Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:1 - ಪರಿಶುದ್ದ ಬೈಬಲ್‌

1 ಯೇಸು, “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ದೇವರಲ್ಲಿ ವಿಶ್ವಾಸವಿಡಿರಿ. ನನ್ನಲ್ಲಿಯೂ ವಿಶ್ವಾಸವಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ತೆಂಕಾ, “ತುಮಿ ಭಿಂವ್ನಕಾಶಿ ಅನಿ ಬೆಜಾರ್ ಹೊವ್‍ನಕಾಶಿ ದೆವಾಚ್ಯಾ ವರ್ತಿ ವಿಶ್ವಾಸ್ ಕರಾ ಅನಿ ಮಾಜೆ ವರ್‍ತಿಬಿ ವಿಶ್ವಾಸ್ ಕರಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:1
37 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.


ಬಳಿಕ ಯೇಸು ಗಟ್ಟಿಯಾಗಿ ಹೀಗೆಂದನು: “ನನ್ನಲ್ಲಿ ನಂಬಿಕೆ ಇಡುವವನು ನನ್ನನ್ನು ಕಳುಹಿಸಿದಾತನಲ್ಲಿ (ದೇವರು) ನಿಜವಾಗಿಯೂ ನಂಬಿಕೆ ಇಡುವವನಾಗಿದ್ದಾನೆ.


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.


ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ.


ಆದಕಾರಣವೇ ನನ್ನ ಪ್ರಾರ್ಥನೆಗಳಲ್ಲಿ ನಾನು ನಿಮ್ಮನ್ನು ಜ್ಞಾಪಿಸಿಕೊಂಡು ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಸ್ತೋತ್ರ ಸಲ್ಲಿಸುತ್ತೇನೆ. ಪ್ರಭುವಾದ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ ಮತ್ತು ಎಲ್ಲಾ ದೇವಜನರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದಂದಿನಿಂದ ನಾನು ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.


ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?’ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.


ಪ್ರಭುವಿನ ದಿನವು ಈಗಾಗಲೇ ಬಂದುಬಿಟ್ಟಿತು ಎಂದು ಯಾರಾದರು ನಿಮಗೆ ಹೇಳಿದರೆ ಆ ಕೂಡಲೇ ಕಳವಳಗೊಳ್ಳಬೇಡಿ ಅಥವಾ ಭಯಪಡಬೇಡಿ. ಯಾವನಾದರೂ ತನ್ನ ಪ್ರವಾದನೆಯಲ್ಲಾಗಲಿ ಉಪದೇಶದಲ್ಲಾಗಲಿ ಹಾಗೆ ಹೇಳುವ ಸಾಧ್ಯತೆ ಇದೆ. ಯಾವನಾದರೂ ಸುಳ್ಳುಪತ್ರವನ್ನೇ ನಮ್ಮ ಹೆಸರಿನಲ್ಲಿ ತಾನೇ ಬರೆದು ನಿಮ್ಮ ಮುಂದೆ ಓದಿ ತಿಳಿಸುವ ಸಾಧ್ಯತೆಯೂ ಇದೆ.


ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.


ಮರಿಯಳ ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದಾಗ, ತನ್ನ ಹೃದಯದಲ್ಲಿ ಬಹಳವಾಗಿ ದುಃಖಗೊಂಡು ತತ್ತರಿಸಿದನು.


ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.


ದೇವರೇ, ನಾನು ದುಃಖಿತನಾಗಿದ್ದೇನೆ, ಭಯಭೀತನಾಗಿದ್ದೇನೆ.


ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.


ಬಳಿಕ ನಾನು ಹೀಗೆ ಆಲೋಚಿಸಿಕೊಂಡೆ: “ಮಹೋನ್ನತವಾದ ದೇವರು ತನ್ನ ಶಕ್ತಿಯನ್ನು ಕಳೆದುಕೊಂಡನೇ?” ಎಂಬುದೇ ನನ್ನನ್ನು ಕಾಡಿಸುವ ಪ್ರಶ್ನೆ.


ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದರಿಂದ ನಿಮ್ಮ ಹೃದಯಗಳು ದುಃಖದಿಂದ ತುಂಬಿಹೋಗಿವೆ.


ನೀವು ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ಆಗ ನಿಮಗೆ ದೊರೆಯುವುದು ಮತ್ತು ನಿಮ್ಮ ಆನಂದವು ಪರಿಪೂರ್ಣವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು