Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:13 - ಪರಿಶುದ್ದ ಬೈಬಲ್‌

13 “ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಆದರೆ ನಾನು ಈ ಲೋಕದಲ್ಲಿ ಇನ್ನೂ ಇರುವಾಗಲೇ ಈ ಸಂಗತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇನೆ. ಈ ಜನರು ನನ್ನ ಆನಂದವನ್ನು ಹೊಂದಿದವರಾಗಿರಬೇಕೆಂದು ಮತ್ತು ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರಬೇಕೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಈಗ ನಿನ್ನ ಬಳಿಗೆ ಬರುವವನಾಗಿದ್ದೇನೆ; ಆದದರಿಂದ ಇವರಲ್ಲಿ ನನ್ನ ಆನಂದವು ಪರಿಪೂರ್ಣವಾಗಿರುವಂತೆ ಲೋಕದಲ್ಲಿದ್ದು ಈ ಮಾತುಗಳನ್ನು ಆಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಈಗ ನಾನು ನಿಮ್ಮ ಬಳಿಗೆ ಬರುತ್ತೇನೆ. ನನ್ನ ಆನಂದವು ಅವರಲ್ಲಿ ಪರಿಪೂರ್ಣವಾಗುವಂತೆ ನಾನು ಲೋಕದಲ್ಲಿ ಇದ್ದು ಇವೆಲ್ಲವನ್ನು ಮಾತನಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಅತ್ತಾ ಮಿಯಾ ತುಜೆಕ್ಡೆ ಯೆವ್ಲಾ, ಅನಿ ಮಿಯಾ ಹೆ ಸಗ್ಳೆ ಹ್ಯಾ ಜಗಾತ್ ಸಾಂಗ್ತಾ, ಕಶ್ಯಾಕ್ ಮಟ್ಲ್ಯಾರ್ ಮಾಜಿ ಕುಶಿ ಸಂಪುರ್ನ್ ರಿತಿನ್ ತೆಂಚ್ಯಾ ಮನಾತ್ನಿ ಭರುನ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:13
17 ತಿಳಿವುಗಳ ಹೋಲಿಕೆ  

ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


ನನಗಿರುವ ಆನಂದವನ್ನು ನೀವೂ ಹೊಂದಿಕೊಳ್ಳಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನು ಹೇಳಿದ್ದೇನೆ. ನಿಮ್ಮ ಆನಂದವು ಪರಿಪೂರ್ಣವಾದ ಆನಂದವಾಗಿರಬೇಕೆಂದು ನಾನು ಬಯಸುತ್ತೇನೆ.


ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.


ನಮ್ಮ ಸಂತೋಷವು ಪರಿಪೂರ್ಣವಾಗಲೆಂದು ನಾವು ನಿಮಗೆ ಈ ಸಂಗತಿಗಳನ್ನು ಬರೆಯುತ್ತಿದ್ದೇವೆ.


ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು.


ನಾನು ನಿಮಗೆ ಹೇಳಬೇಕಾದುದು ಬಹಳಷ್ಟಿದೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲಿಚ್ಛಿಸುವುದಿಲ್ಲ. ಅದರ ಬದಲು, ನಾನೇ ನಿಮ್ಮ ಬಳಿಗೆ ಬರಬೇಕೆಂದಿದ್ದೇನೆ. ಆಗ ನಾವು ಒಟ್ಟಾಗಿ ಮಾತನಾಡಬಹುದು. ಇದು ನಮಗೆ ಬಹಳ ಸಂತಸವನ್ನು ಉಂಟುಮಾಡುತ್ತದೆ.


ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ಅಳುತ್ತಾ ಬೀಜವನ್ನು ಬಿತ್ತುವವನು ಹರ್ಷದಿಂದ ಕೊಯ್ಯುವನು.


ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. ದೇವರೇ, ನನ್ನ ದೇವರೇ, ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.


ಆದರೆ ಯೇಸುವಿನ ಶಿಷ್ಯರು ಸಂತೋಷವಾಗಿದ್ದರು ಮತ್ತು ಪವಿತ್ರಾತ್ಮಭರಿತರಾಗಿದ್ದರು.


ಆಗ ಯೇಸು, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿರುತ್ತೇನೆ. ಬಳಿಕ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತೇನೆ.


“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು