Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:17 - ಪರಿಶುದ್ದ ಬೈಬಲ್‌

17 ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ದೆವಾನ್ ಅಪ್ನಾಚ್ಯಾ ಲೆಕಾಕ್ ಹ್ಯಾ ಜಗಾತ್ ಇಚಾರ್‍ನಿ ಕರುಕ್ ಮನುನ್ ಧಾಡುನ್ ದಿವ್ಕ್ ನಾ ಜಗಾಚೊ ರಾಕನ್ದಾರ್ ಹೊವ್‍ಸಾಟಿ ಮನುನ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:17
36 ತಿಳಿವುಗಳ ಹೋಲಿಕೆ  

ದೇವರು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿದ್ದನ್ನು ನಾವು ನೋಡಿದ್ದೇವೆ. ನಾವು ಈಗ ಜನರಿಗೆ ಹೇಳುತ್ತಿರುವುದು ಅದನ್ನೇ.


ಮನುಷ್ಯಕುಮಾರನು ಬಂದದ್ದು ತಪ್ಪಿಹೋದ ಜನರನ್ನು ಹುಡುಕಿ ರಕ್ಷಿಸುವುದಕ್ಕಾಗಿಯಷ್ಟೇ” ಎಂದು ಹೇಳಿದನು.


“ತಂದೆಯೇ ನನ್ನನ್ನು ಕಳುಹಿಸಿದನು. ತಂದೆಯು ಜೀವಸ್ವರೂಪನಾಗಿದ್ದಾನೆ. ನಾನು ತಂದೆಯಿಂದಲೇ ಜೀವಿಸುತ್ತೇನೆ. ಆದ್ದರಿಂದ ನನ್ನನ್ನು ತಿನ್ನುವವನು ನನ್ನಿಂದಲೇ ಜೀವಿಸುವನು.


ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.


ಯೇಸು, “ದೇವರು ಕಳುಹಿಸಿದಾತನನ್ನು ನೀವು ನಂಬಬೇಕು. ಈ ಕಾರ್ಯವನ್ನೇ ದೇವರು ನಿಮ್ಮಿಂದ ಅಪೇಕ್ಷಿಸುತ್ತಾನೆ” ಎಂದು ಉತ್ತರಕೊಟ್ಟನು.


ಬಳಿಕ ಯೇಸು ಮತ್ತೆ, “ಶಾಂತಿಯು ನಿಮ್ಮೊಂದಿಗಿರಲಿ! ತಂದೆಯು ನನ್ನನ್ನು ಕಳುಹಿಸಿದನು. ಅದೇ ರೀತಿಯಲ್ಲಿ, ಈಗ ನಾನೂ ನಿಮ್ಮನ್ನು ಕಳುಹಿಸುತ್ತೇನೆ” ಎಂದು ಹೇಳಿದನು.


ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.


ಆದರೆ ನಾನು ಆತನನ್ನು ಬಲ್ಲೆನು. ನಾನು ಆತನಿಂದಲೇ ಬಂದೆನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ನಾನು ತಂದೆಯ ಮುಂದೆ ನಿಂತುಕೊಂಡು ನಿಮ್ಮನ್ನು ತಪ್ಪಿತಸ್ಥರೆಂಬುದಾಗಿ ಹೇಳುತ್ತೇನೆಂದು ಯೋಚಿಸಬೇಡಿರಿ. ನಿಮ್ಮನ್ನು ರಕ್ಷಿಸುತ್ತಾನೆಂದು ನೀವು ನಿರೀಕ್ಷಿಸಿಕೊಂಡಿರುವ ಮೋಶೆಯೇ ನಿಮ್ಮ ಮೇಲೆ ದೂರು ಹೇಳುವನು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಯೇಸು ಆ ಯೆಹೂದ್ಯರಿಗೆ, “ದೇವರು ನಿಜವಾಗಿಯೂ ನಿಮ್ಮ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ನಾನು ದೇವರಿಂದ ಬಂದು ಈಗ ಇಲ್ಲಿದ್ದೇನೆ. ನಾನು ಬಂದದ್ದು ನನ್ನ ಸ್ವಂತ ಅಧಿಕಾರದಿಂದಲ್ಲ. ದೇವರೇ ನನ್ನನ್ನು ಕಳುಹಿಸಿದನು.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.


ತಂದೆಯೇ ನನ್ನನ್ನು ಪ್ರತಿಷ್ಠಿಸಿ ಈ ಲೋಕಕ್ಕೆ ಕಳುಹಿಸಿಕೊಟ್ಟಿರುವುದರಿಂದ ನಾನು ದೇವರ ಮಗನು ಎಂದು ಹೇಳಿದ್ದಕ್ಕೆ ನೀವು ನನ್ನನ್ನು ದೇವದೂಷಣೆ ಮಾಡುವವನೆಂದು ಹೇಳುವುದೇಕೆ?


“ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ.


ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.


ತಂದೆಯ ಉಪದೇಶವು ನಿಮ್ಮಲ್ಲಿ ನೆಲೆಸಿಲ್ಲ. ಏಕೆಂದರೆ ತಂದೆಯು ಕಳುಹಿಸಿರುವಾತನನ್ನು ನೀವು ನಂಬುವುದಿಲ್ಲ.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.


ಬಳಿಕ ಯೇಸು ಮತ್ತು ಆತನ ಶಿಷ್ಯರು ಇನ್ನೊಂದು ಪಟ್ಟಣಕ್ಕೆ ಹೋದರು.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ನಾನು ಪರಲೋಕದಿಂದ ಇಳಿದು ಬಂದದ್ದು ದೇವರ ಚಿತ್ತಕ್ಕನುಸಾರವಾಗಿ ಮಾಡುವುದಕ್ಕಾಗಿಯೇ ಹೊರತು ನನ್ನ ಚಿತ್ತಕ್ಕನುಸಾರವಾಗಿಯಲ್ಲ.


ಆ ಸ್ತ್ರೀಯು, “ಸ್ವಾಮೀ, ಅವರಲ್ಲಿ ಯಾರೂ ನನಗೆ ತೀರ್ಪು ನೀಡಲಿಲ್ಲ” ಎಂದು ಉತ್ತರಕೊಟ್ಟಳು. ಯೇಸು ಆಕೆಗೆ, “ಆದ್ದರಿಂದ ನಾನು ಸಹ ನಿನಗೆ ತೀರ್ಪು ನೀಡುವುದಿಲ್ಲ. ಈಗ ನೀನು ಹೋಗಬಹುದು, ಆದರೆ ಇನ್ನು ಮುಂದೆ ಪಾಪ ಮಾಡಬೇಡ” ಎಂದು ಹೇಳಿದನು.


ನೀನು ನನ್ನನ್ನು ಈ ಲೋಕಕ್ಕೆ ಕಳುಹಿಸಿದಂತೆ ನಾನೂ ಇವರನ್ನು ಈ ಲೋಕಕ್ಕೆ ಕಳುಹಿಸಿದ್ದೇನೆ.


ನಾನು ಅವರಲ್ಲಿ ಇರುವೆನು ಮತ್ತು ನೀನು ನನ್ನಲ್ಲಿರುವೆ. ಆದ್ದರಿಂದ ಅವರು ಸಂಪೂರ್ಣವಾಗಿ ಒಂದಾಗಿರುವರು. ನೀನೇ ನನ್ನನ್ನು ಕಳುಹಿಸಿರುವುದಾಗಿ ಮತ್ತು ನೀನು ನನ್ನನ್ನು ಪ್ರೀತಿಸಿದಂತೆಯೇ ಈ ಜನರನ್ನೂ ಪ್ರೀತಿಸಿರುವುದಾಗಿ ಈ ಲೋಕವು ಆಗ ತಿಳಿದುಕೊಳ್ಳುವುದು.


ನೀತಿಯುಳ್ಳ ತಂದೆಯೇ, ಈ ಲೋಕವು ನಿನ್ನನ್ನು ತಿಳಿದಿಲ್ಲ. ಆದರೆ ನಾನು ನಿನ್ನನ್ನು ತಿಳಿದಿರುವೆ ಮತ್ತು ನೀನೇ ನನ್ನನ್ನು ಕಳುಹಿಸಿರುವೆ ಎಂಬುದು ಈ ಜನರಿಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು