Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:40 - ಪರಿಶುದ್ದ ಬೈಬಲ್‌

40 “ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 “ದೆವಾನ್ ತುಮ್ಚೆ ಡೊಳೆ ಕುಡ್ಡೆ ಕರ್‍ಲ್ಯಾನಾಯ್ ಅನಿ ತೆಂಚಿ ಮನಾಂಚಿ ದಾರಾ ಧಾಪ್ಲ್ಯಾನಾಯ್” “ತಸೆಮನುನ್ ತೆಂಚ್ಯಾ ಡೊಳ್ಯಾಕ್ನಿ ದಿಸಿನಾ ಅನಿ ತೆಂಚ್ಯಾ ಮನಾಕ್ನಿ ಕಾಯ್ ಬಿ ಅರ್ತ್ ಹೊಯ್ನಾ ಅನಿ ಮಿಯಾ ತೆಂಕಾ ಗುನ್ ಕರುಕ್ ಮನುನ್ ತೆನಿ ಮಾಜಾಕ್ಡೆ ಪರ್ತುನ್ ಯೆಯ್ನಾತ್ ಮನುನ್ ದೆವ್ ಮನ್ತಾ.” ಮನುನ್ ಬಿ ಸಾಂಗಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:40
44 ತಿಳಿವುಗಳ ಹೋಲಿಕೆ  

ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ‘ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.’


ಏಕೆಂದರೆ: ‘ಅವರು ಕಣ್ಣಾರೆ ನೋಡಿಯೂ ಕಾಣರು. ಕಿವಿಯಾರೆ ಕೇಳಿಯೂ ಗ್ರಹಿಸರು. ಅವರು ನೋಡಿ ಗ್ರಹಿಸಿಕೊಂಡರೆ, ಪರಿವರ್ತನೆಗೊಂಡು ಪಾಪಕ್ಷಮೆ ಹೊಂದಿಯಾರು’” ಎಂದನು.


ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣುವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು.


“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


“ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ.


ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ. ನನಗೆ ವಿಶ್ವಾಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಬನ್ನಿ” ಎಂದು ಹೇಳುತ್ತಾನೆ. “ಅದಕ್ಕೆ ಜನರು, ‘ಆಗಲಿ ನಿನ್ನಲ್ಲಿಗೆ ಬರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.


ಅವರ ಒಡೆದ ಹೃದಯಗಳನ್ನು ಆತನು ವಾಸಿಮಾಡುವನು; ಅವರ ಗಾಯಗಳನ್ನು ಕಟ್ಟುವನು.


ನಾನು ಆತನಿಗೆ, “ಯೆಹೋವನೇ, ನನಗೆ ದಯೆತೋರು. ನಾನು ನಿನಗೆ ವಿರೋಧವಾಗಿ ಪಾಪಮಾಡಿದ್ದೇನೆ, ಆದರೂ ನನ್ನನ್ನು ಕ್ಷಮಿಸಿ ಗುಣಪಡಿಸು” ಎಂದು ಹೇಳಿದೆ.


ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ.


ತಾವು ಶಕ್ತಿಶಾಲಿಗಳೆಂಬ ಭಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.


ಆದರೆ ಇಂದಿನ ತನಕವೂ ನೀವು ಅದನ್ನು ಸಂಪೂರ್ಣವಾಗಿ ಅರಿಯಲಿಲ್ಲ. ನೀವು ಕಂಡವುಗಳನ್ನು ಮತ್ತು ಕೇಳಿದವುಗಳನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳದಂತೆ ಯೆಹೋವನು ಮಾಡಿದನು.


ಆದ್ದರಿಂದ ದೇವರು ತಾನು ಯಾರಿಗೆ ಕರುಣೆಯನ್ನು ತೋರಬಯಸುತ್ತಾನೋ ಅವರಿಗೆ ಕರುಣೆಯನ್ನು ತೋರಿಸುತ್ತಾನೆ. ದೇವರು ಯಾರನ್ನು ಮೊಂಡರನ್ನಾಗಿ ಮಾಡಬಯಸುತ್ತಾನೋ ಅವರನ್ನು ಮೊಂಡರನ್ನಾಗಿ ಮಾಡುತ್ತಾನೆ.


‘ಈ ಜನರ ಬಳಿಗೆ ಹೋಗಿ ಇಂತೆನ್ನಿರಿ: ನೀನು ಕಿವಿಗೊಟ್ಟು ಕೇಳಿದರೂ ಅರ್ಥಮಾಡಿಕೊಳ್ಳವುದಿಲ್ಲ; ಕಣ್ಣಾರೆ ಕಂಡರೂ ಗ್ರಹಿಸಿಕೊಳ್ಳುವುದಿಲ್ಲ.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು.


ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.


ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.


ಯೇಸು ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದನ್ನು ಅವರು ನೋಡಿದ್ದರೂ ಅದರ ಅರ್ಥವನ್ನು ಗ್ರಹಿಸಲಿಲ್ಲ. ಅವರು ಅದನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥರಾಗಿರಲಿಲ್ಲ.


ಆದರೆ ನಾವು ಮಾಡಿದ ದುಷ್ಟತನಕ್ಕಾಗಿಯೇ ಆತನು ಬಾಧಿತನಾದನು. ನಮ್ಮ ಅಪರಾಧಗಳ ನಿಮಿತ್ತ ಆತನು ಜಜ್ಜಲ್ಪಟ್ಟನು. ನಾವು ಹೊಂದಬೇಕಾಗಿದ್ದ ಶಿಕ್ಷೆಯನ್ನು ಆತನೇ ಅನುಭವಿಸಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಈಜಿಪ್ಟಿನವರು ನಿಮ್ಮನ್ನು ಬೆನ್ನಟ್ಟುವಂತೆ ನಾನು ಅವರ ಹೃದಯಗಳನ್ನು ಕಠಿಣಗೊಳಿಸುವುದರಿಂದ ನಾನು ಫರೋಹನಿಗಿಂತಲೂ ಅವನ ಎಲ್ಲಾ ರಾಹುತರುಗಳಿಗಿಂತಲೂ ರಥಗಳಿಗಿಂತಲೂ ಶಕ್ತಿಶಾಲಿ ಎಂಬುದನ್ನು ನಿಮಗೆ ತೋರಿಸುವೆನು.


ಇಸ್ರೇಲರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ಧೈರ್ಯದಿಂದ ಹೋಗುತ್ತಿದ್ದರು. ಆದರೆ ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವನು ಕಠಿಣಗೊಳಿಸಿದ್ದರಿಂದ ಅವನು ಇಸ್ರೇಲರನ್ನು ಬೆನ್ನಟ್ಟಿದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.


ಯೆಹೋವನು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಮೋಶೆ ಮತ್ತು ಆರೋನರ ಮಾತಿಗೆ ಕಿವಿಗೊಡಲಿಲ್ಲ.


ಆದರೆ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ನನ್ನ ಆಜ್ಞೆಗಳಿಗೆ ವಿಧೇಯನಾಗುವುದಿಲ್ಲ. ಆಗ ನಾನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡುವೆನು. ಆದರೂ ಅವನು ವಿಧೇಯನಾಗುವುದಿಲ್ಲ.


ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.


ಯೆಹೋವನು ಅವರಿಗೆ, ‘ನಿಮ್ಮಲ್ಲಿ ಯಾರಾದರೂ ರಾಜನಾದ ಅಹಾಬನನ್ನು ಪ್ರೇರೇಪಿಸುವಿರಾ? ಅವನು ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ಹೋಗಬೇಕೆಂದು ನಾನು ಅಪೇಕ್ಷೆಪಟ್ಟಿದ್ದೇನೆ. ಅಲ್ಲಿ ಅವನು ಕೊಲ್ಲಲ್ಪಡುವನು’ ಎಂದು ಹೇಳಿದನು. ತಾವು ಏನು ಮಾಡಬೇಕೆಂಬುದರ ಬಗ್ಗೆ ದೂತರಲ್ಲಿ ಒಮ್ಮತದ ಅಭಿಪ್ರಾಯವುಂಟಾಗಲಿಲ್ಲ.


ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗು. ನಾನು ಅದ್ಭುತಕಾರ್ಯಗಳನ್ನು ತೋರಿಸಲು ಅವಕಾಶವಾಗಲೆಂದು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ.


ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು.


ಆಗ ಯೆಹೋವನು, “ನೀನು ಹೋಗಿ ಇದನ್ನು ಜನರಿಗೆ ಸಾರು: ‘ಸರಿಯಾಗಿ ಕೇಳಿಸಿಕೊಳ್ಳಿ, ಆದರೆ ಅರ್ಥಮಾಡಿಕೊಳ್ಳಬೇಡಿ. ಸೂಕ್ಷ್ಮವಾಗಿ ನೋಡಿ, ಆದರೆ ಕಲಿತುಕೊಳ್ಳಬೇಡಿ.’


ಆದಕಾರಣವೇ ಜನರು ನಂಬಲಾಗಲಿಲ್ಲ. ಏಕೆಂದರೆ ಯೆಶಾಯನು ಮತ್ತೊಂದು ಕಡೆಯಲ್ಲಿ ಹೀಗೆ ಹೇಳಿದ್ದಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು