Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:26 - ಪರಿಶುದ್ದ ಬೈಬಲ್‌

26 “ನಾನು ತಂದೆಯ ಬಳಿಯಿಂದ ಸಹಾಯಕನನ್ನು ನಿಮಗೆ ಕಳುಹಿಸಿಕೊಡುವೆನು. ತಂದೆಯ ಬಳಿಯಿಂದ ಬರುವ ಆ ಸಹಾಯಕನು ಸತ್ಯದ ಆತ್ಮನಾಗಿದ್ದಾನೆ. ಆತನು ಬಂದಾಗ ನನ್ನ ಬಗ್ಗೆ ನಿಮಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು, ಬಂದಾಗ ಆತನು ನನ್ನನ್ನು ಕುರಿತು ಸಾಕ್ಷಿಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ದೆವಾಚ್ಯಾ ವಿಶಯಾತ್ಲೆ ಖರೆ ದಾಕ್ವುನ್ ದಿತಲೊ, ಮಜತ್ ಕರ್‍ತಲೊ ಪವಿತ್ರ್ ಆತ್ಮೊ ಬಾಬಾಕ್ನಾ ಯೆತಾ. ಮಿಯಾ ತೆಕಾ ಬಾಬಾಕ್ನಾ ತುಮ್ಚೆಕ್ಡೆ ಧಾಡುನ್ ದಿತಾ. ಅನಿ ತೊ ಮಾಜೆ ವಿಶಯಾತ್ ಸಾಕ್ಷಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:26
14 ತಿಳಿವುಗಳ ಹೋಲಿಕೆ  

ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.


ಈ ಘಟನೆಗಳಿಗೆ ನಾವೇ ಸಾಕ್ಷಿಗಳು. ನಾವು ಮಾತ್ರವಲ್ಲದೆ ವಿಧೇಯರಾಗುವ ಎಲ್ಲಾ ಜನರಿಗೆ ದೇವರು ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿಯಾಗಿದ್ದಾನೆ” ಎಂದನು.


ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ.


ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.


ಕ್ರಿಸ್ತನ ವಿಷಯವಾದ ಸತ್ಯವು ನಿಮ್ಮಲ್ಲಿ ನಿರೂಪಿಸಲ್ಪಟ್ಟಿದೆ.


ಆದರೆ ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನಾನು ಹೋಗುವುದು ನಿಮ್ಮ ಒಳ್ಳೆಯದಕ್ಕಾಗಿಯೇ ಏಕೆಂದರೆ ನಾನು ಹೋಗಿ ಸಹಾಯಕನನ್ನು ನಿಮ್ಮ ಬಳಿಗೆ ಕಳುಹಿಸುವೆನು. ನಾನು ಹೋಗದಿದ್ದರೆ, ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ.


ಯೇಸು ಆ ಯೆಹೂದ್ಯರಿಗೆ, “ದೇವರು ನಿಜವಾಗಿಯೂ ನಿಮ್ಮ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ನಾನು ದೇವರಿಂದ ಬಂದು ಈಗ ಇಲ್ಲಿದ್ದೇನೆ. ನಾನು ಬಂದದ್ದು ನನ್ನ ಸ್ವಂತ ಅಧಿಕಾರದಿಂದಲ್ಲ. ದೇವರೇ ನನ್ನನ್ನು ಕಳುಹಿಸಿದನು.


ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟುಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ಈ ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು