Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:25 - ಪರಿಶುದ್ದ ಬೈಬಲ್‌

25 ತನ್ನ ಸ್ವಂತ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ಈ ಲೋಕದಲ್ಲಿ ತನ್ನ ಪ್ರಾಣವನ್ನು ದ್ವೇಷಿಸುವವನು ಅದನ್ನು ಉಳಿಸಿಕೊಳ್ಳುವನು. ಅವನು ನಿತ್ಯಜೀವವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ತನ್ನ ಪ್ರಾಣವನ್ನು ಈ ಲೋಕದಲ್ಲಿ ದ್ವೇಷಿಸುವವನು ಅದನ್ನು ನಿತ್ಯಜೀವಕ್ಕಾಗಿ ಕಾಯ್ದಿರಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ತನ್ನ ಪ್ರಾಣದ ಮೇಲೆ ಮಮತೆಯಿಡುವವನು ಅದನ್ನು ಕಳಕೊಳ್ಳುವನು, ಇಹಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೊ ಕೊನ್ ಅಪ್ನಾಚ್ಯಾ ಜಿವಾಚೊ ಪ್ರೆಮ್ ಕರ್‍ತಾ, ತೊ ತೆ ಕಳ್ದುನ್ ಘೆತಾ, ಅನಿ ಜೊ ಕೊನ್ ಹ್ಯಾ ಜಗಾತ್ ಅಪ್ನಾಚ್ಯಾ ಸ್ವಂತ್ ಜಿವಾಚೊ ದ್ವೆಸ್ ಕರ್‍ತಾ ತೊ ಅಪ್ನಾಚೊ ಜಿವ್ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ ರಾಕುನ್ ಥವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:25
13 ತಿಳಿವುಗಳ ಹೋಲಿಕೆ  

ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಪಡೆದುಕೊಳ್ಳುವನು.


“ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ತನ್ನ ಪ್ರಾಣವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು.


ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ.


ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ಅದನ್ನು ಉಳಿಸಿಕೊಳ್ಳುವನು.


“ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.


ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ.


ನನ್ನನ್ನು ಹಿಂಬಾಲಿಸಲು ತಮ್ಮ ಮನೆಗಳನ್ನು, ಸಹೋದರ ಸಹೋದರಿಯರನ್ನು, ತಂದೆತಾಯಿಗಳನ್ನು, ಮಕ್ಕಳನ್ನು ಇಲ್ಲವೆ ಆಸ್ತಿಯನ್ನು ತ್ಯಜಿಸಿದ ಪ್ರತಿಯೊಬ್ಬರು ತಾವು ಬಿಟ್ಟವುಗಳಿಗಿಂತ ಹೆಚ್ಚಾಗಿ ಪಡೆಯುತ್ತಾರೆ. ಅಲ್ಲದೆ ನಿತ್ಯಜೀವವನ್ನೂ ಹೊಂದಿಕೊಳ್ಳುತ್ತಾರೆ.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ಈ ಲೋಕದ ಕಾರ್ಯಗಳೆಲ್ಲಾ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ನನಗೆ ಕಂಡುಬಂದದ್ದರಿಂದ ಜೀವನವೇ ನನಗೆ ಅಸಹ್ಯವಾಯಿತು.


ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.


ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು