Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:19 - ಪರಿಶುದ್ದ ಬೈಬಲ್‌

19 ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತುಮಿ ಜಗಾಕ್ ಸಮಂದ್ ಪಡಲ್ಲೆ ಮನುನ್ ರ್‍ಹಾಲ್ಯಾರ್ ತೊ ತುಮಿ ತೆಚೆಚ್ ಮನುನ್ ತುಮ್ಚೊ ಪ್ರೆಮ್ ಕರಿ ಹೊತ್ತೊ. ಖರೆ ಮಿಯಾ ತುಮ್ಕಾ ಹ್ಯಾ ಜಗಾತ್ನಾ ಎಚುನ್ ಕಾಡ್ಲಾ, ಅನಿ ತುಮಿ ಹ್ಯಾ ಜಗಾಕ್ ಸಮಂದ್ ಪಡಲ್ಲೆ ನ್ಹಯ್ ,ತೆಚೆಸಾಟ್ನಿ ಹ್ಯೊ ಜಗ್ ತುಮ್ಚೊ ದ್ವೆಸ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:19
19 ತಿಳಿವುಗಳ ಹೋಲಿಕೆ  

“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.


“ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ನಿಮಗೆ ಹೊಗಳಿಕೆ ಏಕೆ ಬರಬೇಕು? ಇಲ್ಲ! ತಮ್ಮನ್ನು ಪ್ರೀತಿಸುವವರನ್ನು ಪಾಪಿಷ್ಠರು ಸಹ ಪ್ರೀತಿಸುತ್ತಾರೆ!


ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.


ಆಗ ಘಟ ಸರ್ಪವು ಆ ಸ್ತ್ರೀಯ ಮೇಲೆ ಬಹಳ ಕೋಪಗೊಂಡು ಆಕೆಯ ಇತರ ಮಕ್ಕಳೆಲ್ಲರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಅನುಸರಿಸುವವರ ಮತ್ತು ಯೇಸುವಿನ ಕುರಿತು ಸಾಕ್ಷಿ ಹೇಳುವವರ ಮೇಲೆ ಹೋರಾಟ ಮಾಡಲು ಹೋಯಿತು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.


“ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.


ಬಳಿಕ ಯೇಸು, “ನಾನು ಆರಿಸಿಕೊಂಡ ಹನ್ನೆರಡು ಮಂದಿ ನೀವೇ. ಆದರೆ ನಿಮ್ಮಲ್ಲಿರುವ ಒಬ್ಬನು ಸೈತಾನನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟನು.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು