Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:46 - ಪರಿಶುದ್ದ ಬೈಬಲ್‌

46 ನಾನೇ ಬೆಳಕಾಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಕತ್ತಲೆಯಲ್ಲಿ ಇರಬಾರದೆಂದು ನಾನೇ ಈ ಲೋಕಕ್ಕೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನನ್ನನ್ನು ನಂಬುವ ಒಬ್ಬನಾದರೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಮಿಯಾ ಹ್ಯಾ ಜಗಾಕ್ ಎಕ್ ಉಜ್ವೊಡ್ ಹೊವ್ನ್ ಯೆಲಾ. ತೆಚೆಸಾಟ್ನಿ ಮಾಜೆವರ್ತಿ ವಿಶ್ವಾಸ್ ಕರ್‍ತಲೊ ಕೊನ್ ಬಿ ಕಾಳ್ಕಾತ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:46
19 ತಿಳಿವುಗಳ ಹೋಲಿಕೆ  

ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು! ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ.


ನಾನು ಈ ಲೋಕದಲ್ಲಿರುವಾಗ, ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ” ಎಂದು ಹೇಳಿದನು.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ನೀನು ಕುರುಡರ ಕಣ್ಣುಗಳಿಗೆ ದೃಷ್ಟಿಯನ್ನು ಕೊಡುವೆ; ಸೆರೆಮನೆಯಲ್ಲಿರುವ ಎಷ್ಟೋ ಜನರನ್ನು ನೀನು ಬಿಡಿಸುವೆ. ಕತ್ತಲೆಯಲ್ಲಿ ವಾಸಿಸುವ ಎಷ್ಟೋ ಜನರನ್ನು ನೀನು ಸೆರೆಮನೆಯಿಂದ ಬಿಡಿಸುವೆ.


ಆ ತೀರ್ಪು ಏನೆಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಕೃತ್ಯಗಳನ್ನು ಮಾಡುತ್ತಿದ್ದರು.


ನಿಜವಾದ ಬೆಳಕು ಈ ಲೋಕಕ್ಕೆ ಆಗಮಿಸಲಿತ್ತು. ಈ ನಿಜವಾದ ಬೆಳಕೇ ಎಲ್ಲಾ ಜನರಿಗೆ ಬೆಳಕನ್ನು ಕೊಡುತ್ತದೆ.


ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಆ ಜನರಿಗೆ ಬೆಳಕು ದೊರೆಯಿತು.”


ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ಬೆಟ್ಟಗಳನ್ನೂ ಪರ್ವತಗಳನ್ನೂ ನಾಶಪಡಿಸುವೆನು. ಅಲ್ಲಿ ಬೆಳೆಯುವ ಸಸ್ಯಗಳನ್ನೆಲ್ಲಾ ಒಣಗಿಸಿಬಿಡುವೆನು. ನದಿಗಳನ್ನು ಒಣ ನೆಲವನ್ನಾಗಿ ಮಾರ್ಪಡಿಸುವೆನು; ನೀರಿನ ಹಳ್ಳಗಳನ್ನು ಒಣಗಿಸಿಬಿಡುವೆನು.


ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣುವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು.


ನಿನ್ನ ದೇವರು ಹೇಳುವುದೇನೆಂದರೆ: “ನನ್ನ ಜನರನ್ನು ಸಂತೈಸು, ಸಂತೈಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು