Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:37 - ಪರಿಶುದ್ದ ಬೈಬಲ್‌

37 ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆತನು ಅವರ ಮುಂದೆ ಅಷ್ಟು ಸೂಚಕಕಾರ್ಯಗಳನ್ನು ಮಾಡಿದರೂ ಅವರು ಆತನನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತೆನಿ ತೆಂಚ್ಯಾ ಇದ್ರಾಕ್ ಎವ್ಡಿ ಸಗ್ಳಿ ಅಜಾಪಾ ಕರ್ಲ್ಯಾರ್ ಬಿ, ತೆನಿ ತ್ಯೆಚೆವರ್ತಿ ವಿಶ್ವಾಸ್ ಕರುಕ್ನಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:37
9 ತಿಳಿವುಗಳ ಹೋಲಿಕೆ  

“ಅದಕ್ಕೆ ಅಬ್ರಹಾಮನು ಅವನಿಗೆ, ‘ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳುವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ’” ಎಂದು ಹೇಳಿದನು.


ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.


ಆತನು ತನ್ನ ಸ್ವಾಸ್ತ್ಯಕ್ಕೆ ಬಂದನು. ಆದರೆ ಆತನ ಸ್ವಂತ ಜನರು ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ.


ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.


ನಂತರ ಯೇಸು, ತಾನು ಯಾವ ಪಟ್ಟಣಗಳಲ್ಲಿ ಹೇರಳವಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನೋ ಆ ಪಟ್ಟಣಗಳನ್ನು ಖಂಡಿಸಿದನು. ಏಕೆಂದರೆ ಆ ಪಟ್ಟಣಗಳಲ್ಲಿದ್ದ ಜನರು ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳಲಿಲ್ಲ ಮತ್ತು ಪಾಪ ಮಾಡುವುದನ್ನು ನಿಲ್ಲಿಸಲಿಲ್ಲ.


ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.


ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು.


ಆದ್ದರಿಂದ ನೀವು ಬೆಳಕನ್ನು ಇನ್ನೂ ಹೊಂದಿರುವಾಗಲೇ ಅದರಲ್ಲಿ ನಂಬಿಕೆ ಇಡಿರಿ. ಆಗ ನೀವು ಬೆಳಕಿನವರಾಗುವಿರಿ” ಎಂದು ಹೇಳಿದನು. ಈ ಸಂಗತಿಗಳನ್ನು ಹೇಳಿದ ಮೇಲೆ ಯೇಸು ಅಲ್ಲಿಂದ ಹೊರಟು, ತನ್ನನ್ನು ಜನರು ಕಂಡುಕೊಳ್ಳಲಾಗದ ಸ್ಥಳಕ್ಕೆ ಹೋದನು.


ಇದರಿಂದಾಗಿ, ಪ್ರವಾದಿಯಾದ ಯೆಶಾಯನು ಹೇಳಿದ್ದ ಮಾತುಗಳು ನೆರವೇರಿದವು. ಅದೇನೆಂದರೆ: “ಪ್ರಭುವೇ, ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಪ್ರಭುವಿನ ಬಾಹುಬಲವು ಯಾರಿಗೆ ಗೋಚರವಾಯಿತು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು