Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:13 - ಪರಿಶುದ್ದ ಬೈಬಲ್‌

13 ದೇವದೂತರು ಮರಿಯಳಿಗೆ, “ಅಮ್ಮಾ, ಏಕೆ ಅಳುತ್ತಿರುವೆ?” ಎಂದು ಕೇಳಿದರು. ಮರಿಯಳು, “ನನ್ನ ಪ್ರಭುವಿನ ದೇಹವನ್ನು ಕೆಲವು ಜನರು ತೆಗೆದುಕೊಂಡು ಹೋಗಿದ್ದಾರೆ. ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ಆಕೆಯನ್ನು - ಅಮ್ಮಾ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆ - ನನ್ನ ಸ್ವಾವಿುಯನ್ನು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು ಅವರಿಗೆ, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಕರ್ತನನ್ನು ಅವರು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ತ್ಯಾ ದೆವ್‍ದುತಾನಿ, “ಬಾಯಿ, ತಿಯಾ ಕಶ್ಯಾಕ್ ರಡುಲಾಲೆ?” ಮನುನ್ ತಿಕಾ ಇಚಾರ್‍ಲ್ಯಾನಿ. ತನ್ನಾ ತೆನಿ “ತೆನಿ ಧನಿಯಾಕ್ ಘೆವ್ನ್ ಗೆಲ್ಯಾನಾತ್ ತೆಕಾ ತೆನಿ ಖೈ ಥವ್ಲ್ಯಾನಾತ್ ಮನುನ್ ಮಾಕಾ ಗೊತ್ತ್ ನಾ!” ಮನುನ್‍ ಜಬಾಬ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:13
13 ತಿಳಿವುಗಳ ಹೋಲಿಕೆ  

ಯೇಸು ಆಕೆಯನ್ನು “ಅಮ್ಮಾ ಏಕೆ ಅಳುತ್ತಿರುವೆ? ನೀನು ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಿದನು. ಇವನು ತೋಟವನ್ನು ನೋಡಿಕೊಳ್ಳುವವನಿರಬಹುದೆಂದು ಮರಿಯಳು ಯೋಚಿಸಿಕೊಂಡು ಅವನಿಗೆ, “ಅಯ್ಯಾ, ನೀನು ಯೇಸುವನ್ನು ತೆಗೆದುಕೊಂಡು ಹೋದೆಯಾ? ಆತನನ್ನು ಎಲ್ಲಿಟ್ಟಿರುವೆ, ನನಗೆ ಹೇಳು. ನಾನು ಹೋಗಿ ಆತನನ್ನು ತೆಗೆದು ಕೊಳ್ಳುತ್ತೇನೆ” ಎಂದು ಹೇಳಿದಳು.


ಯೇಸು, “ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯ ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.


ಅವಳ ಗಂಡನಾದ ಎಲ್ಕಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ನಿನಗೆ ಹತ್ತು ಗಂಡುಮಕ್ಕಳಿಗಿಂತಲೂ ಹೆಚ್ಚಾಗಿದ್ದೇನಲ್ಲಾ” ಎಂದು ಹೇಳಿದನು.


ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.


ಸೀಮೋನ್ ಪೇತ್ರನ ಮತ್ತು (ಯೇಸು ಪ್ರೀತಿಸುತ್ತಿದ್ದ) ಮತ್ತೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಅವರು ಸಮಾಧಿಯೊಳಗಿಂದ ಪ್ರಭುವನ್ನು ತೆಗೆದುಕೊಂಡಿದ್ದಾರೆ, ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲ” ಎಂದು ಹೇಳಿದಳು.


ಯೇಸು ತನ್ನ ತಾಯಿಯನ್ನೂ ಅಲ್ಲೇ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು” ಎಂದು ಹೇಳಿದನು.


ಯೇಸು ಅವರಿಗೆ, “ನೀವು ಯಾವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರಿಬ್ಬರು ಅಲ್ಲೇ ನಿಂತರು. ಅವರ ಮುಖಗಳು ಬಹಳ ದುಃಖದಿಂದ ತುಂಬಿಹೋಗಿದ್ದವು.


ಅಳುವ ಸಮಯ, ನಗುವ ಸಮಯ. ಗೋಳಾಡುವ ಸಮಯ, ಕುಣಿದಾಡುವ ಸಮಯ.


ಆದರೆ ಯೆಹೋವನು, “ಅಳುವದನ್ನು ನಿಲ್ಲಿಸು. ಕಣ್ಣಿನಲ್ಲಿ ನೀರು ತುಂಬಿಕೊಳ್ಳಬೇಡ. ನಿನ್ನ ಕೆಲಸಕ್ಕಾಗಿ ನಿನಗೆ ಪ್ರತಿಫಲ ಸಿಕ್ಕುವುದು” ಎಂದು ಹೇಳುವನು. ಇದು ಯೆಹೋವನ ನುಡಿ. “ಇಸ್ರೇಲರು ತಮ್ಮ ಶತ್ರುಗಳ ಪ್ರದೇಶದಿಂದ ಹಿಂತಿರುಗಿ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು