Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:35 - ಪರಿಶುದ್ದ ಬೈಬಲ್‌

35 (ಇದನ್ನು ಕಂಡವನೇ ಇದರ ಬಗ್ಗೆ ಹೇಳಿದ್ದಾನೆ. ನೀವು ಸಹ ನಂಬಬೇಕೆಂದು ಅವನು ಇದನ್ನು ತಿಳಿಸಿದ್ದಾನೆ. ಅವನು ಹೇಳುವ ಸಂಗತಿಗಳು ಸತ್ಯವಾಗಿವೆ. ತಾನು ಹೇಳುತ್ತಿರುವುದು ಸತ್ಯವೆಂದು ಅವನಿಗೆ ಗೊತ್ತಿದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ, ಅವನ ಸಾಕ್ಷಿ ಸತ್ಯವೇ; ತಾನು ಹೇಳುವದು ಸತ್ಯವೆಂದು ಅವನು ಬಲ್ಲನು; ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇದನ್ನು ಕಣ್ಣಾರೆ ಕಂಡವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವಾದದ್ದು, ನೀವು ಸಹ ನಂಬುವಂತೆ ತಾನು ಹೇಳಿರುವುದು ಸತ್ಯವೆಂದು ಅವನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜೆ ಕೊನ್ ಹೆ ಬಗಟ್ಲಾ ತ್ಯೆನಿಚ್, ತಿಯಾ ವಿಶ್ವಾಸ್ ಕರುಸಾಟ್ನಿ ಮನುನ್ ಸಾಕ್ಷಿ ದಿಲ್ಯಾನಾಯ್ ಅನಿ ಜೆ ಕಾಯ್ ತೆನಿ ಸಾಂಗ್ಲ್ಯಾನಾಯ್ ತೆ ಖರೆ ಹಾಯ್ ಅನಿ ತೊ ಖರೆ ಬೊಲುಲಾ ಮನುನ್ ತೆಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:35
15 ತಿಳಿವುಗಳ ಹೋಲಿಕೆ  

ಈ ಸಂಗತಿಗಳನ್ನು ಈಗ ಬರೆದಿರುವವನು ಮತ್ತು ಇವುಗಳ ವಿಷಯವಾಗಿ ಈಗ ಸಾಕ್ಷಿ ಹೇಳಿರುವ ಶಿಷ್ಯನು ಅವನೇ. ಅವನು ಹೇಳುವುದು ಸತ್ಯವೆಂದು ನಮಗೆ ಗೊತ್ತಿದೆ.


ಮತ್ತು ನೀವು ಮೊದಲಿಂದಲೂ ನನ್ನೊಂದಿಗೆ ಇದ್ದಕಾರಣ ನೀವು ಸಹ ನನ್ನ ಬಗ್ಗೆ ಜನರಿಗೆ ಹೇಳುವಿರಿ.


ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.


ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.


“ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಆ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ದೇವರ ಮಗನಲ್ಲಿ ನಂಬಿಕೆಯಿಟ್ಟಿರುವ ನಿಮಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಈಗ ನಿಮಗೆ ನಿತ್ಯಜೀವವಿದೆ ಎಂಬುದು ನಿಮಗೆ ಗೊತ್ತಾಗುವಂತೆ ನಾನು ಈ ಪತ್ರ ಬರೆಯುತ್ತಿದ್ದೇನೆ.


ಯೇಸು ತನ್ನ ತಾಯಿಯನ್ನೂ ಅಲ್ಲೇ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು” ಎಂದು ಹೇಳಿದನು.


ಇದು ಸಂಭವಿಸುವುದಕ್ಕಿಂತ ಮೊದಲೇ ನಾನು ನಿಮಗೆ ಇದನ್ನು ಈಗಲೇ ತಿಳಿಸಿದ್ದೇನೆ. ಹೀಗಿರಲು, ಇದು ಸಂಭವಿಸುವಾಗ ನೀವು ನಂಬುವಿರಿ.


ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.


ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು.


ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು