Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:30 - ಪರಿಶುದ್ದ ಬೈಬಲ್‌

30 ಯೇಸು ಹುಳಿರಸವನ್ನು ರುಚಿನೋಡಿ, “ತೀರಿತು” ಎಂದು ಹೇಳಿ ತಲೆಬಾಗಿ ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ - ತೀರಿತು ಎಂದು ಹೇಳಿ ತಲೇಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜೆಜುನ್ ತಿ ಅಂಬೊಟ್ಲಿ ವಾಯ್ನ್ ಫಿಲ್ಯಾನ್, ಅನಿ,“ಸರ್ಲೆ” ಮಟ್ಲ್ಯಾನ್ ಅನಿ ಅಪ್ನಾಚಿ ಮಾನ್ ಬಾಗ್ವುಲ್ಯಾನ್ ಅನಿ ಅಪ್ನಾಚೊ ಜಿವ್ ಸೊಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:30
28 ತಿಳಿವುಗಳ ಹೋಲಿಕೆ  

ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮಾಡಿ ಪೂರೈಸಿದ್ದೇನೆ. ನಾನು ಭೂಲೋಕದಲ್ಲಿ ನಿನ್ನನ್ನು ಮಹಿಮೆ ಪಡಿಸಿದೆನು.


ಆತನು ಮನುಷ್ಯನಾಗಿ ಜೀವಿಸುತ್ತಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನೂ ಕಡೆಗಣಿಸಿ ದೇವರಿಗೆ ಸಂಪೂರ್ಣ ವಿಧೇಯನಾಗಿ, ಶಿಲುಬೆಯ ಮೇಲೆ ಪ್ರಾಣವನ್ನೇ ಕೊಟ್ಟನು.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


“ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


ತನ್ನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ನೀತಿನಿರ್ಣಯ ಹೊಂದಬೇಕೆಂದು ಕ್ರಿಸ್ತನು ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.


ಇದಾದ ಮೇಲೆ ಎಲ್ಲವೂ ನೆರವೇರಿತೆಂದು ತಿಳಿದುಕೊಂಡು ಪವಿತ್ರ ಗ್ರಂಥದ ಮಾತನ್ನು ನೆರವೇರಿಸುವುದಕ್ಕಾಗಿ ಆತನು, “ನನಗೆ ದಾಹವಾಗಿದೆ” ಎಂದು ಹೇಳಿದನು.


ನಂತರ ಯೇಸು ಮಹಾಧ್ವನಿಯಿಂದ ಕೂಗಿ, ಪ್ರಾಣಬಿಟ್ಟನು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.


ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ.


ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.


ಬಳಿಕ ಯೇಸು ಮತ್ತೆ ಗಟ್ಟಿಯಾದ ಧ್ವನಿಯಲ್ಲಿ ಕೂಗಿ ಪ್ರಾಣಬಿಟ್ಟನು.


ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.


ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.


ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.


ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.


ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.


ಹಳೆಯ ಹುಳಿಯನ್ನೆಲ್ಲಾ (ಪಾಪ) ತೆಗೆದುಹಾಕಿರಿ. ಆಗ ನೀವು ಹೊಸ ಹಿಟ್ಟಾಗುವಿರಿ. ನೀವು ನಿಜವಾಗಿಯೂ ಹುಳಿರಹಿತವಾದ ಪಸ್ಕದ ರೊಟ್ಟಿಯಾಗಿದ್ದೀರಿ. ಹೌದು, ನಮ್ಮ ಪಸ್ಕದ ಕುರಿಮರಿಯಾದ ಕ್ರಿಸ್ತನು ಆಗಲೇ ಕೊಲ್ಲಲ್ಪಟ್ಟಿದ್ದಾನೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.


‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಈ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು