Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:17 - ಪರಿಶುದ್ದ ಬೈಬಲ್‌

17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ಜೆಜುನ್ ತಿಕಾ, “ಮಾಕಾ ಧರುನ್ ಘೆವ್ನ್ ರಾವ್ನಕ್ಕೊ, ಮಿಯಾ ಅಜುನ್ ಮಾಜ್ಯಾ ಬಾಬಾಕ್ಡೆ ಫಾಟಿ ಪರ್ತುನ್ ಜಾವ್ಕ್ ನಾ, ಖರೆ ಜಾ ಅನಿ ಮಾಜ್ಯಾ ಭಾವಾಕ್ನಿ ಮಿಯಾ ಮಾಜ್ಯಾ ಬಾಬಾ ಅನಿ ತುಮ್ಚ್ಯಾ ಬಾಬಾಕ್ಡೆ, ಮಾಜ್ಯಾ ದೆವಾ ಅನಿ ತುಮ್ಚ್ಯಾ ದೆವಾಕ್ಡೆ ಪರ್ತುನ್ ಜಾವ್ಕ್ ಲಾಗ್ಲಾ ಮನುನ್ ಸಾಂಗ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:17
48 ತಿಳಿವುಗಳ ಹೋಲಿಕೆ  

ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.


ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.


ನೀವೆಲ್ಲರೂ ಕ್ರಿಸ್ತನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರಿಂದ ಕ್ರಿಸ್ತನನ್ನೇ ಧರಿಸಿಕೊಂಡಿರಿ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದರ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರೆಂಬುದನ್ನು ಇದು ತೋರಿಸುತ್ತದೆ.


“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.


ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.


“ನಾನು ನಿಮ್ಮ ತಂದೆಯಾಗಿರುವೆನು ಮತ್ತು ನೀವು ನನ್ನ ಪುತ್ರಪುತ್ರಿಯರಾಗುವಿರಿ ಎನ್ನುತ್ತಾನೆ ಸರ್ವಶಕ್ತನಾದ ಪ್ರಭುವು.”


ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.


ನೀತಿಯುಳ್ಳ ತಂದೆಯೇ, ಈ ಲೋಕವು ನಿನ್ನನ್ನು ತಿಳಿದಿಲ್ಲ. ಆದರೆ ನಾನು ನಿನ್ನನ್ನು ತಿಳಿದಿರುವೆ ಮತ್ತು ನೀನೇ ನನ್ನನ್ನು ಕಳುಹಿಸಿರುವೆ ಎಂಬುದು ಈ ಜನರಿಗೆ ತಿಳಿದಿದೆ.


ಬೇಗನೆ ಹೋಗಿ ಆತನ ಶಿಷ್ಯರಿಗೆ, ‘ಯೇಸು ಪುನರುತ್ಥಾನ ಹೊಂದಿದ್ದಾನೆ. ಆತನು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ನಿಮಗಿಂತ ಮುಂಚೆಯೇ ಆತನು ಅಲ್ಲಿರುತ್ತಾನೆ. ನೀವು ಆತನನ್ನು ಅಲ್ಲಿ ನೋಡುತ್ತೀರಿ’ ಎಂದು ಹೇಳಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ” ಎಂದನು.


ಪರಲೋಕದಲ್ಲಿರುವ ನನ್ನ ತಂದೆ ಇಚ್ಛಿಸುವಂಥವುಗಳನ್ನು ಮಾಡುವವನೇ ನನ್ನ ನಿಜವಾದ ಸಹೋದರ, ಸಹೋದರಿ ಮತ್ತು ತಾಯಿ” ಎಂದು ಹೇಳಿದನು.


ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.


ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ: ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; ಅವರ ಹೃದಯದ ಮೇಲೆ ಬರೆಯುವೆನು; ನಾನು ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.


ಬಳಿಕ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿಡು. ನನ್ನ ಕೈಗಳನ್ನು ನೋಡು. ನಿನ್ನ ಕೈಯನ್ನು ನನ್ನ ಪಕ್ಕೆಯಲ್ಲಿ ಹಾಕು. ಸಂಶಯಪಡದೆ ನಂಬುವವನಾಗು” ಎಂದು ಹೇಳಿದನು.


ಈಗ, ತಂದೆಯೇ, ನೀನು ನಿನ್ನ ಸನ್ನಿಧಿಯಲ್ಲಿ ನನ್ನನ್ನು ಮಹಿಮೆಪಡಿಸು. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು ನಾನು ನಿನ್ನೊಂದಿಗೆ ಹೊಂದಿದ್ದ ಮಹಿಮೆಯನ್ನು ನನಗೆ ಕೊಡು.


‘ನಾನು ಹೊರಟುಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ’ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.


ನನ್ನ ತಂದೆಯ ಮನೆಯಲ್ಲಿ ಅನೇಕ ಕೋಣೆಗಳಿವೆ. ಅದು ಸತ್ಯವಲ್ಲದಿದ್ದರೆ, ನಾನು ನಿಮಗೆ ಹೇಳುತ್ತಿರಲಿಲ್ಲ. ನಾನು ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಲು ಅಲ್ಲಿಗೆ ಹೋಗುತ್ತಿದ್ದೇನೆ.


ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು.


ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.


ಆಗ ಯೇಸು, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿರುತ್ತೇನೆ. ಬಳಿಕ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತೇನೆ.


ಕೈಚೀಲವನ್ನಾಗಲಿ ಹಣವನ್ನಾಗಲಿ ಅಥವಾ ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ನಿಂತುಕೊಂಡು ಜನರೊಡನೆ ಮಾತನಾಡಬೇಡಿ.


ನನ್ನ ಪವಿತ್ರಗುಡಾರ ಅವರೊಂದಿಗಿರುವದು. ಹೌದು, ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.


ಆಗ ನಾನು ನಿಮ್ಮ ಪೂರ್ವಿಕರಿಗೆ ಕೊಟ್ಟ ದೇಶದಲ್ಲಿ ನೀವು ಬಾಳುವಿರಿ. ನೀನು ನನ್ನ ಜನರಾಗುವಿರಿ. ನಾನು ನಿಮ್ಮ ದೇವರಾಗಿರುವೆನು.”


ಇಸ್ರೇಲರು ಮತ್ತು ಯೆಹೂದ್ಯರು ನನ್ನ ಭಕ್ತರಾಗಿರುವರು, ನಾನು ಅವರ ದೇವರಾಗಿರುವೆನು.


ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು.


ಆಗ ಆ ಕುಷ್ಠರೋಗಿಗಳು, “ನಾವು ತಪ್ಪು ಮಾಡುತ್ತಿದ್ದೇವೆ! ಈ ದಿನ ನಮಗೆ ಶುಭವಾರ್ತೆ ಸಿಕ್ಕಿದೆ. ಆದರೆ ನಾವು ನಿಶಬ್ಧದಿಂದ ಇದ್ದೇವೆ. ಸೂರ್ಯನು ಮೇಲಕ್ಕೇರಿ ಬರುವವರೆಗೆ ನಾವು ಸುಮ್ಮನಿದ್ದರೆ ನಮ್ಮನ್ನು ದಂಡಿಸಲಾಗುವುದು. ಈಗ ನಾವು ರಾಜನ ಮನೆಗೆ ಹೋಗಿ ಅಲ್ಲಿ ವಾಸಿಸುವ ಜನರಿಗೆ ಇದನ್ನು ತಿಳಿಸೋಣ” ಎಂದು ಮಾತನಾಡಿಕೊಂಡರು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!


ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. ದೇವರೇ, ನನ್ನ ದೇವರೇ, ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ನಿನ್ನ ನಾಮದ ಕುರಿತು ನನ್ನ ಸಹೋದರರಿಗೆ ಹೇಳುವೆನು; ಮಹಾಸಭೆಯಲ್ಲಿ ನಿನ್ನನ್ನು ಸುತ್ತಿಸುವೆನು.


ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.


ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು