Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:22 - ಪರಿಶುದ್ದ ಬೈಬಲ್‌

22 ಆಗ ಯೂದನು (ಇಸ್ಕರಿಯೋತ ಯೂದನಲ್ಲ), “ಪ್ರಭುವೇ, ನೀನು ನಿನ್ನನ್ನು ಈ ಲೋಕಕ್ಕೆ ತೋರ್ಪಡಿಸಿಕೊಳ್ಳದೆ ನಮಗೆ ಮಾತ್ರ ತೋರ್ಪಡಿಸಿಕೊಳ್ಳಬೇಕೆಂದಿರುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೂದನು (ಇವನು ಇಸ್ಕರಿಯೋತನಲ್ಲ) - ಸ್ವಾಮೀ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವದಕ್ಕೆ ಏನು ಸಂಭವಿಸಿತು ಎಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಸ್ಕರಿಯೋತ ಅಲ್ಲದ ಮತ್ತೊಬ್ಬ ಯೂದನು, “ಸ್ವಾಮೀ, ನೀವು ಲೋಕಕ್ಕೆ ಪ್ರಕಟವಾಗದೆ ನಮಗೆ ಮಾತ್ರ ಪ್ರಕಟವಾಗುವುದು ಏಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಜುದಾಸಾನ್, ಜುದಾಸ್ ಇಸ್ಕರಿಯೊತ್ ನ್ಹಯ್, “ಧನಿಯಾ ತಿಯಾ ಅಮ್ಕಾ ಎವ್ಡೆಚ್ ತುಕಾ ದಾಕ್ವುನ್ ದಿ ಅನಿ ಜಗಾಕ್ ದಾಕ್ವುನ್ ದಿನೆಯ್ ಕಶ್ಯಾಕ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:22
12 ತಿಳಿವುಗಳ ಹೋಲಿಕೆ  

ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).


ಯೂದ (ಯಾಕೋಬನ ಮಗ) ಮತ್ತು ಇಸ್ಕರಿಯೋತ ಯೂದ (ಯೇಸುವಿಗೆ ದ್ರೋಹ ಮಾಡಿದವನು ಇವನೇ.)


ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,


ಯೇಸು ಕ್ರಿಸ್ತನ ಸೇವಕನೂ ಯಾಕೋಬನ ಸಹೋದರನೂ ಆಗಿರುವ ಯೂದನು ದೇವರಿಂದ ಕರೆಯಲ್ಪಟ್ಟವರಿಗೂ ತಂದೆಯಾದ ದೇವರಿಗೆ ಪ್ರಿಯರಾದವರಿಗೂ ಯೇಸು ಕ್ರಿಸ್ತನಲ್ಲಿ ಸುರಕ್ಷಿತವಾಗಿಡಲ್ಪಟ್ಟವರಿಗೂ ಬರೆಯವ ಪತ್ರ.


ಇದನ್ನು ಕೇಳಿದ ಆತನ ಶಿಷ್ಯರಲ್ಲಿ ಅನೇಕರು, “ಈ ಉಪದೇಶವು ಕಠಿಣವಾಗಿದೆ. ಇದನ್ನು ಯಾರು ಗ್ರಹಿಸಿಕೊಳ್ಳಬಲ್ಲರು?” ಎಂದರು.


ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.


ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.


ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ದೇಶಾಭಿಮಾನಿಯಾದ ಸೀಮೋನ


ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ನಮಗೆ ತಿನ್ನಲು ಹೇಗೆ ಕೊಡಲಾದೀತು?” ಎಂದು ತಮ್ಮತಮ್ಮೊಳಗೆ ವಾಗ್ವಾದ ಮಾಡತೊಡಗಿದರು.


ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು