Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:9 - ಪರಿಶುದ್ದ ಬೈಬಲ್‌

9 ಮತ್ತೆ ಭವನದೊಳಗೆ ಹೋಗಿ, ಯೇಸುವಿಗೆ, “ನೀನು ಎಲ್ಲಿಯವನು?” ಎಂದು ಕೇಳಿದನು. ಆದರೆ ಯೇಸು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ಮತ್ತೆ ಅರಮನೆಯ ಒಳಕ್ಕೆ ಬಂದು, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಿರಿಗಿ ಅರಮನೆಯೊಳಕ್ಕೆ ಹೋಗಿ - ನೀನು ಎಲ್ಲಿಂದ ಬಂದವನು ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತಿರುಗಿ ತನ್ನ ನಿವಾಸದೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೊ ಪರ್ತುನ್ ಘರಾತ್ ಗೆಲೊ, ಅನಿ ಜೆಜುಕ್ “ತಿಯಾ ಖೈತ್ನಾ ಯೆಲೆ?” ಮನುನ್ ಇಚಾರ್‍ಲ್ಯಾನ್. ಖರೆ ಜೆಜುನ್ ಜಬಾಬ್ ದಿವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:9
18 ತಿಳಿವುಗಳ ಹೋಲಿಕೆ  

ಬಳಿಕ ಪಿಲಾತನು, ಭವನದೊಳಗೆ ಹಿಂತಿರುಗಿ ಹೋಗಿ, ಯೇಸುವನ್ನು ಕರೆದು, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು.


ಅಲ್ಲದೆ ನಿಮ್ಮನ್ನು ವಿರೋಧಿಸುವ ಜನರಿಗೆ ನೀವು ಹೆದರಿಕೊಳ್ಳುವುದಿಲ್ಲ. ನಿಮ್ಮ ರಕ್ಷಣೆಗೂ ನಿಮ್ಮ ವೈರಿಗಳ ನಾಶಕ್ಕೂ ಇವುಗಳು ದೇವರಿಂದಾದ ಪ್ರಮಾಣಗಳಾಗಿವೆ.


ಯೇಸು, “ಹೌದು, ನಾನೇ ನನ್ನ ಬಗ್ಗೆ ಈ ಸಂಗತಿಗಳನ್ನು ಹೇಳುತ್ತಿದ್ದರೂ ಈ ಸಂಗತಿಗಳು ಜನರ ನಂಬಿಕೆಗೆ ಯೋಗ್ಯವಾಗಿವೆ. ಏಕೆಂದರೆ, ನಾನು ಎಲ್ಲಿಂದ ಬಂದೆನೆಂಬುದೂ ನಾನು ಎಲ್ಲಿಗೆ ಹೋಗುತ್ತೇನೆಂಬುದೂ ನನಗೆ ತಿಳಿದಿದೆ. ನಾನು ನಿಮ್ಮಂಥ ವ್ಯಕ್ತಿಯಲ್ಲ. ನಾನು ಎಲ್ಲಿಂದ ಬಂದೆನೆಂಬುದು ಮತ್ತು ಎಲ್ಲಿಗೆ ಹೋಗುತ್ತೇನೆಂಬುದು ನಿಮಗೆ ಗೊತ್ತಿಲ್ಲ.


ಆದರೆ ಯೇಸು ಮೌನವಾಗಿದ್ದನು. ಪ್ರಧಾನಯಾಜಕನು ಮತ್ತೆ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದೇನೆ, ನೀನು ದೇವಕುಮಾರನಾದ ಕ್ರಿಸ್ತನೋ? ನಮಗೆ ತಿಳಿಸು” ಎಂದನು.


ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು.


ಆಗ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷನು ನನ್ನಲ್ಲಿಗೆ ಬಂದನು. ಅವನು ದೇವರಿಂದ ಬಂದ ದೇವದೂತನಂತೆ ಕಂಡನು. ನನಗೆ ಭಯವಾಯಿತು. ನಾನು ಅವನಿಗೆ, ‘ನೀನು ಎಲ್ಲಿಂದ ಬಂದೆ?’ ಎಂದು ಕೇಳಲಿಲ್ಲ; ಅವನೂ ನನಗೆ ತನ್ನ ಹೆಸರನ್ನು ಹೇಳಲಿಲ್ಲ.


ಪಿಲಾತನು, “ಹಾಗಾದರೆ ನೀನು ರಾಜ!” ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.


ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಸೈನಿಕರೆಲ್ಲರೂ ಯೇಸುವನ್ನು ಸುತ್ತುಗಟ್ಟಿದರು.


ಹೆರೋದನು ಯೇಸುವಿಗೆ ಅನೇಕ ಪ್ರಶ್ನೆಗಳನ್ನು ಕೇಳಿದನು. ಆದರೆ ಯೇಸು ಒಂದಕ್ಕೂ ಉತ್ತರ ನೀಡಲಿಲ್ಲ.


ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.


ಯೇಸು, “ಇದು ನಿನ್ನ ಪ್ರಶ್ನೆಯೋ? ಅಥವಾ ನನ್ನ ಬಗ್ಗೆ ಬೇರೆ ಜನರು ನಿನಗೆ ತಿಳಿಸಿದರೋ?” ಎಂದನು.


ಪಿಲಾತನು ಇದನ್ನು ಕೇಳಿ ಬಹು ಭಯಗೊಂಡು,


ಪಿಲಾತನು, “ನೀನು ನನ್ನೊಂದಿಗೆ ಮಾತಾಡುವುದಿಲ್ಲವೇ? ನಿನ್ನನ್ನು ಬಿಡಿಸುವ ಅಧಿಕಾರವೂ ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗಿದೆ ಎಂಬುದು ನಿನಗೆ ತಿಳಿಯದೋ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು