Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:8 - ಪರಿಶುದ್ದ ಬೈಬಲ್‌

8 ಆತನು, “ನಾನೇ ಯೇಸು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನು ಹುಡುಕುತ್ತಿದ್ದರೆ, ಉಳಿದ ಇವರನ್ನು ಹೋಗಬಿಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಯೇಸು, “ನಾನೇ ಆತನೆಂದು ನಿಮಗೆ ಆಗಲೇ ಹೇಳಿದೆ. ನೀವು ಹುಡುಕುತ್ತಾ ಇರುವುದು ನನ್ನನ್ನಾದರೆ, ಮಿಕ್ಕ ಇವರನ್ನು ಹೋಗಬಿಡಿ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದಕ್ಕೆ ಯೇಸು - ನಾನೇ ಅವನೆಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೇ ಹುಡುಕುವವರಾದರೆ ಇವರು ಹೋಗಬಿಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ, ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಬಿಟ್ಟುಬಿಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಜೆಜುನ್,“ಮಿಯಾ ತುಮ್ಕಾ ವಾಡ್ಗೊಳುಚ್ ಸಾಂಗ್ಲಾ ಮಿಯಾಚ್ ತೊ, ಮನುನ್, ತುಮಿ ಮಾಕಾ ಹುಡ್ಕುಕ್ ಲಾಗ್ಲ್ಯಾಶಿ ಹೊಲ್ಯಾರ್, ಹ್ಯಾ ಹುರಲ್ಲ್ಯಾಕ್ನಿ ಜಾವ್ಕ್ ದಿವಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:8
13 ತಿಳಿವುಗಳ ಹೋಲಿಕೆ  

ಆತನು ನಿಮ್ಮನ್ನು ಪರಿಪಾಲಿಸುವುದರಿಂದ ನಿಮ್ಮ ಚಿಂತೆಗಳನ್ನೆಲ್ಲಾ ಆತನಿಗೆ ಒಪ್ಪಿಸಿರಿ.


ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದಂತೆ ನೀವು ನಿಮ್ಮ ಹೆಂಡತಿಯರನ್ನು ಪ್ರೀತಿಸಬೇಕು.


ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.


ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.


ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.


ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು.


ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.


ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.


ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ಯೇಸು ಅವರಿಗೆ ಮತ್ತೆ “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು. ಅವರು, “ನಜರೇತಿನ ಯೇಸುವನ್ನು” ಎಂದು ಹೇಳಿದರು.


“ನೀನು ನನಗೆ ಕೊಟ್ಟ ಜನರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ” ಎಂದು ಯೇಸು ಮೊದಲು ಹೇಳಿದ್ದ ಮಾತು ಹೀಗೆ ನಿಜವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು