Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:5 - ಪರಿಶುದ್ದ ಬೈಬಲ್‌

5 ಈಗಲಾದರೋ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತಿದ್ದೇನೆ. ಆದರೆ ನಿಮ್ಮಲ್ಲಿ ಒಬ್ಬರಾದರೂ, ‘ನೀನು ಎಲ್ಲಿಗೆ ಹೋಗುತ್ತಿರುವೆ?’ ಎಂದು ನನ್ನನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ನೀನು ಎಲ್ಲಿಗೆ ಹೋಗುತ್ತೀ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈಗ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ನಾನು ಹೋಗುತ್ತೇನೆ. ನಿಮ್ಮಲ್ಲಿ ಯಾರೂ, ‘ನೀವು ಎಲ್ಲಿಗೆ ಹೋಗುತ್ತೀರಿ?’ ಎಂದು ನನ್ನನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಅತ್ತಾ ಮಿಯಾ ಮಾಕಾ ಧಾಡುನ್ ದಿಲ್ಲ್ಯಾಕ್ಡೆ ಜಾವ್ಕ್ ಲಾಗ್ಲಾ, ಅನಿಬಿ ತುಮ್ಚ್ಯಾತ್ಲೊ ಕೊನ್ಬಿ ಮಾಕಾ ತಿಯಾ ಖೈ ಜಾವ್ಲೆ ಮನುನ್ ಇಚಾರುಕ್ ಹೊಯ್ನಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:5
15 ತಿಳಿವುಗಳ ಹೋಲಿಕೆ  

ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು.


ಆಗ ಯೇಸು, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿರುತ್ತೇನೆ. ಬಳಿಕ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತೇನೆ.


ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.


ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮಾಡಿ ಪೂರೈಸಿದ್ದೇನೆ. ನಾನು ಭೂಲೋಕದಲ್ಲಿ ನಿನ್ನನ್ನು ಮಹಿಮೆ ಪಡಿಸಿದೆನು.


ನಾನು ತಂದೆಯ ಬಳಿಗೆ ಹೋಗುವುದರಿಂದ ನೀತಿಯ ವಿಷಯವಾಗಿಯೂ ಆತನು ಜನರಿಗೆ ನಿರೂಪಿಸುವನು. ಇನ್ನು ಮೇಲೆ ನೀವು ನನ್ನನ್ನು ನೋಡುವುದಿಲ್ಲ.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು.


“ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ಮತ್ತೆ ನೋಡುವಿರಿ.”


‘ನಾನು ಹೊರಟುಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ’ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.


ಹಾಗಾದರೆ ಮನುಷ್ಯಕುಮಾರನು ತಾನು ಬಿಟ್ಟುಬಂದ ಸ್ಥಳಕ್ಕೆ ಮರಳಿಹೋಗುವುದನ್ನು ನೀವು ನೋಡುವಾಗ ಬೇಸರಪಡುವಿರಾ?


“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಆದರೆ ನಾನು ಈ ಲೋಕದಲ್ಲಿ ಇನ್ನೂ ಇರುವಾಗಲೇ ಈ ಸಂಗತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇನೆ. ಈ ಜನರು ನನ್ನ ಆನಂದವನ್ನು ಹೊಂದಿದವರಾಗಿರಬೇಕೆಂದು ಮತ್ತು ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರಬೇಕೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.


ಶಿಷ್ಯರಲ್ಲಿ ಕೆಲವರು, “‘ಸ್ವಲ್ಪಕಾಲದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ಪಲ್ಪಕಾಲವಾದ ಬಳಿಕ ನನ್ನನ್ನು ಮತ್ತೆ ನೋಡುವಿರಿ. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ’ ಎಂದು ಆತನು ಹೇಳಿದ್ದರ ಅರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು