Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:43 - ಪರಿಶುದ್ದ ಬೈಬಲ್‌

43 ಈ ಜನರು ದೇವರ ಹೊಗಳಿಕೆಗಿಂತಲೂ ಜನರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದೇವರಿಂದ ದೊರಕುವ ಮನ್ನಣೆಗಿಂತ ಮಾನವರಿಂದ ಸಿಗುವ ಮನ್ನಣೆಯೇ ಅವರಿಗೆ ಪ್ರಿಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಯಾಕಂದರೆ ದೇವರಿಂದ ಬರುವ ಮಾನಕ್ಕಿಂತ ಮನುಷ್ಯರಿಂದ ಬರುವ ಮಾನವೇ ಅವರಿಗೆ ಇಷ್ಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತೆನಿ ದೆವಾಚ್ಯಾ ಶಾಬಾಸ್ಕಿನ್ಬಿ ಜಾಸ್ತಿ ಮಾನ್ಸಾಚ್ಯಾ ಶಾಬಾಸ್ಕಿಕ್ ಪ್ರೆಮ್ ಕರ್‍ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:43
20 ತಿಳಿವುಗಳ ಹೋಲಿಕೆ  

ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?


“ಮನುಷ್ಯರಿಂದ ಬರುವ ಹೊಗಳಿಕೆಯು ನನಗೆ ಬೇಕಾಗಿಲ್ಲ.


ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.


ಜನರಿಂದ ಬರುವ ಮಾನಮರ್ಯಾದೆಗಳನ್ನು ನಿಮ್ಮಿಂದಾಗಲಿ ಇತರ ಜನರಿಂದಾಗಲಿ ನಾವೆಂದೂ ಬಯಸಲಿಲ್ಲ.


ಒಬ್ಬನು ತನ್ನನ್ನು ಒಳ್ಳೆಯವನೆಂದು ಹೇಳಿಕೊಂಡ ಮಾತ್ರಕ್ಕೆ ಅವನು ಸ್ವೀಕೃತನೆಂದಲ್ಲ. ಪ್ರಭುವು ಯಾರನ್ನು ಒಳ್ಳೆಯವನೆಂದು ಯೋಚಿಸುತ್ತಾನೊ ಅವನೇ ಸ್ವೀಕೃತನಾಗಿದ್ದಾನೆ.


“ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.


ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ, ಆ ಮಹಿಮೆಗೆ ಯಾವ ಬೆಲೆಯೂ ಇಲ್ಲ. ನನ್ನ ತಂದೆಯೇ ನನ್ನನ್ನು ಮಹಿಮೆಪಡಿಸುವನು. ನೀವು ಆತನನ್ನೇ ನಿಮ್ಮ ದೇವರೆಂದು ಹೇಳಿಕೊಳ್ಳುತ್ತೀರಿ.


ಅರಸನು ಆ ಸೇವಕನಿಗೆ, ‘ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ಸಾತ್ವಿಕವೂ ಶಾಂತವೂ ಆದ ಆಂತರ್ಯವೇ ನಿಮ್ಮ ಸೌಂದರ್ಯವಾಗಿರಬೇಕು. ಆ ಸೌಂದರ್ಯ ನಶಿಸಿಹೋಗುವುದಿಲ್ಲ. ಅದು ದೇವರಿಗೆ ಬಹು ಅಮೂಲ್ಯವಾದದ್ದು.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ಬಲಿಷ್ಠರೂ ದೃಢಕಾಯರೂ ತಿಂದು ದೇವರಮುಂದೆ ಅಡ್ಡಬೀಳುವರು. ಸಾಯುವವರೂ ಸತ್ತುಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆಂಬುದು ಸರಿ. ಆದರೆ ದಯವಿಟ್ಟು ನನ್ನ ಜೊತೆಯಲ್ಲಿ ಹಿಂದಿರುಗಿ ಬಾ. ಇಸ್ರೇಲಿನ ಜನರೆದುರು ಮತ್ತು ನಾಯಕರೆದುರು ಸ್ವಲ್ಪ ಗೌರವವನ್ನು ತೋರಿಸು. ನನ್ನ ಜೊತೆಯಲ್ಲಿ ನೀನು ಹಿಂದಿರುಗಿ ಬಂದರೆ, ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸಬಹುದು” ಎಂದು ಬೇಡಿಕೊಂಡನು.


ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.


ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.


ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಈ ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು