Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:16 - ಪರಿಶುದ್ದ ಬೈಬಲ್‌

16 “ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮಿ ಮಾಕಾ ಎಚುನ್ ಕಾಡುಕ್ನ್ಯಾಶಿ, ಮಿಯಾ ತುಮ್ಕಾ ಎಚುನ್ ಕಾಡ್ಲಾ ಅನಿ ಜಾಸ್ತಿಚಿ ಫಳಾ ದಿವ್ ಸಾಟ್ನಿ ಮನುನ್ ನೆಮ್ಲಾ, ಹುರ್‍ತಲಿ ಫಳಾ ದಿವ್‍ಸಾಟ್ನಿ ನೆಮ್ಲಾ. ಅಶೆಚ್ ಮಾಜ್ಯಾ ನಾವಾನ್ ಬಾಬಾಕ್ಡೆನ್ ತುಮಿ ಮಾಗ್ತ್ಯಾಶಿ ತೆ ಸಗ್ಳೆ ತೊ ತುಮ್ಕಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:16
57 ತಿಳಿವುಗಳ ಹೋಲಿಕೆ  

ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರನ್ನು ಕರೆದನು. ಅವರಲ್ಲಿ ಹನ್ನೆರಡು ಮಂದಿಯನ್ನು ಆತನು ಆರಿಸಿಕೊಂಡನು. ಯೇಸು ಈ ಹನ್ನೆರಡು ಜನರಿಗೆ, “ಅಪೊಸ್ತಲರು” ಎಂದು ಹೆಸರಿಟ್ಟನು. ಅವರು ಯಾರೆಂದರೆ:


ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.


“ಅನನೀಯನು ನನಗೆ, ‘ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.


ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಆ ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಆ ಉಪದೇಶಗಳನ್ನು ಕೊಡು. ಆಗ ಅವರು ಆ ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


ಬಳಿಕ ಯೇಸು, “ನಾನು ಆರಿಸಿಕೊಂಡ ಹನ್ನೆರಡು ಮಂದಿ ನೀವೇ. ಆದರೆ ನಿಮ್ಮಲ್ಲಿರುವ ಒಬ್ಬನು ಸೈತಾನನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟನು.


ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.


ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.


ದೇವರಿಗೆ ನಮ್ಮ ಮೇಲಿರುವ ಪ್ರೀತಿಯೇ ನಿಜವಾದ ಪ್ರೀತಿ. ನಮಗೆ ದೇವರ ಮೇಲಿರುವ ಪ್ರೀತಿ ನಿಜವಾದ ಪ್ರೀತಿಯಲ್ಲ. ನಮ್ಮ ಪಾಪ ನಿವಾರಣೆಗಾಗಿ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು.


ನೀತಿವಂತನ ಕಾರ್ಯಗಳು ಜೀವವುಳ್ಳ ಮರಗಳಂತಿವೆ. ಜ್ಞಾನಿಯು ಆತ್ಮಗಳನ್ನು ಗೆದ್ದುಕೊಳ್ಳುವನು.


ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!”


ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.”


ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದು ನಿಷ್ಕಳಂಕರಾಗಿ ಜೀವಿಸುವುದನ್ನು ಕಂಡು ವಾಕ್ಯೋಪದೇಶವಿಲ್ಲದಿದ್ದರೂ ದೇವರ ವಾಕ್ಯದ ಮೇಲೆ ನಂಬಿಕೆಯಿಡಲು ನಿಮ್ಮ ನಡತೆಯಿಂದಲೇ ಪ್ರೋತ್ಸಾಹಿಸಲ್ಪಡುವರು.


ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.


ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ನೀವು ನಂಬಿ, ಪ್ರಾರ್ಥನೆಯಲ್ಲಿ ಏನನ್ನೇ ಕೇಳಿದರೂ ನಿಮಗೆ ಅದು ದೊರೆಯುವುದು” ಎಂದು ಉತ್ತರಕೊಟ್ಟನು.


ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು; ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು.


ಆ ಸುವಾರ್ತೆಗೋಸ್ಕರ ನನ್ನನ್ನು ಪ್ರಚಾರಕನನ್ನಾಗಿಯೂ ಅಪೊಸ್ತಲನನ್ನಾಗಿಯೂ ಉಪದೇಶಕನನ್ನಾಗಿಯೂ ಆರಿಸಿಕೊಳ್ಳಲಾಯಿತು.


ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.


ಕುಂಬಾರನು ತನಗೆ ಇಷ್ಟಬಂದಂತೆ ಒಂದೇ ಮಣ್ಣಿನಿಂದ ವಿವಿಧ ವಸ್ತುಗಳನ್ನು ತಯಾರಿಸುವುದಿಲ್ಲವೇ? ಅವನು ಒಂದನ್ನು ವಿಶೇಷವಾದ ಬಳಕೆಗಾಗಿಯೂ ಮತ್ತೊಂದನ್ನು ದೈನಂದಿನ ಬಳಕೆಗಾಗಿಯೂ ತಯಾರಿಸುವನು.


ಶಾಂತಿ ಸ್ಥಾಪಿಸುವುದಕ್ಕಾಗಿ ಸಮಾಧಾನಕರವಾದ ರೀತಿಯಲ್ಲಿ ಕಾರ್ಯ ಮಾಡುವವರು ಯೋಗ್ಯವಾದ ಬದುಕಿನಿಂದ ಬರುವ ಉತ್ತಮ ಫಲಗಳನ್ನು ಪಡೆಯುತ್ತಾರೆ.


ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.


ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಈ ಕೆಲಸವನ್ನು ಕೊಟ್ಟನು. ನಾನು ಈ ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.


ಆದರೆ ಯೇಸುವು ಎಲ್ಲಾ ಜನರಿಗೆ ಕಾಣಿಸಿಕೊಳ್ಳಲಿಲ್ಲ. ದೇವರಿಂದ ಮೊದಲೇ ಸಾಕ್ಷಿಗಳಾಗಿ ಆಯ್ಕೆಗೊಂಡಿದ್ದವರು ಮಾತ್ರ ಆತನನ್ನು ಕಂಡರು! ನಾವೇ ಆ ಸಾಕ್ಷಿಗಳು! ಯೇಸು ಜೀವಂತವಾಗಿ ಎದ್ದುಬಂದ ಮೇಲೆ ನಾವು ಆತನೊಂದಿಗೆ ಊಟ ಮಾಡಿದೆವು ಮತ್ತು ಪಾನ ಮಾಡಿದೆವು.


ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.


ಅಬ್ರಹಾಮನಿಂದ ಬಲಿಷ್ಠವಾದ ಮಹಾಜನಾಂಗ ಹುಟ್ಟುವುದು; ಅವನ ಮೂಲಕ ಈ ಲೋಕದ ಜನರೆಲ್ಲರೂ ಆಶೀರ್ವಾದ ಹೊಂದುವರು.


ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


“ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು.


“ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು