Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:19 - ಪರಿಶುದ್ದ ಬೈಬಲ್‌

19 ಆದ್ದರಿಂದ ಫರಿಸಾಯರು, “ನೋಡಿ! ನಮ್ಮ ಯೋಜನೆಯು ನಿಷ್ಪ್ರಯೋಜಕವಾಯಿತು. ಜನರು ಆತನನ್ನೇ ಹಿಂಬಾಲಿಸುತ್ತಿದ್ದಾರೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ಫರಿಸಾಯರು - ನಿಮ್ಮ ಯತ್ನವೇನೂ ಸಾಗಲಿಲ್ಲ, ನೋಡಿರಿ; ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಫಾರಿಜೆವಾನಿ ಎಕಾಮೆಕಾಕ್ನಿ, “ಬಗಾ ಅಮ್ಚೆನಿ ಕಾಯ್ ಬಿ ಕರುಕ್ ಹೊಯ್ನಾ ಹೊಲಾ! ಸಗ್ಳೊ ಜಗುಚ್ ತ್ಯೆಚ್ಯಾ ಫಾಟ್ನಾ ಜಾವ್ಲಾಲಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:19
14 ತಿಳಿವುಗಳ ಹೋಲಿಕೆ  

ಆದರೆ ಅವರು ಪೌಲ ಸೀಲರನ್ನು ಅಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ಯಾಸೋನನನ್ನೂ ಕೆಲವು ವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುಕೊಂಡು ಬಂದು, “ಈ ಜನರು (ಪೌಲ ಸೀಲರು) ಪ್ರಪಂಚದ ಎಲ್ಲಾ ಕಡೆಗಳಲ್ಲೂ ಗಲಭೆಯನ್ನು ಉಂಟುಮಾಡಿ ಈಗ ಇಲ್ಲಿಗೂ ಬಂದಿದ್ದಾರೆ!


ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.


ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.


ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.”


ಮಹಾಯಾಜಕರು ಮತ್ತು ಧರ್ಮೋಪದೇಶಕರು ಇದನ್ನು ನೋಡಿದರು. ಯೇಸು ಮಹತ್ಕಾರ್ಯಗಳನ್ನು ಮಾಡುತ್ತಿರುವುದನ್ನು ಮತ್ತು ದೇವಾಲಯದಲ್ಲಿ ಚಿಕ್ಕಮಕ್ಕಳು ಯೇಸುವನ್ನು ಕೊಂಡಾಡುತ್ತಿರುವುದನ್ನು ಅವರು ಗಮನಿಸಿದರು. ಚಿಕ್ಕ ಮಕ್ಕಳು, “ದಾವೀದನ ಕುಮಾರನಿಗೆ ಸ್ತೋತ್ರವಾಗಲಿ” ಎಂದು ಕೂಗುತ್ತಿದ್ದರು. ಇವುಗಳಿಂದಾಗಿ ಯಾಜಕರು ಮತ್ತು ಧರ್ಮೋಪದೇಶಕರು ಕೋಪಗೊಂಡರು.


ಸರ್ವಜನಾಂಗಗಳೇ, ಕೇಳಿರಿ, ಭೂನಿವಾಸಿಗಳೆಲ್ಲರೇ, ಆಲಿಸಿರಿ.


ಯೇಸು ಮಾಡಿದ ಈ ಅದ್ಭುತಕಾರ್ಯವನ್ನು ಕೇಳಿ, ಅನೇಕ ಜನರು ಯೇಸುವನ್ನು ಎದುರುಗೊಳ್ಳಲು ಹೋಗಿದ್ದರು.


ಅಲ್ಲಿ ಗ್ರೀಕ್ ಜನರು ಸಹ ಇದ್ದರು. ಪಸ್ಕಹಬ್ಬದಲ್ಲಿ ಆರಾಧಿಸುವುದಕ್ಕಾಗಿ ಜೆರುಸಲೇಮಿಗೆ ಹೋಗಿದ್ದವರಲ್ಲಿ ಇವರೂ ಸೇರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು