Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:2 - ಪರಿಶುದ್ದ ಬೈಬಲ್‌

2 ಯೇಸು ಮತ್ತು ಆತನ ಶಿಷ್ಯರನ್ನು ಸಹ ಮದುವೆಗೆ ಆಹ್ವಾನಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜುಕ್, ಅನಿ ತ್ಯೆಚ್ಯಾ ಶಿಸಾಕ್ನಿಬಿ ತ್ಯಾ ಲಗ್ನಾಕ್ ಬಲ್ವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:2
30 ತಿಳಿವುಗಳ ಹೋಲಿಕೆ  

ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಗಂಡನು ಬದುಕಿರುವ ತನಕ ಹೆಂಡತಿಯು ಅವನೊಂದಿಗೆ ಬಾಳ್ವೆ ನಡೆಸಬೇಕು. ಆದರೆ ಗಂಡನು ಸತ್ತುಹೋದರೆ, ಆ ಸ್ತ್ರೀಯು ತಾನು ಬಯಸಿದವರನ್ನು ಮದುವೆಯಾಗಲು ಸ್ವತಂತ್ರಳಾಗಿದ್ದಾಳೆ. ಆದರೆ ಅವನು ಪ್ರಭುವನ್ನು ಅನುಸರಿಸುವವನಾಗಿರಬೇಕು.


ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡದಂತಾಯಿತು’ ಎಂದು ಉತ್ತರಕೊಡುವನು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


ಆತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಆತನ ಶಬ್ದ ಕೇಳಿಸುವುದಿಲ್ಲ.


ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ಮದುವೆಯಲ್ಲಿ ಸಾಕಷ್ಟು ದ್ರಾಕ್ಷಾರಸವಿರಲಿಲ್ಲ. ಇದ್ದ ದ್ರಾಕ್ಷಾರಸವೆಲ್ಲಾ ಮುಗಿದುಹೋದಾಗ ಯೇಸುವಿನ ತಾಯಿಯು ಆತನಿಗೆ, “ಅವರಲ್ಲಿ ದ್ರಾಕ್ಷಾರಸವೇ ಇಲ್ಲ” ಎಂದು ತಿಳಿಸಿದಳು.


ಬಳಿಕ ಯೇಸು ಕಪೆರ್ನೌಮ್ ಎಂಬ ಊರಿಗೆ ಹೋದನು. ಯೇಸುವಿನ ತಾಯಿ ಮತ್ತು ಸಹೋದರರು ಹಾಗೂ ಆತನ ಶಿಷ್ಯರು ಆತನೊಡನೆ ಹೋದರು. ಅವರೆಲ್ಲರೂ ಕಪೆರ್ನೌಮ್‌ನಲ್ಲಿ ಕೆಲವು ದಿನ ತಂಗಿದ್ದರು.


“ನಿನ್ನ ಆಲಯದ ಮೇಲಿನ ಅಭಿಮಾನವು ನನ್ನೊಳಗೆ ಬೆಂಕಿಯಂತೆ ಸುಡುತ್ತದೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯವನ್ನು ಯೇಸುವಿನ ಶಿಷ್ಯರು ಆಗ ಜ್ಞಾಪಿಸಿಕೊಂಡರು.


ಯೇಸು ಸತ್ತವರೊಳಗಿಂದ ಎದ್ದುಬಂದಾಗ ಆತನ ಶಿಷ್ಯರು ಆತನ ಈ ಮಾತನ್ನು ಜ್ಞಾಪಿಸಿಕೊಂಡರು. ಅವರು ಪವಿತ್ರ ಗ್ರಂಥವನ್ನು ಮತ್ತು ಆತನು ಹೇಳಿದ ಮಾತುಗಳನ್ನು ನಂಬಿದರು.)


ಇದಾದ ನಂತರ, ಯೇಸು ಮತ್ತು ಆತನ ಶಿಷ್ಯರು ಜುದೇಯ ಪ್ರಾಂತ್ಯಕ್ಕೆ ಹೋದರು. ಅಲ್ಲಿ ಯೇಸು ತನ್ನ ಶಿಷ್ಯರೊಡನೆ ತಂಗಿದ್ದು, ಜನರಿಗೆ ದೀಕ್ಷಾಸ್ನಾನ ಮಾಡಿಸಿದನು.


(ವಾಸ್ತವವಾಗಿ ಜನರಿಗೆ ದೀಕ್ಷಾಸ್ನಾನ ಕೊಟ್ಟದ್ದು ಯೇಸುವಲ್ಲ. ಆತನ ಶಿಷ್ಯರೇ ಜನರಿಗೆ ದೀಕ್ಷಾಸ್ನಾನ ಮಾಡಿಸಿದರು.)


(ಯೇಸುವಿನ ಶಿಷ್ಯರು ಆಹಾರಪದಾರ್ಥವನ್ನು ಕೊಂಡುಕೊಂಡು ಬರಲು ಪಟ್ಟಣದೊಳಗೆ ಹೋಗಿದ್ದಾಗ ಇದು ಸಂಭವಿಸಿತು.)


ಆದ್ದರಿಂದ ಶಿಷ್ಯರು, “ಯಾರಾದರೂ ಆತನಿಗೆ ಮೊದಲೇ ಆಹಾರವನ್ನು ತಂದುಕೊಟ್ಟರೇ?” ಎಂದು ತಮ್ಮತಮ್ಮೊಳಗೆ ಕೇಳತೊಡಗಿದರು.


ಅಂದ್ರೆಯನೆಂಬ ಮತ್ತೊಬ್ಬ ಶಿಷ್ಯನು ಅಲ್ಲಿದ್ದನು. ಅಂದ್ರೆಯನು ಸೀಮೋನ್ ಪೇತ್ರನ ಸಹೋದರ.


ಅವರೆಲ್ಲರೂ ಊಟ ಮಾಡಿ ತೃಪ್ತರಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಉಳಿದುಹೋದ ರೊಟ್ಟಿ ಮತ್ತು ಮೀನುಗಳ ತುಂಡುಗಳನ್ನು ಒಟ್ಟುಗೂಡಿಸಿರಿ. ಯಾವುದನ್ನೂ ಹಾಳುಮಾಡಬೇಡಿ” ಎಂದು ಹೇಳಿದನು.


ಆ ಸಾಯಂಕಾಲ ಯೇಸುವಿನ ಶಿಷ್ಯರು ಸರೋವರಕ್ಕೆ (ಗಲಿಲಾಯ) ಹೋದರು.


ಇದನ್ನು ಕೇಳಿದ ಆತನ ಶಿಷ್ಯರಲ್ಲಿ ಅನೇಕರು, “ಈ ಉಪದೇಶವು ಕಠಿಣವಾಗಿದೆ. ಇದನ್ನು ಯಾರು ಗ್ರಹಿಸಿಕೊಳ್ಳಬಲ್ಲರು?” ಎಂದರು.


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತನ ಹಿಂಬಾಲಕರಲ್ಲಿ ಅನೇಕರು ಆತನನ್ನು ತೊರೆದುಬಿಟ್ಟರು. ಅವರು ಆತನನ್ನು ಹಿಂಬಾಲಿಸಲಿಲ್ಲ.


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ನನ್ನನ್ನು ಬಿಟ್ಟುಹೋಗಬೇಕೆಂದಿರುವಿರಾ?” ಎಂದು ಕೇಳಿದನು.


ಬಳಿಕ ಯೇಸು, “ನಾನು ಆರಿಸಿಕೊಂಡ ಹನ್ನೆರಡು ಮಂದಿ ನೀವೇ. ಆದರೆ ನಿಮ್ಮಲ್ಲಿರುವ ಒಬ್ಬನು ಸೈತಾನನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟನು.


ಯೇಸು ಸಿಮೋನನ ಮಗನಾದ ಇಸ್ಕರಿಯೋತ ಯೂದನ ಬಗ್ಗೆ ಮಾತಾಡುತ್ತಿದ್ದನು. ಯೂದನು ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾಗಿದ್ದನು. ಆದರೆ ಮುಂದೆ ಯೇಸುವಿಗೆ ದ್ರೋಹ ಮಾಡಿದ ವ್ಯಕ್ತಿ ಇವನೇ.


ಆದ್ದರಿಂದ ಯೇಸುವಿನ ಸಹೋದರರು ಆತನಿಗೆ, “ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಆಗ ಅಲ್ಲಿರುವ ನಿನ್ನ ಹಿಂಬಾಲಕರು ನೀನು ಮಾಡುವ ಅದ್ಭುತಕಾರ್ಯಗಳನ್ನು ನೋಡುವರು.


ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.


ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು