Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:4 - ಪರಿಶುದ್ದ ಬೈಬಲ್‌

4 ತನಗೆ ಸಂಭವಿಸಲಿದ್ದ ಪ್ರತಿಯೊಂದೂ ಯೇಸುವಿಗೆ ತಿಳಿದಿತ್ತು. ಆತನು ಹೊರಗೆ ಹೋಗಿ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೇಸು ಸ್ವಾಮಿಗೆ ತಮಗೆ ಸಂಭವಿಸಲಿರುವುದೆಲ್ಲವೂ ತಿಳಿದಿತ್ತು. ಎಂದೇ ಮುಂದೆ ಬಂದು, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೇಸು ತನ್ನ ಮೇಲೆ ಬರುವದನ್ನೆಲ್ಲಾ ತಿಳಿದು ಹೊರಗೆ ಹೋಗಿ - ನೀವು ಯಾರನ್ನು ಹುಡುಕುತ್ತೀರಿ ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೇಸು ತಮಗೆ ಸಂಭವಿಸುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ, “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜೆಜುಕ್ ಅಪ್ನಾಕ್ ಕಾಯ್-ಕಾಯ್ ಹೊತಲೆ ಹಾಯ್ ಮನುನ್ ಗೊತ್ತ್ ಹೊತ್ತೆ, ತಸೆಮನುನ್ ತೊ ಉಲ್ಲೆ ಫಿಡೆ ಗೆಲೊ, ಅನಿ “ತುಮಿ ಕೊನಾಕ್ ಹುಡ್ಕುಕ್ ಲಾಗ್ಲ್ಯಾಶಿ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:4
27 ತಿಳಿವುಗಳ ಹೋಲಿಕೆ  

ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.


ಯೇಸು ಅವರಿಗೆ ಮತ್ತೆ “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು. ಅವರು, “ನಜರೇತಿನ ಯೇಸುವನ್ನು” ಎಂದು ಹೇಳಿದರು.


ಹೇಗೆ ಜೀವಿಸಬೇಕೆಂಬುದನ್ನು ನೀನು ನನಗೆ ಉಪದೇಶಿಸಿದೆ. ನಿನ್ನ ಪ್ರಸನ್ನತೆಯು ನನ್ನಲ್ಲಿ ಮಹಾ ಆನಂದವನ್ನು ಉಂಟುಮಾಡುವುದು.’


ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.


ಇದಾದ ಮೇಲೆ ಎಲ್ಲವೂ ನೆರವೇರಿತೆಂದು ತಿಳಿದುಕೊಂಡು ಪವಿತ್ರ ಗ್ರಂಥದ ಮಾತನ್ನು ನೆರವೇರಿಸುವುದಕ್ಕಾಗಿ ಆತನು, “ನನಗೆ ದಾಹವಾಗಿದೆ” ಎಂದು ಹೇಳಿದನು.


ತನಗೆ ದ್ರೋಹ ಮಾಡುವ ವ್ಯಕ್ತಿ ಯಾರೆಂದು ಯೇಸುವಿಗೆ ತಿಳಿದಿತ್ತು. ಆದಕಾರಣ ಆತನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.


ಆದರೆ ನಿಮ್ಮಲ್ಲಿ ಕೆಲವರು ನಂಬುವುದಿಲ್ಲ” ಎಂದು ಹೇಳಿದನು. (ತನ್ನನ್ನು ನಂಬಿಲ್ಲದವರು ಯಾರೆಂದೂ ತನಗೆ ದ್ರೋಹ ಮಾಡುವವನು ಯಾರೆಂದೂ ಯೇಸುವಿಗೆ ಮೊದಲಿಂದಲೂ ತಿಳಿದಿತ್ತು.)


ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.


ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ‘ನಾನು ಕುರುಬನನ್ನು ಕೊಲ್ಲುವೆನು, ಆಗ ಕುರಿಗಳೆಲ್ಲಾ ಚದರಿಹೋಗುತ್ತವೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಅವರೆಲ್ಲರೂ ಊಟ ಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿರುವ ಹನ್ನೆರಡು ಮಂದಿಯಲ್ಲಿ ಒಬ್ಬನು ನನ್ನನ್ನು ವೈರಿಗಳಿಗೆ ಒಪ್ಪಿಸುತ್ತಾನೆ” ಎಂದು ಹೇಳಿದನು.


“ನಾಳಿದ್ದು ಪಸ್ಕಹಬ್ಬವೆಂಬುದು ನಿಮಗೆ ತಿಳಿದಿದೆ. ಅಂದು ಮನುಷ್ಯಕುಮಾರನನ್ನು ಶಿಲುಬೆಗೇರಿಸಲು ವೈರಿಗಳಿಗೆ ಒಪ್ಪಿಸುವರು” ಎಂದನು.


ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದುಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ.


ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು.


ನಿನ್ನ ದೇವರಾದ ಯೆಹೋವನಾಣೆ, ರಾಜನು ನಿನಗಾಗಿ ಎಲ್ಲಾ ಕಡೆಯೂ ಹುಡುಕುತ್ತಿದ್ದಾನೆ! ಅವನು ನಿನ್ನನ್ನು ಕಂಡುಹಿಡಿಯಲು ಎಲ್ಲಾ ದೇಶಗಳಿಗೂ ಜನರನ್ನು ಕಳುಹಿಸಿದ್ದಾನೆ. ಒಂದು ದೇಶದ ಅಧಿಪತಿಯು ನಮ್ಮ ದೇಶದಲ್ಲಿ ಎಲೀಯನು ಇಲ್ಲವೆಂದು ಹೇಳಿದರೆ ಆ ಮಾತು ಸತ್ಯವೊ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅಹಾಬನು ಆ ಅಧಿಪತಿಯಿಂದ ಪ್ರಮಾಣ ಮಾಡಿಸುತ್ತಾನೆ.


ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.


ಅವರು, “ನಜರೇತಿನ ಯೇಸುವನ್ನು” ಎಂದು ಉತ್ತರಕೊಟ್ಟರು. ಆತನು, “ನಾನೇ ಯೇಸು” ಎಂದನು. (ಯೇಸುವಿಗೆ ದ್ರೋಹ ಬಗೆದ ಯೂದನು ಅವರೊಂದಿಗೆ ಅಲ್ಲೇ ನಿಂತಿದ್ದನು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು