Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:7 - ಪರಿಶುದ್ದ ಬೈಬಲ್‌

7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಕೇಳಿಕೊಳ್ಳಿರಿ, ಅದು ನಿಮಗೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಬೇಡಿಕೊಳ್ಳಿರಿ, ಅದು ನಿಮಗೆ ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮಿ ಮಾಜ್ಯಾ ವಾಂಗ್ಡಾ ರ್‍ಹಾಲ್ಯಾರ್ ಅನಿ ಮಾಜ್ಯಾ ಗೊಸ್ಟಿಯಾ ತುಮ್ಚ್ಯಾ ಭುತ್ತುರ್ ರ್‍ಹಾಲ್ಯಾರ್ ತುಮಿ ತುಮ್ಕಾ ಕಾಯ್ ಪಾಜೆ ತೆ ಮಾಗಾ ತೆ ತುಮ್ಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:7
24 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಸಂತೋಷದಿಂದ ಸೇವೆಮಾಡು. ನಿನಗೆ ಬೇಕಾದುದನ್ನು ಆತನೇ ಕೊಡುವನು.


ನಾವು ಯಾವ ಸಂದೇಹಗಳೂ ಇಲ್ಲದೆ ದೇವರ ಬಳಿಗೆ ಬರಲು ಸಾಧ್ಯವಿದೆ. ಇದರ ಅರ್ಥವೇನೆಂದರೆ (ದೇವರ ಚಿತ್ತಕ್ಕನುಸಾರವಾಗಿ) ನಮಗೆ ಬೇಕಾದವುಗಳಿಗಾಗಿ ದೇವರನ್ನು ಕೇಳಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆ.


ಮತ್ತು ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ನಿಮಗೋಸ್ಕರ ಅದನ್ನು ನೆರವೇರಿಸುವೆನು. ಆಗ ಮಗನ ಮೂಲಕವಾಗಿ ತಂದೆಗೆ ಮಹಿಮೆ ಆಗುವುದು.


ಮತ್ತು ನಾವು ಕೇಳಿಕೊಳ್ಳುವವುಗಳನ್ನು ದೇವರು ನಮಗೆ ನೀಡುತ್ತಾನೆ. ನಾವು ಆತನಿಗೆ ವಿಧೇಯರಾಗಿರುವುದರಿಂದ ಮತ್ತು ಆತನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವುದರಿಂದ ಅವುಗಳನ್ನು ಆತನಿಂದ ಪಡೆದುಕೊಳ್ಳುತ್ತೇವೆ.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


“ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು.


ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಕೇಳುವುದಿಲ್ಲ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಪವಿತ್ರಾತ್ಮನನ್ನು ಅನುಸರಿಸುವವರಾಗಿರಿ. ಆಗ, ನಿಮ್ಮ ಶರೀರಭಾವವು ಬಯಸುವ ಕೆಟ್ಟ ಸಂಗತಿಗಳನ್ನು ನೀವು ಮಾಡುವುದಿಲ್ಲ.


ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು.


ಕೆಡುಕನಿಗೆ ಅವನು ಭಯಪಡುವುದೇ ಸಂಭವಿಸುವುದು. ಒಳ್ಳೆಯವನಾದರೋ ತನಗೆ ಬೇಕಾದದ್ದನ್ನೆಲ್ಲ ಪಡೆದುಕೊಳ್ಳುವನು.


ನಾನು ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ಉಪದೇಶಗಳನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳ್ಳೆಯತನವು ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು.


ನಾನೀಗ ಕೊಡುವ ಆಜ್ಞೆಗಳನ್ನು ಯಾವಾಗಲೂ ನಿಮ್ಮ ಜ್ಞಾಪದಲ್ಲಿಟ್ಟುಕೊಂಡಿರಿ.


ಮಕ್ಕಳೇ, ನೀವು ತಂದೆಯನ್ನು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ತಂದೆಗಳೇ, ಆದಿಯಿಂದ ಇರುವಾತನನ್ನು ನೀವು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯುವಕರೇ, ನೀವು ಬಲಶಾಲಿಗಳಾಗಿರುವುದರಿಂದ, ದೇವರ ವಾಕ್ಯವು ನಿಮ್ಮಲ್ಲಿ ನೆಲಸಿರುವುದರಿಂದ ಮತ್ತು ನೀವು ಕೆಡುಕನನ್ನು ಸೋಲಿಸಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.


ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ನನ್ನ ತಂದೆ ನನಗೆ ಉಪದೇಶ ಮಾಡಿದ್ದೇನೆಂದರೆ: “ನನ್ನ ಮಾತುಗಳನ್ನು ನೆನಪುಮಾಡಿಕೊ; ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಬದುಕುವೆ.


ನೀನು ಸರ್ವಶಕ್ತನಾದ ದೇವರಲ್ಲಿ ಆನಂದಿಸುವೆ. ದೇವರ ಕಡೆಗೆ ಕಣ್ಣೆತ್ತಿ ನೋಡುವೆ.


ನೀವು ಅಬ್ರಹಾಮನ ಮಕ್ಕಳೆಂದು ನನಗೆ ಗೊತ್ತಿದೆ. ಆದರೆ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ. ಏಕೆಂದರೆ ನನ್ನ ಉಪದೇಶವನ್ನು ಸ್ವೀಕರಿಸಿಕೊಳ್ಳಲು ನಿಮಗೆ ಇಷ್ಟವಿಲ್ಲ.


ಆತನ ಆಜ್ಞೆಗಳನ್ನು ನಾನು ಮೀರಲೇ ಇಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಮೃಷ್ಟಾನ್ನಕ್ಕಿಂತಲೂ ಹೆಚ್ಚಾಗಿ ಪ್ರೀತಿಸಿದ್ದೇನೆ.


ಏಕೆಂದರೆ ಅವನಿನ್ನೂ ಬಾಲಕನಾಗಿರುವಾಗ ಪರಿಪಾಲಕರಿಗೆ ಮತ್ತು ನಿರ್ವಾಹಕರಿಗೆ ವಿಧೇಯನಾಗಿರಬೇಕು. ಆದರೆ ತನ್ನ ತಂದೆಯು ಗೊತ್ತುಪಡಿಸಿದ ವಯಸ್ಸನ್ನು ತಲುಪಿದಾಗ ಆ ಬಾಲಕನು ಸ್ವತಂತ್ರನಾಗುವನು.


ಸೊಲೊಮೋನನು ಗಿಬ್ಯೋನಿನಲ್ಲಿದ್ದಾಗ, ಯೆಹೋವನು ರಾತ್ರಿ ಕನಸಿನಲ್ಲಿ ಅವನಿಗೆ ದರ್ಶನವನ್ನು ನೀಡಿ, “ನೀನು ಏನುಬೇಕಾದರೂ ಕೇಳು. ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು