Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:31 - ಪರಿಶುದ್ದ ಬೈಬಲ್‌

31 “ಮೇಲಿನಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. ಈ ಲೋಕದ ವ್ಯಕ್ತಿಯು ಈ ಲೋಕಕ್ಕೆ ಸೇರಿದವನಾಗಿದ್ದಾನೆ. ಅವನು ಈ ಲೋಕದಲ್ಲಿನ ಸಂಗತಿಗಳ ಬಗ್ಗೆ ಮಾತಾಡುತ್ತಾನೆ. ಆದರೆ ಪರಲೋಕದಿಂದ ಬರುವ ಒಬ್ಬನು ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮೇಲಣಿಂದ ಬರುವವನು ಎಲ್ಲರ ಮೇಲೆ ಇದ್ದಾನೆ; ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕದ ಮಾತನ್ನು ಆಡುತ್ತಾನೆ; ಪರಲೋಕದಿಂದ ಬರುವವನು ಎಲ್ಲರ ಮೇಲೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಮೇಲಿನಿಂದ ಬರುವವರೇ ಎಲ್ಲರಿಗಿಂತಲೂ ಮೇಲಾದವರು, ಭೂಲೋಕದವನಾದರೋ ಭೂಮಿಗೆ ಸೇರಿದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವವರು ಎಲ್ಲವುಗಳಿಗಿಂತಲೂ ಮೇಲಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜೊ ಕೊನ್ ವೈನಾ ಯೆತಾ ತೊ ಸಗ್ಳ್ಯಾಂಚ್ಯಾನ್ಕಿ ಮೊಟೊ, ಜೊ ಕೊನ್ ಹ್ಯಾ ಜಿಮ್ನಿಕ್ ಸಮಂದ್ ಪಡಲ್ಲೊ ಹಾಯ್, ತೊ ಹ್ಯಾ ಜಿಮ್ನಿ ವೈಲೊಚ್, ಅನಿ ಹ್ಯಾ ಜಿಮ್ನಿ ವೈಲ್ಯಾ ವಿಶಯಾತುಚ್ ತೊ ಬೊಲ್ತಾ, ಖರೆ ಜೊ ಸರ್ಗಾವೈನಾ, ಯೆಲಾ ತೊ ಸಗ್ಳ್ಯಾಂಚ್ಯಾನ್ಕಿ ವೈಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:31
22 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನೀವು ಕೆಳಗಿನವರಾಗಿದ್ದೀರಿ. ನಾನಾದರೋ ಮೇಲಿನವನು. ನೀವು ಈ ಲೋಕದವರಾಗಿದ್ದೀರಿ. ಆದರೆ ನಾನು ಈ ಲೋಕದವನಲ್ಲ.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.


ದೇವರ ರೊಟ್ಟಿ ಯಾವುದು? ಪರಲೋಕದಿಂದ ಇಳಿದುಬಂದು ಈ ಲೋಕಕ್ಕಾಗಿ ಜೀವವನ್ನು ಕೊಡುವಾತನೇ ದೇವರು ಕೊಡುವ ರೊಟ್ಟಿ” ಎಂದು ಹೇಳಿದನು.


ಆ ಜನರು (ಸುಳ್ಳುಬೋಧಕರು) ಈ ಲೋಕಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಅವರು ಹೇಳುವುದೆಲ್ಲವೂ ಈ ಲೋಕಕ್ಕೆ ಸೇರಿವೆ. ಅವರು ಏನೇ ಹೇಳಿದರೂ ಲೋಕವು ಕೇಳುತ್ತದೆ.


ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.


ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ನನ್ನ ನಂತರ ಬರುವವನು ಆತನೇ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಎಂದು ಹೇಳಿದನು.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


ಮೊದಲನೆ ಒಡಂಬಡಿಕೆಯಲ್ಲಿ ಆರಾಧನೆಯ ನಿಯಮಗಳಿದ್ದವು. ಅದರಲ್ಲಿ ಮಾನವನಿರ್ಮಿತವಾದ ಆರಾಧನಾ ಸ್ಥಳವಿತ್ತು.


‘ನನ್ನ ನಂತರ ಒಬ್ಬ ವ್ಯಕ್ತಿಯು ಬರುವನು. ಆತನು ನನಗಿಂತಲೂ ದೊಡ್ಡವನು. ಏಕೆಂದರೆ ಆತನು ನನಗಿಂತಲೂ ಮೊದಲೇ ಇದ್ದವನು ಮತ್ತು ಯಾವಾಗಲೂ ಇದ್ದವನು’ ಎಂದು ನಾನು ಹೇಳುತ್ತಿದ್ದುದು ಈತನ ವಿಷಯವಾಗಿಯೇ.


ಯೋಹಾನನು ಆತನ ಬಗ್ಗೆ ಜನರಿಗೆ ತಿಳಿಸುತ್ತಾ, “‘ನನ್ನ ನಂತರ ಬರುವ ಒಬ್ಬನು ನನಗಿಂತಲೂ ಶ್ರೇಷ್ಠನಾಗಿದ್ದಾನೆ. ಆತನು ನನಗಿಂತ ಮೊದಲೇ ಜೀವಿಸುತ್ತಿದ್ದನು’ ಎಂದು ನಾನು ಹೇಳಿದಾಗ ಈತನ ಬಗ್ಗೆಯೇ ಮಾತಾಡುತ್ತಿದ್ದೆನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ಆತನು (ಯೇಸು) ವೃದ್ಧಿಯಾಗಬೇಕು ಮತ್ತು ನಾನು ಕಡಿಮೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು