Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:17 - ಪರಿಶುದ್ದ ಬೈಬಲ್‌

17 ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಿನ್ವೆಪಟಿ ಜೆಜುನ್, “ಸಿಮಾವ್ ಜುವಾಂವಾಚ್ಯಾ ಲೆಕಾ, ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ಜೆಜುನ್ ತಿನ್ವೆಪಟಿ “ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮನುನ್ ಇಚಾರ್‍ತಾನಾ ಪೆದ್ರುಕ್ ಜೆಜಾರ್ ದಿಸ್ಲೊ, ಅನಿ ತೆನಿ “ಧನಿಯಾ ತುಕಾ ಸಗ್ಳೆ ಗೊತ್ತ್ ಹಾಯ್, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾ ಗೊತ್ತ್ ಹಾಯ್!” ಮನುನ್ ಮಟ್ಲ್ಯಾನ್ ಜೆಜುನ್ ತೆಕಾ,“ಮಾಜ್ಯಾ ಬಕ್ರ್ಯಾಕ್ನಿ ಚಾರ್‍ವು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:17
40 ತಿಳಿವುಗಳ ಹೋಲಿಕೆ  

ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.


ಪೇತ್ರನು ಇದನ್ನು ಹೇಳಿದ ಮೇಲೆ ಕೋಳಿ ಎರಡನೇ ಸಾರಿ ಕೂಗಿತು. “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ, ನೀನು ನನ್ನನ್ನು ತಿಳಿದಿಲ್ಲವೆಂದು ಮೂರು ಸಾರಿ ಹೇಳುವೆ” ಎಂದು ಯೇಸು ತನಗೆ ಹೇಳಿದ್ದನ್ನು ಪೇತ್ರನು ಜ್ಞಾಪಿಸಿಕೊಂಡು ಬಹಳ ದುಃಖದಿಂದ ಗೋಳಾಡಿದನು.


ನಿನಗೆ ಎಲ್ಲಾ ಸಂಗತಿಗಳು ತಿಳಿದಿವೆಯೆಂದು ನಮಗೆ ಈಗ ತಿಳಿಯಿತು. ಒಬ್ಬನು ಪ್ರಶ್ನೆಯನ್ನು ಕೇಳುವುದಕ್ಕಿಂತ ಮೊದಲೇ ನೀನು ಅವನ ಪ್ರಶ್ನೆಗೆ ಉತ್ತರ ಕೊಡಬಲ್ಲೆ. ಇದರಿಂದಾಗಿ, ನೀನು ದೇವರಿಂದ ಬಂದವನೆಂದು ನಾವು ನಂಬುತ್ತೇವೆ” ಎಂದು ಹೇಳಿದರು.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ.


ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


“ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ಆಜ್ಞಾಪಿಸುವವುಗಳನ್ನು ಮಾಡುವಿರಿ.


ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.


ನನ್ನ ಸ್ನೇಹಿತರೇ, ನಾನು ನಿಮಗೆ ಬರೆಯುತ್ತಿರುವ ಎರಡನೆ ಪತ್ರವಿದು. ನಿಮ್ಮ ಯಥಾರ್ಥವಾದ ಮನಸ್ಸು ಮತ್ತೆ ನೆನಪು ಮಾಡಿಕೊಳ್ಳಲಿ ಎಂದು ನಾನು ಈ ಎರಡು ಪತ್ರಗಳನ್ನು ಬರೆದಿದ್ದೇನೆ.


ಇದು ನಿಮ್ಮನ್ನು ಬಹಳ ಸಂತೋಷಗೊಳಿಸುತ್ತದೆ. ಆದರೆ ಈಗ ಸ್ವಲ್ಪಕಾಲ ಅನೇಕ ವಿಧವಾದ ತೊಂದರೆಗಳು ನಿಮ್ಮಲ್ಲಿ ದುಃಖವನ್ನು ಉಂಟುಮಾಡಬಹುದು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!”


ಆದರೆ ಪೇತ್ರನು ಮತ್ತೆ, “ಇಲ್ಲ, ನಾನು ಆತನೊಂದಿಗೆ ಇರಲಿಲ್ಲ!” ಎಂದನು. ಆ ಕೂಡಲೇ ಕೋಳಿ ಕೂಗಿತು.


ತನಗೆ ಸಂಭವಿಸಲಿದ್ದ ಪ್ರತಿಯೊಂದೂ ಯೇಸುವಿಗೆ ತಿಳಿದಿತ್ತು. ಆತನು ಹೊರಗೆ ಹೋಗಿ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು.


ಬಡವರು ಯಾವಾಗಲೂ ನಿಮ್ಮೊಂದಿಗಿರುತ್ತಾರೆ ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ” ಎಂದು ಉತ್ತರಕೊಟ್ಟನು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


ತಾನು ಜನರನ್ನು ಶಿಕ್ಷಿಸಬೇಕೆಂಬುದು ಯೆಹೋವನ ಬಯಕೆಯೇನಲ್ಲ. ತಾನು ಜನರನ್ನು ವ್ಯಸನಗೊಳಿಸಬೇಕೆಂಬುದು ಆತನಿಗೆ ಇಷ್ಟವಿಲ್ಲ.


ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.


ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


“ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು.


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ನಾನು ನಿನಗೆ ಇನ್ನೇನು ಹೇಳಲಿ? ನಿನ್ನ ಜೊತೆ ಹೇಗೆ ಮಾತನಾಡುತ್ತಲೇ ಇರಲಿ? ನನ್ನ ಒಡೆಯನಾದ ಯೆಹೋವನೇ, ನಾನು ನಿನ್ನ ಸೇವಕನೆಂಬುದು ನಿನಗೆ ತಿಳಿದಿದೆ.


ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನೀನು ಯೌವನಸ್ಥನಾಗಿದ್ದಾಗ, ನಡುಕಟ್ಟಿಕೊಂಡು ನಿನಗೆ ಇಷ್ಟವಾದ ಕಡೆಗೆಲ್ಲಾ ಹೋದೆ. ಆದರೆ ನೀನು ಮುದುಕನಾದಾಗ, ನಿನ್ನ ಕೈಗಳನ್ನು ಚಾಚುವೆ ಮತ್ತು ಬೇರೊಬ್ಬನು ನಿನ್ನ ನಡುಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ನಡೆಸಿಕೊಂಡು ಹೋಗುವನು” ಎಂದು ಹೇಳಿದನು.


ನೀನು ನನಗೆಷ್ಟೋ ಸಹಾಯ ಮಾಡಿರುವೆ. ನಾನು ಕೇವಲ ನಿನ್ನ ಸೇವಕನಷ್ಟೇ.


ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ” ಎಂದನು.


“ಹೀಗೆ ಮೂರು ಸಲವಾಯಿತು. ಬಳಿಕ ಆ ಇಡೀ ವಸ್ತುವನ್ನು ಆಕಾಶಕ್ಕೆ ಹಿಂತೆಗೆದುಕೊಳ್ಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು