Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:16 - ಪರಿಶುದ್ದ ಬೈಬಲ್‌

16 ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವುಗಳನ್ನು ಹೊರಗೆ ತೆಗೆದುಕೊಂಡು ಹೋಗಿರಿ! ನನ್ನ ತಂದೆಯ ಮನೆಯನ್ನು ವ್ಯಾಪಾರ ಸ್ಥಳವನ್ನಾಗಿ ಮಾಡಬೇಡಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪಾರಿವಾಳ ಮಾರುವವರಿಗೆ - ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ಸಂತೆ ಮಾಡಬೇಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಪಾರಿವಾಳಾ ಇಕ್ತಲ್ಯಾಕ್ನಿ, ತೆಂಕಾ ಹಿತ್ನಾ ಭಾಯ್ರ್ ಕಾಡಾ! ಮಾಜ್ಯಾ ಬಾಬಾಚೆ ಘರ್ ಬಾಜಾರ್ ಭರ್‍ತಲೊ ಜಾಗೊ ಕರುನ್ ಥವ್ನಕಾಶಿ! ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:16
17 ತಿಳಿವುಗಳ ಹೋಲಿಕೆ  

ಯೇಸು ಅಲ್ಲಿದ್ದ ಜನರಿಗೆಲ್ಲ, “‘ನನ್ನ ಆಲಯವು ಪ್ರಾರ್ಥನಾಲಯ ಎನಿಸಿಕೊಳ್ಳುವುದು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರ ಗವಿ’ಯನ್ನಾಗಿ ಮಾಡುತ್ತಿದ್ದೀರಿ” ಎಂದು ಹೇಳಿದನು.


ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೆಲ್ಲಾ ನೋಡುತ್ತಿದ್ದೇನೆ’” ಎಂಬುದು ಯೆಹೋವನಾದ ನನ್ನ ನುಡಿ.


ನಂತರ ಯೇಸು ಜನರಿಗೆ ಉಪದೇಶಿಸಿ, “‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.


ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಆದರೆ ಯೇಸು ಅವರಿಗೆ, “ನನ್ನ ತಂದೆಯು ತನ್ನ ಕಾರ್ಯವನ್ನು ಎಂದಿಗೂ ನಿಲ್ಲಿಸುವುದಿಲ್ಲ. ಆದ್ದರಿಂದ ನಾನು ಸಹ ಕಾರ್ಯನಿರತನಾಗಿದ್ದೇನೆ” ಎಂದು ತನ್ನನ್ನು ಪ್ರತಿಪಾದಿಸಿಕೊಂಡನು.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.


ನನ್ನ ಕುರಿಗಳನ್ನು ನನ್ನ ತಂದೆಯೇ ನನಗೆ ಕೊಟ್ಟನು. ಆತನು ಎಲ್ಲರಿಗಿಂತಲೂ ದೊಡ್ಡವನಾಗಿದ್ದಾನೆ. ನನ್ನ ಕುರಿಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕದ್ದುಕೊಳ್ಳಲಾರರು.


ಯೇಸು, “ನನ್ನೊಳಗೆ ದೆವ್ವವಿಲ್ಲ. ನನ್ನ ತಂದೆಗೆ ನಾನು ಗೌರವ ಕೊಡುತ್ತೇನೆ, ಆದರೆ ನೀವು ನನಗೆ ಗೌರವ ಕೊಡುವುದಿಲ್ಲ.


ಯೇಸು ದೇವಾಲಯದ ಒಳಕ್ಕೆ ಹೋದನು. ಅಲ್ಲಿ ಮಾರುತ್ತಿದ್ದ ಮತ್ತು ಕೊಂಡುಕೊಳ್ಳುತ್ತಿದ್ದ ಜನರನ್ನೆಲ್ಲಾ ಆತನು ಹೊರಗೆ ಓಡಿಸಿಬಿಟ್ಟನು; ನಾಣ್ಯ ವಿನಿಮಯ ಮಾಡುತ್ತಿದ್ದವರ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.


“ಅಂತೆಯೇ ಸೇವಕರು ಹೋಗಿ ಆ ಜನರಿಗೆ ತಿಳಿಸಿದರು. ಆದರೆ ಅವರು ಸೇವಕರ ಮಾತಿಗೆ ಕಿವಿಗೊಡಲಿಲ್ಲ. ಒಬ್ಬನು ತನ್ನ ಹೊಲದಲ್ಲಿ ಕೆಲಸ ಮಾಡಲು ಹೊರಟುಹೋದನು. ಬೇರೊಬ್ಬನು ತನ್ನ ವ್ಯಾಪಾರಕ್ಕಾಗಿ ಹೊರಟುಹೋದನು.


ಯೇಸು ಹಗ್ಗದ ಕೆಲವು ತುಂಡುಗಳನ್ನು ತೆಗೆದುಕೊಂಡು ಅವುಗಳಿಂದ ಒಂದು ಚಾವಟಿ ಮಾಡಿ ಆ ಜನರನ್ನು ಮತ್ತು ದನಕುರಿಗಳನ್ನು ಬಲವಂತವಾಗಿ ದೇವಾಲಯದಿಂದ ಹೊರಗಟ್ಟಿದನು. ಯೇಸು ಮೇಜುಗಳನ್ನು ಕೆಡವಿ, ಹಣ ವಿನಿಮಯ ಮಾಡುತ್ತಿದ್ದ ಜನರ ಹಣವನ್ನು ಚೆಲ್ಲಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು