Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:33 - ಪರಿಶುದ್ದ ಬೈಬಲ್‌

33 ಬಳಿಕ ಪಿಲಾತನು, ಭವನದೊಳಗೆ ಹಿಂತಿರುಗಿ ಹೋಗಿ, ಯೇಸುವನ್ನು ಕರೆದು, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆಗ ಪಿಲಾತನು ಅರಮನೆಯೊಳಗೆ ಹೋಗಿ ಯೇಸು ಸ್ವಾಮಿಯನ್ನು ಕರೆಯಿಸಿ, “ನೀನು ಯೆಹೂದ್ಯರ ಅರಸನೋ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಗ ಪಿಲಾತನು ತಿರಿಗಿ ಅರಮನೆಯೊಳಕ್ಕೆ ಹೋಗಿ ಯೇಸುವನ್ನು ಕರೆದು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದ್ದರಿಂದ ಪಿಲಾತನು ತಿರುಗಿ ತನ್ನ ನಿವಾಸದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಅವರಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಪಿಲಾತ್ ಭುತ್ತುರ್ ಘರಾತ್ ಗೆಲೊ ಅನಿ ಜೆಜುಕ್ ಬಲ್ವುಲ್ಯಾನ್, ಅನಿ “ತಿಯಾ ಜುದೆವಾಚೊ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:33
25 ತಿಳಿವುಗಳ ಹೋಲಿಕೆ  

ಇದಾದ ಮೇಲೆ, ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ಪ್ರಯತ್ನಿಸಿದನು. ಆದರೆ ಯೆಹೂದ್ಯರು, “ತನ್ನನ್ನು ರಾಜನೆಂದು ಹೇಳಿಕೊಳ್ಳುವ ಯಾವ ವ್ಯಕ್ತಿಯಾಗಲಿ ಸೀಸರನ ವಿರೋಧಿಯಾಗಿದ್ದಾನೆ. ಆದ್ದರಿಂದ ನೀನು ಈ ಮನುಷ್ಯನನ್ನು (ಯೇಸುವನ್ನು) ಬಿಡುಗಡೆ ಮಾಡಿದರೆ, ನೀನು ಸೀಸರನ ಮಿತ್ರನಲ್ಲವೆಂದೇ ಅದರ ಅರ್ಥ” ಎಂದು ಕೂಗಿದರು.


ಸೈನಿಕರು ಪದೇಪದೇ ಯೇಸುವಿನ ಬಳಿಗೆ ಬಂದು, “ಯೆಹೂದ್ಯರ ರಾಜನೇ, ನಿನಗೆ ನಮಸ್ಕಾರ!” ಎಂದು ಹೇಳುತ್ತಾ ಆತನ ಕೆನ್ನೆಗೆ ಹೊಡೆದರು.


ಪಿಲಾತನು, “ಹಾಗಾದರೆ ನೀನು ರಾಜ!” ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.


ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು. “ಆತನಿಗೆ ಸ್ತೋತ್ರವಾಗಲಿ! ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ದೇವರಾಶೀರ್ವಾದವಾಗಲಿ!’ ಇಸ್ರೇಲ್ ರಾಜನಿಗೆ ದೇವರಾಶೀರ್ವಾದವಾಗಲಿ!” ಎಂದು ಜನರು ಕೂಗಿದರು.


ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದ್ದು ಸರಿ” ಎಂದು ಉತ್ತರಿಸಿದನು.


ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ಮತ್ತೆ ಭವನದೊಳಗೆ ಹೋಗಿ, ಯೇಸುವಿಗೆ, “ನೀನು ಎಲ್ಲಿಯವನು?” ಎಂದು ಕೇಳಿದನು. ಆದರೆ ಯೇಸು ಮೌನವಾಗಿದ್ದನು.


“ಸಿಯೋನ್ ನಗರವೇ, ಭಯಪಡಬೇಡ! ನೋಡು! ನಿನ್ನ ರಾಜನು ಬರುತ್ತಿದ್ದಾನೆ. ಆತನು ಪ್ರಾಯದ ಕತ್ತೆಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ.”


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.


ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.


ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಸೈನಿಕರೆಲ್ಲರೂ ಯೇಸುವನ್ನು ಸುತ್ತುಗಟ್ಟಿದರು.


ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.


ಯೇಸು, “ಇದು ನಿನ್ನ ಪ್ರಶ್ನೆಯೋ? ಅಥವಾ ನನ್ನ ಬಗ್ಗೆ ಬೇರೆ ಜನರು ನಿನಗೆ ತಿಳಿಸಿದರೋ?” ಎಂದನು.


ಪಿಲಾತನು, “ಸತ್ಯವೆಂದರೇನು?” ಎಂದು ಕೇಳಿ, ಮತ್ತೆ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದನು. ಅವನು ಯೆಹೂದ್ಯರಿಗೆ, “ಈ ಮನುಷ್ಯನ ಮೇಲೆ ಅಪವಾದ ಹೊರಿಸಲು ನನಗೆ ಏನೂ ಕಾಣುತ್ತಿಲ್ಲ.


ಪಿಲಾತನು ಮತ್ತೆ ಹೊರಗೆ ಬಂದು, ಯೆಹೂದ್ಯರಿಗೆ, “ನೋಡಿ! ನಾನು ಯೇಸುವನ್ನು ನಿಮ್ಮ ಬಳಿಗೆ ತರುತ್ತಿದ್ದೇನೆ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ ಎಂಬುದು ನಿಮಗೆ ತಿಳಿದಿರಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು