Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:50 - ಪರಿಶುದ್ದ ಬೈಬಲ್‌

50 ತಂದೆಯ ಆಜ್ಞೆಯು ನಿತ್ಯಜೀವಕ್ಕೆ ನಡೆಸುತ್ತದೆ ಎಂದು ನಾನು ಬಲ್ಲೆನು. ಆದ್ದರಿಂದ ತಂದೆಯು ನನಗೆ ಹೇಳಿಕೊಟ್ಟ ಸಂಗತಿಗಳನ್ನೇ ನಾನು ತಿಳಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಅವರ ಆಜ್ಞೆಯೇ ನಿತ್ಯಜೀವದಾಯಕ ಎಂದು ನಾನು ಬಲ್ಲೆ. ಆದ್ದರಿಂದಲೇ ಪಿತನು ಹೇಳಿದಂತೆಯೇ ನಾನು ಮಾತನಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆತನ ಆಜ್ಞೆ ನಿತ್ಯಜೀವವಾಗಿದೆ ಎಂದು ಬಲ್ಲೆನು. ಆದದರಿಂದ ನಾನು ಮಾತಾಡುವದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತಾಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅವರ ಆಜ್ಞೆಯು ನಿತ್ಯಜೀವಕ್ಕೆ ಮಾರ್ಗವಾಗಿದೆ ಎಂದು ನಾನು ಬಲ್ಲೆನು. ಆದ್ದರಿಂದ, ತಂದೆಯು ನನಗೆ ಹೇಳಿದಂತೆಯೇ ಮಾತನಾಡುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಅನಿ ತೆನಿ ದಿಲ್ಲಿ ಹುಕುಮ್ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ ಮನುನ್ ಮಾಕಾ ಗೊತ್ತ್ ಹಾಯ್, ತಸೆಮನುನ್ ಮಿಯಾ ಮಾಜ್ಯಾ ಬಾಬಾನ್ ಸಾಂಗ್ ಮನುನ್ ಸಾಂಗಲ್ಲೆಚ್ ಸಾಂಗ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:50
12 ತಿಳಿವುಗಳ ಹೋಲಿಕೆ  

ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ.


ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಕ್ರಿಸ್ತನು ನಮಗೆ ಕೊಡುವುದಾಗಿ ಮಾಡಿದ್ದ ವಾಗ್ದಾನವೇ ಈ ನಿತ್ಯಜೀವ.


ಆದರೆ ನನಗೆ ಕರುಣೆ ದೊರೆಯಿತು. ಕ್ರಿಸ್ತ ಯೇಸು ತನ್ನ ಅಮಿತವಾದ ತಾಳ್ಮೆಯನ್ನು ನನ್ನಲ್ಲಿ ತೋರ್ಪಡಿಸುವುದಕ್ಕಾಗಿಯೇ ನನಗೆ ಕರುಣೆಯನ್ನು ದಯಪಾಲಿಸಿದನು. ಪಾಪಿಗಳಲ್ಲೆಲ್ಲಾ ಮುಖ್ಯನಾಗಿದ್ದ ನನಗೆ ಕ್ರಿಸ್ತನು ತನ್ನ ತಾಳ್ಮೆಯನ್ನು ತೋರಿದನು. ನಿತ್ಯಜೀವಕ್ಕಾಗಿ ಕ್ರಿಸ್ತನಲ್ಲಿ ನಂಬಿಕೆಯನ್ನಿಡುವ ಜನರಿಗೆ ನಾನು ದೃಷ್ಟಾಂತವಾಗಿರಬೇಕೆಂದೇ ಆತನು ನನ್ನನ್ನು ಕರುಣಿಸಿದನು.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು.


ಅದಕ್ಕೆ ಉತ್ತರವಾಗಿ ಆತನು ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಮಗನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ತಂದೆಯು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ತಂದೆಯು ಮಾಡುವ ಕಾರ್ಯಗಳನ್ನೇ ಮಗನೂ ಮಾಡುತ್ತಾನೆ.


ಆದ್ದರಿಂದ ಆತನು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೇರಿಸುವಿರಿ (ಕೊಲ್ಲುವಿರಿ). ನಾನೇ ಆತನೆಂಬುದು ಆಗ ನಿಮಗೆ ತಿಳಿಯುವುದು. ನಾನು ಈ ಕಾರ್ಯಗಳನ್ನು ನನ್ನ ಸ್ವಂತ ಅಧಿಕಾರದಿಂದ ಮಾಡುತ್ತಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳುವಿರಿ. ಅಲ್ಲದೆ, ತಂದೆಯು ನನಗೆ ಉಪದೇಶಿಸಿದ ಸಂಗತಿಗಳನ್ನು ಮಾತ್ರ ನಾನು ಹೇಳುತ್ತೇನೆಂಬುದೂ ನಿಮಗೆ ಅರಿವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು