Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:28 - ಪರಿಶುದ್ದ ಬೈಬಲ್‌

28 ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೊ!” ಎಂದು ಹೇಳಿದನು. ಆಗ ಪರಲೋಕದಿಂದ, “ನನ್ನ ಹೆಸರನ್ನು ಮಹಿಮೆಪಡಿಸಿಕೊಂಡಿದ್ದೇನೆ. ನಾನು ಮತ್ತೆ ಮಹಿಮೆಪಡಿಸಿಕೊಳ್ಳುವೆನು” ಎಂಬ ವಾಣಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ‘ಪಿತನೇ, ನಿಮ್ಮ ನಾಮ ಮಹಿಮೆಯನ್ನು ಬೆಳಗಿಸಿ’ “ ಎಂದು ನುಡಿದರು. ಆಗ, “ಹೌದು, ಆ ಮಹಿಮೆಯನ್ನು ಬೆಳಗಿಸಿದ್ದೇನೆ, ಪುನಃ ಬೆಳಗಿಸುತ್ತೇನೆ,” ಎಂಬ ಸ್ವರ್ಗೀಯ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಅದಕ್ಕೆ - ಮಹಿಮೆಪಡಿಸಿದ್ದೇನೆ, ತಿರಿಗಿ ಮಹಿಮೆಪಡಿಸುವೆನು ಎಂದು ಆಕಾಶವಾಣಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಬಾಬಾ, ತುಜೆ ನಾವ್ ಮಹಿಮೆವಂತ್ ಹೊಯ್ ಸಾರ್ಕೆ ಕರ್! ತನ್ನಾ ಸರ್ಗಾವೈನಾ ಮಿಯಾ ತೆ ಮಹಿಮೆವಂತ್ ಕರ್‍ಲಾ ಅನಿ ಅನಿ ಎಗ್ದಾ ತೆ ಮಹಿಮೆವಂತ್ ಕರ್‍ತಾ” ಮನುನ್ ಧನ್ ಆಯ್ಕೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:28
22 ತಿಳಿವುಗಳ ಹೋಲಿಕೆ  

ಯೇಸು ಎರಡನೆಯ ಸಾರಿ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಈ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು.


ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.


ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ಈತನೇ (ಯೇಸು) ನನ್ನ ಪ್ರಿಯ ಮಗನು. ಈತನನ್ನು ನಾನು ಬಹಳ ಮೆಚ್ಚಿದ್ದೇನೆ” ಎಂದು ಹೇಳಿತು.


ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.


ಆತನಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರವಾಗಲಿ. ಆಮೆನ್.


ತನ್ನ ನಾನಾ ವಿಧವಾದ ಜ್ಞಾನವು ಆಕಾಶಮಂಡಲದಲ್ಲಿರುವ ಎಲ್ಲಾ ಅಧಿಪತಿಗಳಿಗೂ ಅಧಿಕಾರಿಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶವಾಗಿತ್ತು.


ದೇವರು ತನ್ನ ಮಹಾತಿಶಯವಾದ ಕೃಪೆಯನ್ನು ಮುಂದಿನ ಕಾಲದಲ್ಲೆಲ್ಲಾ ತೋರಿಸಬೇಕೆಂದು ಹೀಗೆ ಮಾಡಿದ್ದಾನೆ. ದೇವರು ಈ ಕೃಪೆಯನ್ನು ತನ್ನ ಕರುಣೆಯ ಮೂಲಕ ನಮಗೆ ಕ್ರಿಸ್ತ ಯೇಸುವಿನಲ್ಲಿ ತೋರಿಸುತ್ತಾನೆ.


ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು! ತಂದೆಯು ನನಗೆ ಕೊಟ್ಟಿರುವ ಸಂಕಟದ ಪಾತ್ರೆಯನ್ನು ನಾನು ಸ್ವೀಕರಿಸಿಕೊಳ್ಳಬೇಕು” ಎಂದು ಹೇಳಿದನು.


ಯೇಸು ಇದನ್ನು ಕೇಳಿದಾಗ, “ಈ ಕಾಯಿಲೆಯು ದೇವರ ಮತ್ತು ದೇವಕುಮಾರನ ಮಹಿಮೆಗಾಗಿ ಬಂದಿದೆಯೇ ಹೊರತು ಮರಣಕ್ಕಾಗಿಯಲ್ಲ” ಎಂದು ಹೇಳಿದನು.


ಯೇಸು, “ಅವನ ಪಾಪವಾಗಲಿ ಅವನ ತಂದೆತಾಯಿಗಳ ಪಾಪವಾಗಲಿ ಇದಕ್ಕೆ ಕಾರಣವಲ್ಲ. ದೇವರ ಕಾರ್ಯವು ಅವನಲ್ಲಿ ತೋರಿಬಲೆಂದು ಹೀಗಾಗಿದ್ದಾನೆ.


ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು ಇವನೇ. ಈತನಿಗೆ ವಿಧೇಯರಾಗಿರಿ” ಎಂಬ ವಾಣಿ ಕೇಳಿಸಿತು.


ಪವಿತ್ರಾತ್ಮನು ಆತನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದು ಬಂದನು. ಆ ಕೂಡಲೇ, ಪರಲೋಕದಿಂದ ಧ್ವನಿಯೊಂದು ಹೊರಟು, “ನೀನು ನನ್ನ ಪ್ರಿಯ ಮಗನು, ನಾನು ನಿನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.


ಬಳಿಕ ಯೇಸು, “ಅಪ್ಪಾ, ತಂದೆಯೇ! ನಿನಗೆ ಎಲ್ಲವೂ ಸಾಧ್ಯ. ಈ ಸಂಕಟದ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಚಿತ್ತದಂತೆ ಮಾಡದೆ, ನಿನ್ನ ಚಿತ್ತದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


ಆಗ ಮೋಡವು ಬಂದು, ಅವರನ್ನು ಮುಸುಕಿತು. ಆ ಮೋಡದ ಒಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ಈತನಿಗೆ ವಿಧೇಯರಾಗಿ” ಎಂದು ಹೇಳಿತು.


ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ನೀನೇ ನನ್ನ ಪ್ರಿಯ ಮಗನು. ನಾನು ನಿನ್ನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.


ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ಹೌದು ತಂದೆಯೇ, ಇದು ನಿಜವಾಗಿಯೂ ನಿನ್ನ ಚಿತ್ತವಾಗಿದ್ದುದರಿಂದ ನೀನು ಹೀಗೆ ಮಾಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು