಪಟ್ಟು, ಇತರ ನಾರುಬಟ್ಟೆಗಳಿಂದ ಪ್ರತ್ಯೇಕವಾಗಿ ಬಿದ್ದಿತ್ತು.


ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.


ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವ ಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.


ಆಗ ಅವನು ಎದ್ದು ಕುಳಿತುಕೊಂಡು ಮಾತಾಡತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.


ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು.


ಆಗ ದೇವರು, “ಬೆಳಕಾಗಲಿ” ಅನ್ನಲು ಬೆಳಕಾಯಿತು.


ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.


ಈ ಇಬ್ಬರು ಯೇಸುವಿನ ದೇಹವನ್ನು ತೆಗೆದುಕೊಂಡು ಅದಕ್ಕೆ ಸುಗಂಧದ್ರವ್ಯವನ್ನು ಹಾಕಿ ನಾರುಬಟ್ಟೆಗಳಿಂದ ಸುತ್ತಿದರು. (ಯೆಹೂದ್ಯರು ಸತ್ತವರನ್ನು ಇದೇರೀತಿ ಸಮಾಧಿ ಮಾಡುತ್ತಾರೆ.)


ಈ ವಿಷಯವನ್ನು ಯಾರಿಗೂ ಹೇಳಕೂಡದೆಂದು ಯೇಸು ಆಕೆಯ ತಂದೆತಾಯಿಗಳಿಗೆ ಖಂಡಿತವಾಗಿ ಹೇಳಿ, “ಆ ಬಾಲಕಿಗೆ ಊಟ ಮಾಡಿಸಿರಿ” ಎಂದನು.


“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.


ಯಾಕೆಂದರೆ ಆತನು ನುಡಿದಾಗ ಭೂಲೋಕವು ಸೃಷ್ಟಿಯಾಯಿತು; ಆತನು ಆಜ್ಞಾಪಿಸಿದಾಗ ಸಮಸ್ತವು ಉಂಟಾಯಿತು.


ಆ ಶಿಷ್ಯನು ಬಗ್ಗಿ ಒಳಗೆ ನೋಡಿದನು.


“ಆ ಕಲ್ಲನ್ನು ತೆಗೆದುಹಾಕಿರಿ” ಎಂದು ಯೇಸು ಹೇಳಿದನು. ಲಾಜರನ ಅಕ್ಕಳಾದ ಮಾರ್ಥಳು, “ಪ್ರಭುವೇ, ಲಾಜರನು ಸತ್ತು ನಾಲ್ಕು ದಿನಗಳಾಗಿವೆ. ಆದ್ದರಿಂದ ಅಲ್ಲಿ ದುರ್ವಾಸನೆಯಿರುತ್ತದೆ” ಎಂದು ಹೇಳಿದಳು.


“ಆ ಬಳಿಕ ಇನ್ನೊಬ್ಬ ಆಳು ಬಂದು ಅರಸನಿಗೆ, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿ ಇಲ್ಲಿದೆ.


ಬಳಿಕ ಯೇಸು ಗಟ್ಟಿಯಾದ ಧ್ವನಿಯಿಂದ, “ಲಾಜರನೇ, ಹೊರಗೆ ಬಾ!” ಎಂದು ಕರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು