Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:18 - ಪರಿಶುದ್ದ ಬೈಬಲ್‌

18 “ನಾನು ನಿಮ್ಮನ್ನು ತಂದೆತಾಯಿಗಳಿಲ್ಲದ ಮಕ್ಕಳಂತೆ ಒಬ್ಬಂಟಿಗರನ್ನಾಗಿ ಬಿಟ್ಟುಹೋಗುವುದಿಲ್ಲ. ನಾನು ನಿಮ್ಮ ಬಳಿಗೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ನಿಮ್ಮನ್ನು ಅನಾಥರನ್ನಾಗಿ ಬಿಟ್ಟುಹೋಗುವುದಿಲ್ಲ. ನಿಮ್ಮ ಬಳಿಗೆ ಪುನಃ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ನಿಮ್ಮನ್ನು ಅನಾಥರಾಗಿ ಬಿಡುವದಿಲ್ಲ; ನಿಮ್ಮ ಬಳಿಗೆ ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 “ಮಿಯಾ ಜಾತಾನಾ ತುಮ್ಕಾ ಅನಾಥ್ ಸರ್ಕೆ ಕರುನ್ ಸೊಡುನ್ ಜಾಯ್ನಾ, ಮಿಯಾ ಅನಿ ಪರ್ತುನ್ ತುಮ್ಚ್ಯಾಕ್ಡೆ ಯೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:18
18 ತಿಳಿವುಗಳ ಹೋಲಿಕೆ  

ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ.


ಇದು ಸತ್ಯ. ಏಕೆಂದರೆ ಎಲ್ಲಿ ಇಬ್ಬರಾಗಲಿ ಮೂವರಾಗಲಿ ನನ್ನಲ್ಲಿ ನಂಬಿಕೆಯನ್ನಿಟ್ಟು ಒಟ್ಟಾಗಿ ಸೇರಿಬಂದಿರುತ್ತಾರೋ ಅವರ ಮಧ್ಯದಲ್ಲಿ ನಾನಿರುತ್ತೇನೆ.”


ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ಆತನು ಬೇರೊಬ್ಬ ಸಹಾಯಕನನ್ನು ನಿಮಗೆ ಕೊಡುವನು. ಆ ಸಹಾಯಕನು ಸದಾಕಾಲ ನಿಮ್ಮೊಂದಿಗಿರುವನು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ತಾನೇ ಶೋಧಿಸಲ್ಪಟ್ಟು ಸಂಕಟಕ್ಕೆ ಒಳಗಾದುದರಿಂದ, ಶೋಧಿಸಲ್ಪಡುವ ಜನರಿಗೆ ಸಹಾಯ ಮಾಡಲು ಈಗ ಆತನು ಸಮರ್ಥನಾಗಿದ್ದಾನೆ.


ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”


ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.


ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?


ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು.


ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ನಾವು ಅನಾಥರಾಗಿದ್ದೇವೆ. ನಮಗೆ ತಂದೆಯೇ ಇಲ್ಲ. ನಮ್ಮ ತಾಯಂದಿರು ವಿಧವೆಗಳಂತಾಗಿದ್ದಾರೆ.


“ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ಮತ್ತೆ ನೋಡುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು