Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:25 - ಪರಿಶುದ್ದ ಬೈಬಲ್‌

25 ಯೇಸು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವುಗಳಲ್ಲಿ ಪ್ರತಿಯೊಂದನ್ನೂ ಬರೆಯುವುದಾದರೆ, ಬರೆಯಲ್ಪಡುವ ಪುಸ್ತಕಗಳನ್ನು ಇಡೀ ಪ್ರಪಂಚವೇ ಹಿಡಿಸಲಾರದೆಂದು ನಾನು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶಃ ಲೋಕವೇ ಹಿಡಿಸಲಾರದೆಂದು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಯೇಸು ಮಾಡಿದ್ದು ಇನ್ನೂ ಬಹಳವಿದೆ; ಅದನ್ನೆಲ್ಲಾ ಒಂದೊಂದಾಗಿ ಬರೆಯುವದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸದೆ ಹೋದೀತೆಂದು ನಾನು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಯೇಸು ಮಾಡಿದ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನು ಒಂದೊಂದಾಗಿ ಬರೆಯುವುದಾದರೆ, ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಸಾಕಾಗುವುದಿಲ್ಲ ಎಂದು ನಾನು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆಜುನ್ ಕರಲ್ಲಿ ಕಾಮಾ, ಅನಿ ಲೈ ಹಾತ್ ತಿ ಸಗ್ಳಿ ಎಕಾಚ್ಯಾ ಮಾನಾ ಎಕ್ ಲಿವ್ಲ್ಯಾರ್, ತಿ ಲಿವ್‍ಸಾಟಿ ಪಾಜೆ ಹೊಲ್ಲಿ ಪುಸ್ತಕಾ ಹ್ಯಾ ಜಗಾಕುಚ್ ಅಟ್ಪಿನಸಿ ಹೊತ್ತಿ ಕಾಯ್ಕಿ ಮನುನ್ ಮಾಕಾ ದಿಸ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:25
12 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.


ನಿನ್ನ ಒಳ್ಳೆಯತನವನ್ನೂ ರಕ್ಷಣೆಯನ್ನೂ ನಾನು ಹಗಲೆಲ್ಲಾ ಹೇಳುತ್ತಲೇ ಇರುವೆನು. ಅವು ವರ್ಣಿಸಲಸಾಧ್ಯವಾಗಿವೆ.


ದೇವರ ಶಕ್ತಿಯುತವಾದ ಕಾರ್ಯಗಳಲ್ಲಿ ಇವು ಕೇವಲ ಒಂದು ಚಿಕ್ಕ ಭಾಗವಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಧ್ವನಿಯನ್ನು ಮಾತ್ರ ಕೇಳಿದ್ದೇವೆ. ಆತನ ಶಕ್ತಿಯ ಗರ್ಜನೆಯನ್ನು ಯಾರು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲರು?”


ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ಆದ್ದರಿಂದ ಮಗನೇ, ಆ ಉಪದೇಶಗಳನ್ನು ಅಧ್ಯಯನ ಮಾಡು, ಆದರೆ ಬೇರೆ ಪುಸ್ತಕಗಳ ಬಗ್ಗೆ ಎಚ್ಚರಿಕೆಯಿಂದಿರು. ಜನರು ಯಾವಾಗಲೂ ಪುಸ್ತಕಗಳನ್ನು ಬರೆಯುತ್ತಿರುತ್ತಾರೆ; ಅತಿಯಾದ ಅಧ್ಯಯನವು ನಿನ್ನನ್ನು ತುಂಬ ಆಯಾಸಗೊಳಿಸುತ್ತದೆ.


ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.


ಹೌದು, ಐಶ್ವರ್ಯವಂತನು ದೇವರ ರಾಜ್ಯ ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂದು ನಾನು ನಿಮಗೆ ಹೇಳುತ್ತೇನೆ” ಎಂದನು.


ಅಲ್ಲಿದ್ದ ಕೆಲವು ಜನರು, ಯೇಸು ಮಾಡಿದ ಈ ಕಾರ್ಯವನ್ನು ನೋಡಿದ್ದರು. ಈ ಜನರೇ ಉಳಿದ ಜನರಿಗೆಲ್ಲರಿಗೂ ನಡೆದ ಸಂಗತಿಯನ್ನು ಅಂದರೆ ದೆವ್ವದಿಂದ ಪೀಡಿತನಾಗಿದ್ದವನಿಗೂ ದೆವ್ವಗಳಿಗೂ ಮತ್ತು ಹಂದಿಗಳಿಗೂ ಸಂಭವಿಸಿದ್ದನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು