Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:11 - ಪರಿಶುದ್ದ ಬೈಬಲ್‌

11 ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆಕಾ ಜೆಜುನ್, “ತುಕಾ ಮಾಜೆ ವರ್ತಿ ಅದಿಕಾರ್ ಹಾಯ್ ಕಶ್ಯಾಕ್ ಮಟ್ಲ್ಯಾರ್, ದೆವಾನ್ ತೊ ಅದಿಕಾರ್ ತುಕಾ ದಿಲ್ಯಾನಾಯ್, ತೆಚೆಸಾಟ್ನಿ ಜೊ ಕೊನ್ ಮಾಕಾ ತುಜ್ಯಾ ಹಾತಿತ್ ಒಪ್ಸುನ್ ದಿಲ್ಯಾನಾಯ್ ತೆಕಾ ಮೊಟೊ ಪಾಪ್ ಲಾಗ್ತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:11
37 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ.


ಯೋಹಾನನು, “ದೇವರು ಏನು ಕೊಡುತ್ತಾನೋ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


“ಈ ಶಿಕ್ಷೆಯನ್ನು ದೇವದೂತನು ಸಾರಿದನು. ಮಾನವ ಸಾಮ್ರಾಜ್ಯಗಳ ಮೇಲೆ ಮಹೋನ್ನತನಾದ ದೇವರು ಆಳುವನು. ಅವನು ಆ ಸಾಮ್ರಾಜ್ಯಗಳನ್ನು ತನಗೆ ಬೇಕಾದವರಿಗೆ ಒಪ್ಪಿಸುವನು, ಕನಿಷ್ಠರನ್ನು ನೇಮಿಸುವನು ಎಂಬುದು ಲೋಕದ ಜನರಿಗೆಲ್ಲ ತಿಳಿದುಬರಲಿ ಎಂದೇ ಅವನು ಸಾರಿದನು.


ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.


ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದ್ದರೂ ಒಳ್ಳೆಯದನ್ನು ಮಾಡದಿರುವವನು ಪಾಪವನ್ನು ಮಾಡುವವನಾಗಿದ್ದಾನೆ.


ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್.


ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.


ಅವರು ಆತನನ್ನು ಸರಪಣಿಗಳಿಂದ ಬಂಧಿಸಿ ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದೊಯ್ದು ಅವನಿಗೆ ಒಪ್ಪಿಸಿದರು.


“ಶಕ್ತಿಯೂ ದೇವರಿಂದಲೇ” ಎಂದು ದೇವರು ನುಡಿದಿದ್ದಾನೆ.


ಯೇಸು ಯಾರೆಂಬುದನ್ನು ಜನರಿಗೆ ತೋರಿಸಲು ಯೂದನು ಒಂದು ಉಪಾಯ ಮಾಡಿದನು. ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಯೇಸು. ಅವನನ್ನು ಸೆರೆಹಿಡಿದು ಎಚ್ಚರಿಕೆಯಿಂದ ಕಾಯುತ್ತಾ ಕರೆದುಕೊಂಡು ಹೋಗಿರಿ!” ಎಂದು ಹೇಳಿಕೊಟ್ಟಿದ್ದನು.


ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.


ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.


ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.


ಯೇಸು, “ನೀವು ನಿಜವಾಗಿಯೂ ಕುರುಡರಾಗಿದ್ದರೆ ಪಾಪವೆಂಬ ಅಪರಾಧಕ್ಕೆ ಗುರಿಯಾಗುತ್ತಿರಲಿಲ್ಲ. ಆದರೆ ನೀವು, ‘ನಮಗೆ ಕಣ್ಣು ಕಾಣುತ್ತದೆ’ ಎಂದು ಹೇಳುತ್ತೀರಿ. ಆದ್ದರಿಂದ ನೀವು ಪಾಪಿಗಳೇ ಆಗಿದ್ದೀರಿ” ಎಂದು ಹೇಳಿದನು.


ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ.


ಪ್ರಧಾನಯಾಜಕನು ಇದನ್ನು ಕೇಳಿ ಬಹಳ ಕೋಪಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈ ಮನುಷ್ಯನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಯಾವ ಸಾಕ್ಷಿಗಳ ಅಗತ್ಯವೂ ಇಲ್ಲ. ಇವನು ಮಾಡಿದ ದೇವದೂಷಣೆಯನ್ನು ನೀವೇ ಕೇಳಿದಿರಿ.


ನಾನು ಬಾಯಿತೆರೆದು ಮಾತಾಡುವುದಿಲ್ಲ. ನೀನು ನ್ಯಾಯಕ್ಕೆ ತಕ್ಕಂತೆ ಮಾಡಿರುವೆ.


ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.


ಅನ್ನನು ಕಾಯಫನ ಮಾವ. ಆ ವರ್ಷ ಕಾಯಫನು ಪ್ರಧಾನಯಾಜಕನಾಗಿದ್ದನು.


ಪಿಲಾತನು, “ನೀನು ನನ್ನೊಂದಿಗೆ ಮಾತಾಡುವುದಿಲ್ಲವೇ? ನಿನ್ನನ್ನು ಬಿಡಿಸುವ ಅಧಿಕಾರವೂ ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗಿದೆ ಎಂಬುದು ನಿನಗೆ ತಿಳಿಯದೋ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು