Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:22 - ಪರಿಶುದ್ದ ಬೈಬಲ್‌

22 ನಾನು ಬಂದು ಈ ಲೋಕದ ಜನರೊಂದಿಗೆ ಮಾತಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ನಾನು ಅವರೊಂದಿಗೆ ಮಾತಾಡಿದ್ದೇನೆ. ಆದ್ದರಿಂದ ತಮ್ಮ ಪಾಪಕ್ಕೆ ಅವರಿಗೆ ಯಾವ ನೆವವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾನು ಬಂದು ಅವರಿಗೆ ಬೋಧನೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ಬಂದು ಅವರ ಕೂಡ ಮಾತಾಡದಿದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಅವರು ಮಾಡಿದ ಪಾಪಕ್ಕಾಗಿ ಅವರಿಗೆ ಈಗ ನೆವವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾನು ಬಂದು ಅವರೊಂದಿಗೆ ಮಾತನಾಡದಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರ ಪಾಪದ ವಿಷಯವಾಗಿ ಅವರಿಗೆ ನೆಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಮಿಯಾ ಯೆವ್ನ್ ತೆಂಚೆಕ್ಡೆ ಬೊಲಲ್ಲೆ ನಸ್ಲ್ಯಾರ್, ತೆಂಕಾ ತೆಂಚ್ಯಾ ಪಾಪಾಚ್ಯಾ ವಿಶಯಾತ್ ಕಾಯ್ಬಿ ಅಸಂಯ್ ದಿಶಿನಶಿ ಹೊತ್ತೆ, ಖರೆ ಅತ್ತಾ ತೆಂಕಾ ತೆಂಚ್ಯಾ ಪಾಪಾತ್ನಾ ಚುಕುನ್ ಘೆವ್ಕ್ ರ್‍ಹಾವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:22
17 ತಿಳಿವುಗಳ ಹೋಲಿಕೆ  

ಯೇಸು, “ನೀವು ನಿಜವಾಗಿಯೂ ಕುರುಡರಾಗಿದ್ದರೆ ಪಾಪವೆಂಬ ಅಪರಾಧಕ್ಕೆ ಗುರಿಯಾಗುತ್ತಿರಲಿಲ್ಲ. ಆದರೆ ನೀವು, ‘ನಮಗೆ ಕಣ್ಣು ಕಾಣುತ್ತದೆ’ ಎಂದು ಹೇಳುತ್ತೀರಿ. ಆದ್ದರಿಂದ ನೀವು ಪಾಪಿಗಳೇ ಆಗಿದ್ದೀರಿ” ಎಂದು ಹೇಳಿದನು.


ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದ್ದರೂ ಒಳ್ಳೆಯದನ್ನು ಮಾಡದಿರುವವನು ಪಾಪವನ್ನು ಮಾಡುವವನಾಗಿದ್ದಾನೆ.


ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ.


ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.


ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.


ಸ್ವತಂತ್ರ ಹೊಂದಿದವರಂತೆ ಜೀವಿಸಿರಿ. ಆದರೆ ನೀವು ಮಾಡುವ ಕೆಟ್ಟಕಾರ್ಯಗಳನ್ನು ಮರೆಮಾಡಲು ಆ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿ. ನೀವು ದೇವರ ಸೇವೆಯನ್ನು ಮಾಡುತ್ತಾ ಜೀವಿಸಿರಿ.


“ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.


ಬಳಿಕ ಅವನು ನಿರೀಕ್ಷಿಸಿಲ್ಲದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ದಂಡಿಸಿ ಅಪನಂಬಿಗಸ್ತರಿರುವ ಸ್ಥಳಕ್ಕೆ ದಬ್ಬುವನು.


ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು.


ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.


“ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನೂ ದ್ವೇಷಿಸುವವನಾಗಿದ್ದಾನೆ.


ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.


ನನ್ನನ್ನು ನಂಬದಿರುವುದರಿಂದ ಜನರಲ್ಲಿ ಪಾಪವಿದೆಯೆಂದು ಆ ಸಹಾಯಕನು ನಿರೂಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು