Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:4 - ಪರಿಶುದ್ದ ಬೈಬಲ್‌

4 ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಯಾವ ಕವಲೂ ತನ್ನಷ್ಟಕ್ಕೆ ತಾನೇ ಫಲಕೊಡಲಾರದು. ಅದು ದ್ರಾಕ್ಷಿಬಳ್ಳಿಯಲ್ಲಿ ನೆಲೆಗೊಂಡಿರಬೇಕು. ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮಷ್ಟಕ್ಕೇ ಫಲಕೊಡಲಾರಿರಿ. ನೀವು ನನ್ನಲ್ಲಿ ನೆಲೆಗೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ನನ್ನಲ್ಲಿ ನೆಲೆಗೊಂಡಿರ್ರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲಕೊಡಲಾರದೋ ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮಿ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾವಾ ಅನಿ ಮಿಯಾ ತುಮ್ಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಾ. ಖಲ್ಯಾಬಿ ಎಕ್ ಫಾಟ್ಯಾನ್ ಯೆಲಿಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾಲ್ಯಾ ಶಿವಾಯ್ ಫಳಾ ದಿವ್ಕ್ ಹೊಯ್ನಾ. ತಶೆಚ್ ತುಮಿ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾಲ್ಯಾ ಶಿವಾಯ್ ತುಮಿ ಫಳ್ ದಿವ್ಕ್ ಹೊಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:4
29 ತಿಳಿವುಗಳ ಹೋಲಿಕೆ  

ದೇವರಲ್ಲಿ ನೆಲೆಗೊಂಡಿದ್ದೇನೆ ಎಂದು ಹೇಳುವವನು, ಯೇಸು ಜೀವಿಸಿದಂತೆಯೇ ಜೀವಿಸಬೇಕು.


ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.


ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ.


ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿಸಿ ಮುಂದಕ್ಕೆ ಹೋಗುವವನು ದೇವರನ್ನು ಹೊಂದಿಲ್ಲ. ಆದರೆ ಆ ಉಪದೇಶದಲ್ಲಿ ನೆಲೆಗೊಂಡಿರುವವನು ತಂದೆಯನ್ನೂ ಮಗನನ್ನೂ ಹೊಂದಿದ್ದಾನೆ.


ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ವಾಸಿಸುತ್ತಾನೆ. ನಾನು ಅವನಲ್ಲಿ ವಾಸಿಸುತ್ತೇನೆ.


ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.


ನಾನು ನನ್ನ ತಂದೆಯಲ್ಲಿರುವುದನ್ನು ನೀವು ಆ ದಿನದಂದು ತಿಳಿದುಕೊಳ್ಳುವಿರಿ. ನೀವು ನನ್ನಲ್ಲಿರುವುದನ್ನೂ ನಾನು ನಿಮ್ಮಲ್ಲಿರುವುದನ್ನೂ ತಿಳಿದುಕೊಳ್ಳುವಿರಿ.


ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.


ನೀವು ನಂಬಿಕೆಯಲ್ಲಿ ಜೀವಿಸುತ್ತಿದ್ದೀರೋ ಎಂಬುದನ್ನು ತಿಳಿದುಕೊಳ್ಳಲು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ಕ್ರಿಸ್ತಯೇಸುವು ನಿಮ್ಮೊಳಗೆ ಇದ್ದಾನೆಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರಾಗಿದ್ದೀರಿ.


ಪ್ರಭುವಾದ ಕ್ರಿಸ್ತ ಯೇಸುವನ್ನು ನೀವು ಸ್ವೀಕರಿಸಿಕೊಂಡಿರುವುದರಿಂದ ಆತನಲ್ಲಿ ನೆಲೆಗೊಂಡಿದ್ದು ಜೀವಿಸಿರಿ.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ನಾನು ಅವರಲ್ಲಿ ಇರುವೆನು ಮತ್ತು ನೀನು ನನ್ನಲ್ಲಿರುವೆ. ಆದ್ದರಿಂದ ಅವರು ಸಂಪೂರ್ಣವಾಗಿ ಒಂದಾಗಿರುವರು. ನೀನೇ ನನ್ನನ್ನು ಕಳುಹಿಸಿರುವುದಾಗಿ ಮತ್ತು ನೀನು ನನ್ನನ್ನು ಪ್ರೀತಿಸಿದಂತೆಯೇ ಈ ಜನರನ್ನೂ ಪ್ರೀತಿಸಿರುವುದಾಗಿ ಈ ಲೋಕವು ಆಗ ತಿಳಿದುಕೊಳ್ಳುವುದು.


“ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”


ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.


ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುತ್ತಿರುವ ಈ ಯುವತಿ ಯಾರು? ನಾನು ನಿನ್ನನ್ನು ಸೇಬಿನ ಮರದ ಕೆಳಗೆ ಎಬ್ಬಿಸಿದೆನು. ನಿನ್ನ ತಾಯಿಯು ನಿನ್ನನ್ನು ಗರ್ಭಧರಿಸಿದ್ದು ಅಲ್ಲಿಯೇ. ನೀನು ಹುಟ್ಟಿದ್ದೂ ಅಲ್ಲಿಯೇ.


ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ.


“ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು