Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:18 - ಪರಿಶುದ್ದ ಬೈಬಲ್‌

18 “ಈ ಲೋಕವು ನಿಮ್ಮನ್ನು ದ್ವೇಷ ಮಾಡಿದರೆ, ಅದು ಮೊದಲು ನನ್ನನ್ನೇ ದ್ವೇಷ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಲೋಕವು ನಿಮ್ಮ ಮೇಲೆ ದ್ವೇಷಮಾಡುವದಾದರೆ ಅದು ಮೊದಲು ನನ್ನ ಮೇಲೆ ದ್ವೇಷಮಾಡಿತೆಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಲೋಕವು ನಿಮ್ಮನ್ನು ದ್ವೇಷಿಸಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಿಸಿತು ಎಂದು ನೀವು ತಿಳಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹ್ಯಾ ಜಗಾನ್ ತುಮ್ಚೊ ದ್ವೆಸ್ ಕರ್ಲ್ಯಾರ್ ತೆನಿ ತುಮ್ಚ್ಯಾನ್ಕಿ ಅದ್ದಿ ತೆನಿ ಮಾಜೊ ದ್ವೆಸ್ ಕರ್‍ಲಾ ಮನುನ್ ಯಾದ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:18
22 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ಈ ಲೋಕದ ಜನರು ನಿಮ್ನನ್ನು ದ್ವೇಷಿಸುವಾಗ ಆಶ್ಚರ್ಯಗೊಳ್ಳದಿರಿ.


ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.


ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.


ನೀವು ನನ್ನನ್ನು ಹಿಂಬಾಲಿಸುವ ಕಾರಣ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೆ ಕೊನೆಯವರೆಗೆ ತಾಳುವವನು ರಕ್ಷಣೆ ಹೊಂದುವನು.


“ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು.


ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.


ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ.


“ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.


ಕ್ರಿಸ್ತನಲ್ಲಿ ಈ ನಿರೀಕ್ಷೆಯನ್ನು ಹೊಂದಿರುವ ಪ್ರತಿಯೊಬ್ಬನೂ ಕ್ರಿಸ್ತನು ಶುದ್ಧನಾಗಿರುವಂತೆ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.


“ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.


ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.


ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.


ಒಳ್ಳೆಯವರಿಗೆ ಯಥಾರ್ಥರಲ್ಲದವರು ಅಸಹ್ಯ. ಕೆಡುಕರು ಯಥಾರ್ಥರನ್ನು ದ್ವೇಷಿಸುವರು.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


“ಜನರು ನಿಮ್ಮ ನಂಬಿಕೆಯನ್ನು ನಾಶಮಾಡಲಾಗದಂತೆ ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಹೇಳಿದ್ದೇನೆ.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು